Homeಅಂತರಾಷ್ಟ್ರೀಯಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

- Advertisement -
- Advertisement -

ಒಮೈಕ್ರಾನ್ ಪ್ರಸರಣವನ್ನು ತಡೆಯಲು ಲಾಕ್‌ಡೌನ್ ಹೇರುವುದನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಲಾಕ್‌ಡೌನ್‌ ತುಂಬಾ ದುಬಾರಿಯಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಭಿಪ್ರಾಯಪಟ್ಟಿದೆ. ಹೊಸ ಕೊರೊನಾ ರೂಪಾಂತರವಾದ ಒಮೈಕ್ರಾನ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ನಂತರ ಭಾರತ, ಶ್ರೀಲಂಕಾ, ಯುಎಸ್, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಯುಕೆ ಸೇರಿದಂತೆ 24 ದೇಶಗಳಲ್ಲಿ ಹರಡಿದೆ.

ಸಧ್ಯಕ್ಕೆ ದೊರಕಿದ ಪುರಾವೆಗಳ ಪ್ರಕಾರ ಒಮೈಕ್ರಾನ್‌‌ ರೂಪಾಂತರವು ವೇಗವಾಗಿ ಪ್ರಸರಣವಾಗುತ್ತದೆ ಮತ್ತು ಲಸಿಕೆ ಪಡೆದುಕೊಂಡವರ ಮೇಲೆಯು ಹರಡುವ ಸಂಭವವಿರುತ್ತದೆ ಎಂದು ಕಂಡುಬಂದಿದೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಒಮೈಕ್ರಾನ್‌ನ ಪ್ರಸರಣ, ತೀವ್ರತೆ, ಮರುಸೋಂಕಿನ ಅಪಾಯ ಮತ್ತು ಪ್ರತಿರಕ್ಷಣೆ ಪಡೆದವರ ಮೇಲೆ ಕೂಡಾ ಹಿಡಿತ ಸಾಧಿಸುವ ವೈರಸ್‌ನ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಆದಾಗ್ಯೂ, “ಪ್ರಸ್ತುತ ಲಭ್ಯವಿರುವ ಲಸಿಕೆಗಳು ತೀವ್ರ ರೋಗ ಮತ್ತು ಸಾವಿನ ವಿರುದ್ಧ ರಕ್ಷಣೆ ನೀಡುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ” ಎಂದು WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಯಾವುದೇ ಹೊಸ ರೂಪಾಂತರದ ಆಗಮನ ಮತ್ತು ಅಸ್ತಿತ್ವದಲ್ಲಿರುವ ವೈರಸ್ ಮತ್ತು ಅದರ ರೂಪಾಂತರಗಳ ಪ್ರಸರಣವನ್ನು ತ್ವರಿತವಾಗಿ ಪತ್ತೆಹಚ್ಚಲು ಕಣ್ಗಾವಲು ಹೆಚ್ಚು ಮಾಡಬೇಕು. ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವುದರ ಕಡೆಗೆ ನಮ್ಮ ಗಮನವನ್ನು ಮುಂದುವರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ಅಮೆರಿಕಾ ಮತ್ತು ಯುಕೆ ಸೇರಿದಂತೆ ಹಲವು ದೇಶಗಳು ಹೊಸ ರೂಪಾಂತರದ ಸುದ್ದಿಯ ನಂತರ ಹಲವಾರು ಆಫ್ರಿಕನ್ ದೇಶಗಳ ಪ್ರಯಾಣಿಕರಿಗೆ ಪ್ರಯಾಣ ನಿಷೇಧ ಅಥವಾ ಕ್ವಾರಂಟೈನ್‌ಗಳನ್ನು ವಿಧಿಸಿವೆ. ಆದರೆ ಈ ಪ್ರಯಾಣ ನಿಷೇಧಗಳು ಅಂತರಾಷ್ಟ್ರೀಯ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಡಾ. ಪೂನಮ್‌ ಸಿಂಗ್ ಹೇಳಿದ್ದಾರೆ. ಈ ರೀತಿಯ ನಿಷೇಧಗಳು ಜೀವನ ಮತ್ತು ಜೀವನೋಪಾಯದ ಮೇಲೆ ಹೆಚ್ಚಿನ ಹೊರೆ ಆಗುತ್ತದೆ. ಇಂತಹ ನಿಷೇಧಗಳು ಸಾಂಕ್ರಾಮಿಕ ಸಮಯದಲ್ಲಿ ಜಾಗತಿಕ ಆರೋಗ್ಯ ಪ್ರಯತ್ನಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

“ವೈರಸ್ ಪ್ರಸರಣವನ್ನು ತಡೆಗಟ್ಟಲು ಲಾಕ್‌ಡೌನ್ ಹೇರುವ ಆಯ್ಕೆಯು ಪರಿಣಾಮಕಾರಿಯಾಗಿದ್ದರೂ, ಇದು ಅತ್ಯಂತ ದುಬಾರಿ ಅಸ್ತ್ರವಾಗಿ. ಇದನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು. ನಾವು ವೈರಸ್ ಮತ್ತು ಅದರ ರೂಪಾಂತರಗಳನ್ನು ಹರಡಲು ಹಾಗೂ ಅದು ಮತ್ತಷ್ಟು ರೂಪಾಂತರಗೊಂಡು ನಮಗೆ ಸವಾಲು ಹಾಕಲು ಬಿಡಬಾರದು. ವೈರಸ್ ಹರಡುವಿಕೆಯನ್ನು ಮೊಟಕುಗೊಳಿಸಲು ನಾವು ಎಲ್ಲವನ್ನೂ ಮಾಡಬೇಕಾಗಿದೆ. ಈ ಸಾಂಕ್ರಾಮಿಕ ರೋಗವು ತುಂಬಾ ದೀರ್ಘವಾಗಿದೆ. ಇದು ಅಮೂಲ್ಯವಾದ ಮಾನವ ಮತ್ತು ಇತರ ಸಂಪನ್ಮೂಲಗಳನ್ನು ಬರಿದುಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಹೊಸ ರೂಪಾಂತರವನ್ನು ಎದುರಿಸಲು ಮಾಸ್ಕ್‌ಗಳ ಬಳಕೆ, ದೈಹಿಕ ಅಂತರ ಕಾಪಾಡುವುದು, ಸಭೆಗಳನ್ನು ತಪ್ಪಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಹೊರೆಯನ್ನು ತಪ್ಪಿಸಲು ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಸಮಯೋಚಿತವಾಗಿ ಹೆಚ್ಚಿಸಲು ಸಿದ್ಧರಾಗಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...