Homeಅಂತರಾಷ್ಟ್ರೀಯಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

- Advertisement -
- Advertisement -

ಒಮೈಕ್ರಾನ್ ಪ್ರಸರಣವನ್ನು ತಡೆಯಲು ಲಾಕ್‌ಡೌನ್ ಹೇರುವುದನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಲಾಕ್‌ಡೌನ್‌ ತುಂಬಾ ದುಬಾರಿಯಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಭಿಪ್ರಾಯಪಟ್ಟಿದೆ. ಹೊಸ ಕೊರೊನಾ ರೂಪಾಂತರವಾದ ಒಮೈಕ್ರಾನ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ನಂತರ ಭಾರತ, ಶ್ರೀಲಂಕಾ, ಯುಎಸ್, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಯುಕೆ ಸೇರಿದಂತೆ 24 ದೇಶಗಳಲ್ಲಿ ಹರಡಿದೆ.

ಸಧ್ಯಕ್ಕೆ ದೊರಕಿದ ಪುರಾವೆಗಳ ಪ್ರಕಾರ ಒಮೈಕ್ರಾನ್‌‌ ರೂಪಾಂತರವು ವೇಗವಾಗಿ ಪ್ರಸರಣವಾಗುತ್ತದೆ ಮತ್ತು ಲಸಿಕೆ ಪಡೆದುಕೊಂಡವರ ಮೇಲೆಯು ಹರಡುವ ಸಂಭವವಿರುತ್ತದೆ ಎಂದು ಕಂಡುಬಂದಿದೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಒಮೈಕ್ರಾನ್‌ನ ಪ್ರಸರಣ, ತೀವ್ರತೆ, ಮರುಸೋಂಕಿನ ಅಪಾಯ ಮತ್ತು ಪ್ರತಿರಕ್ಷಣೆ ಪಡೆದವರ ಮೇಲೆ ಕೂಡಾ ಹಿಡಿತ ಸಾಧಿಸುವ ವೈರಸ್‌ನ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಆದಾಗ್ಯೂ, “ಪ್ರಸ್ತುತ ಲಭ್ಯವಿರುವ ಲಸಿಕೆಗಳು ತೀವ್ರ ರೋಗ ಮತ್ತು ಸಾವಿನ ವಿರುದ್ಧ ರಕ್ಷಣೆ ನೀಡುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ” ಎಂದು WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಯಾವುದೇ ಹೊಸ ರೂಪಾಂತರದ ಆಗಮನ ಮತ್ತು ಅಸ್ತಿತ್ವದಲ್ಲಿರುವ ವೈರಸ್ ಮತ್ತು ಅದರ ರೂಪಾಂತರಗಳ ಪ್ರಸರಣವನ್ನು ತ್ವರಿತವಾಗಿ ಪತ್ತೆಹಚ್ಚಲು ಕಣ್ಗಾವಲು ಹೆಚ್ಚು ಮಾಡಬೇಕು. ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವುದರ ಕಡೆಗೆ ನಮ್ಮ ಗಮನವನ್ನು ಮುಂದುವರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ಅಮೆರಿಕಾ ಮತ್ತು ಯುಕೆ ಸೇರಿದಂತೆ ಹಲವು ದೇಶಗಳು ಹೊಸ ರೂಪಾಂತರದ ಸುದ್ದಿಯ ನಂತರ ಹಲವಾರು ಆಫ್ರಿಕನ್ ದೇಶಗಳ ಪ್ರಯಾಣಿಕರಿಗೆ ಪ್ರಯಾಣ ನಿಷೇಧ ಅಥವಾ ಕ್ವಾರಂಟೈನ್‌ಗಳನ್ನು ವಿಧಿಸಿವೆ. ಆದರೆ ಈ ಪ್ರಯಾಣ ನಿಷೇಧಗಳು ಅಂತರಾಷ್ಟ್ರೀಯ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಡಾ. ಪೂನಮ್‌ ಸಿಂಗ್ ಹೇಳಿದ್ದಾರೆ. ಈ ರೀತಿಯ ನಿಷೇಧಗಳು ಜೀವನ ಮತ್ತು ಜೀವನೋಪಾಯದ ಮೇಲೆ ಹೆಚ್ಚಿನ ಹೊರೆ ಆಗುತ್ತದೆ. ಇಂತಹ ನಿಷೇಧಗಳು ಸಾಂಕ್ರಾಮಿಕ ಸಮಯದಲ್ಲಿ ಜಾಗತಿಕ ಆರೋಗ್ಯ ಪ್ರಯತ್ನಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

“ವೈರಸ್ ಪ್ರಸರಣವನ್ನು ತಡೆಗಟ್ಟಲು ಲಾಕ್‌ಡೌನ್ ಹೇರುವ ಆಯ್ಕೆಯು ಪರಿಣಾಮಕಾರಿಯಾಗಿದ್ದರೂ, ಇದು ಅತ್ಯಂತ ದುಬಾರಿ ಅಸ್ತ್ರವಾಗಿ. ಇದನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು. ನಾವು ವೈರಸ್ ಮತ್ತು ಅದರ ರೂಪಾಂತರಗಳನ್ನು ಹರಡಲು ಹಾಗೂ ಅದು ಮತ್ತಷ್ಟು ರೂಪಾಂತರಗೊಂಡು ನಮಗೆ ಸವಾಲು ಹಾಕಲು ಬಿಡಬಾರದು. ವೈರಸ್ ಹರಡುವಿಕೆಯನ್ನು ಮೊಟಕುಗೊಳಿಸಲು ನಾವು ಎಲ್ಲವನ್ನೂ ಮಾಡಬೇಕಾಗಿದೆ. ಈ ಸಾಂಕ್ರಾಮಿಕ ರೋಗವು ತುಂಬಾ ದೀರ್ಘವಾಗಿದೆ. ಇದು ಅಮೂಲ್ಯವಾದ ಮಾನವ ಮತ್ತು ಇತರ ಸಂಪನ್ಮೂಲಗಳನ್ನು ಬರಿದುಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಹೊಸ ರೂಪಾಂತರವನ್ನು ಎದುರಿಸಲು ಮಾಸ್ಕ್‌ಗಳ ಬಳಕೆ, ದೈಹಿಕ ಅಂತರ ಕಾಪಾಡುವುದು, ಸಭೆಗಳನ್ನು ತಪ್ಪಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಹೊರೆಯನ್ನು ತಪ್ಪಿಸಲು ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಸಮಯೋಚಿತವಾಗಿ ಹೆಚ್ಚಿಸಲು ಸಿದ್ಧರಾಗಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...