Homeಅಂತರಾಷ್ಟ್ರೀಯಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

- Advertisement -
- Advertisement -

ಒಮೈಕ್ರಾನ್ ಪ್ರಸರಣವನ್ನು ತಡೆಯಲು ಲಾಕ್‌ಡೌನ್ ಹೇರುವುದನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಲಾಕ್‌ಡೌನ್‌ ತುಂಬಾ ದುಬಾರಿಯಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಭಿಪ್ರಾಯಪಟ್ಟಿದೆ. ಹೊಸ ಕೊರೊನಾ ರೂಪಾಂತರವಾದ ಒಮೈಕ್ರಾನ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ನಂತರ ಭಾರತ, ಶ್ರೀಲಂಕಾ, ಯುಎಸ್, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಯುಕೆ ಸೇರಿದಂತೆ 24 ದೇಶಗಳಲ್ಲಿ ಹರಡಿದೆ.

ಸಧ್ಯಕ್ಕೆ ದೊರಕಿದ ಪುರಾವೆಗಳ ಪ್ರಕಾರ ಒಮೈಕ್ರಾನ್‌‌ ರೂಪಾಂತರವು ವೇಗವಾಗಿ ಪ್ರಸರಣವಾಗುತ್ತದೆ ಮತ್ತು ಲಸಿಕೆ ಪಡೆದುಕೊಂಡವರ ಮೇಲೆಯು ಹರಡುವ ಸಂಭವವಿರುತ್ತದೆ ಎಂದು ಕಂಡುಬಂದಿದೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಒಮೈಕ್ರಾನ್‌ನ ಪ್ರಸರಣ, ತೀವ್ರತೆ, ಮರುಸೋಂಕಿನ ಅಪಾಯ ಮತ್ತು ಪ್ರತಿರಕ್ಷಣೆ ಪಡೆದವರ ಮೇಲೆ ಕೂಡಾ ಹಿಡಿತ ಸಾಧಿಸುವ ವೈರಸ್‌ನ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಆದಾಗ್ಯೂ, “ಪ್ರಸ್ತುತ ಲಭ್ಯವಿರುವ ಲಸಿಕೆಗಳು ತೀವ್ರ ರೋಗ ಮತ್ತು ಸಾವಿನ ವಿರುದ್ಧ ರಕ್ಷಣೆ ನೀಡುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ” ಎಂದು WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಯಾವುದೇ ಹೊಸ ರೂಪಾಂತರದ ಆಗಮನ ಮತ್ತು ಅಸ್ತಿತ್ವದಲ್ಲಿರುವ ವೈರಸ್ ಮತ್ತು ಅದರ ರೂಪಾಂತರಗಳ ಪ್ರಸರಣವನ್ನು ತ್ವರಿತವಾಗಿ ಪತ್ತೆಹಚ್ಚಲು ಕಣ್ಗಾವಲು ಹೆಚ್ಚು ಮಾಡಬೇಕು. ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವುದರ ಕಡೆಗೆ ನಮ್ಮ ಗಮನವನ್ನು ಮುಂದುವರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ಅಮೆರಿಕಾ ಮತ್ತು ಯುಕೆ ಸೇರಿದಂತೆ ಹಲವು ದೇಶಗಳು ಹೊಸ ರೂಪಾಂತರದ ಸುದ್ದಿಯ ನಂತರ ಹಲವಾರು ಆಫ್ರಿಕನ್ ದೇಶಗಳ ಪ್ರಯಾಣಿಕರಿಗೆ ಪ್ರಯಾಣ ನಿಷೇಧ ಅಥವಾ ಕ್ವಾರಂಟೈನ್‌ಗಳನ್ನು ವಿಧಿಸಿವೆ. ಆದರೆ ಈ ಪ್ರಯಾಣ ನಿಷೇಧಗಳು ಅಂತರಾಷ್ಟ್ರೀಯ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಡಾ. ಪೂನಮ್‌ ಸಿಂಗ್ ಹೇಳಿದ್ದಾರೆ. ಈ ರೀತಿಯ ನಿಷೇಧಗಳು ಜೀವನ ಮತ್ತು ಜೀವನೋಪಾಯದ ಮೇಲೆ ಹೆಚ್ಚಿನ ಹೊರೆ ಆಗುತ್ತದೆ. ಇಂತಹ ನಿಷೇಧಗಳು ಸಾಂಕ್ರಾಮಿಕ ಸಮಯದಲ್ಲಿ ಜಾಗತಿಕ ಆರೋಗ್ಯ ಪ್ರಯತ್ನಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

“ವೈರಸ್ ಪ್ರಸರಣವನ್ನು ತಡೆಗಟ್ಟಲು ಲಾಕ್‌ಡೌನ್ ಹೇರುವ ಆಯ್ಕೆಯು ಪರಿಣಾಮಕಾರಿಯಾಗಿದ್ದರೂ, ಇದು ಅತ್ಯಂತ ದುಬಾರಿ ಅಸ್ತ್ರವಾಗಿ. ಇದನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು. ನಾವು ವೈರಸ್ ಮತ್ತು ಅದರ ರೂಪಾಂತರಗಳನ್ನು ಹರಡಲು ಹಾಗೂ ಅದು ಮತ್ತಷ್ಟು ರೂಪಾಂತರಗೊಂಡು ನಮಗೆ ಸವಾಲು ಹಾಕಲು ಬಿಡಬಾರದು. ವೈರಸ್ ಹರಡುವಿಕೆಯನ್ನು ಮೊಟಕುಗೊಳಿಸಲು ನಾವು ಎಲ್ಲವನ್ನೂ ಮಾಡಬೇಕಾಗಿದೆ. ಈ ಸಾಂಕ್ರಾಮಿಕ ರೋಗವು ತುಂಬಾ ದೀರ್ಘವಾಗಿದೆ. ಇದು ಅಮೂಲ್ಯವಾದ ಮಾನವ ಮತ್ತು ಇತರ ಸಂಪನ್ಮೂಲಗಳನ್ನು ಬರಿದುಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಹೊಸ ರೂಪಾಂತರವನ್ನು ಎದುರಿಸಲು ಮಾಸ್ಕ್‌ಗಳ ಬಳಕೆ, ದೈಹಿಕ ಅಂತರ ಕಾಪಾಡುವುದು, ಸಭೆಗಳನ್ನು ತಪ್ಪಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಹೊರೆಯನ್ನು ತಪ್ಪಿಸಲು ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಸಮಯೋಚಿತವಾಗಿ ಹೆಚ್ಚಿಸಲು ಸಿದ್ಧರಾಗಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....