Homeಅಂತರಾಷ್ಟ್ರೀಯಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

- Advertisement -
- Advertisement -

ಒಮೈಕ್ರಾನ್ ಪ್ರಸರಣವನ್ನು ತಡೆಯಲು ಲಾಕ್‌ಡೌನ್ ಹೇರುವುದನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಲಾಕ್‌ಡೌನ್‌ ತುಂಬಾ ದುಬಾರಿಯಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಭಿಪ್ರಾಯಪಟ್ಟಿದೆ. ಹೊಸ ಕೊರೊನಾ ರೂಪಾಂತರವಾದ ಒಮೈಕ್ರಾನ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ನಂತರ ಭಾರತ, ಶ್ರೀಲಂಕಾ, ಯುಎಸ್, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಯುಕೆ ಸೇರಿದಂತೆ 24 ದೇಶಗಳಲ್ಲಿ ಹರಡಿದೆ.

ಸಧ್ಯಕ್ಕೆ ದೊರಕಿದ ಪುರಾವೆಗಳ ಪ್ರಕಾರ ಒಮೈಕ್ರಾನ್‌‌ ರೂಪಾಂತರವು ವೇಗವಾಗಿ ಪ್ರಸರಣವಾಗುತ್ತದೆ ಮತ್ತು ಲಸಿಕೆ ಪಡೆದುಕೊಂಡವರ ಮೇಲೆಯು ಹರಡುವ ಸಂಭವವಿರುತ್ತದೆ ಎಂದು ಕಂಡುಬಂದಿದೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಒಮೈಕ್ರಾನ್‌ನ ಪ್ರಸರಣ, ತೀವ್ರತೆ, ಮರುಸೋಂಕಿನ ಅಪಾಯ ಮತ್ತು ಪ್ರತಿರಕ್ಷಣೆ ಪಡೆದವರ ಮೇಲೆ ಕೂಡಾ ಹಿಡಿತ ಸಾಧಿಸುವ ವೈರಸ್‌ನ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಆದಾಗ್ಯೂ, “ಪ್ರಸ್ತುತ ಲಭ್ಯವಿರುವ ಲಸಿಕೆಗಳು ತೀವ್ರ ರೋಗ ಮತ್ತು ಸಾವಿನ ವಿರುದ್ಧ ರಕ್ಷಣೆ ನೀಡುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ” ಎಂದು WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಯಾವುದೇ ಹೊಸ ರೂಪಾಂತರದ ಆಗಮನ ಮತ್ತು ಅಸ್ತಿತ್ವದಲ್ಲಿರುವ ವೈರಸ್ ಮತ್ತು ಅದರ ರೂಪಾಂತರಗಳ ಪ್ರಸರಣವನ್ನು ತ್ವರಿತವಾಗಿ ಪತ್ತೆಹಚ್ಚಲು ಕಣ್ಗಾವಲು ಹೆಚ್ಚು ಮಾಡಬೇಕು. ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವುದರ ಕಡೆಗೆ ನಮ್ಮ ಗಮನವನ್ನು ಮುಂದುವರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ಅಮೆರಿಕಾ ಮತ್ತು ಯುಕೆ ಸೇರಿದಂತೆ ಹಲವು ದೇಶಗಳು ಹೊಸ ರೂಪಾಂತರದ ಸುದ್ದಿಯ ನಂತರ ಹಲವಾರು ಆಫ್ರಿಕನ್ ದೇಶಗಳ ಪ್ರಯಾಣಿಕರಿಗೆ ಪ್ರಯಾಣ ನಿಷೇಧ ಅಥವಾ ಕ್ವಾರಂಟೈನ್‌ಗಳನ್ನು ವಿಧಿಸಿವೆ. ಆದರೆ ಈ ಪ್ರಯಾಣ ನಿಷೇಧಗಳು ಅಂತರಾಷ್ಟ್ರೀಯ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಡಾ. ಪೂನಮ್‌ ಸಿಂಗ್ ಹೇಳಿದ್ದಾರೆ. ಈ ರೀತಿಯ ನಿಷೇಧಗಳು ಜೀವನ ಮತ್ತು ಜೀವನೋಪಾಯದ ಮೇಲೆ ಹೆಚ್ಚಿನ ಹೊರೆ ಆಗುತ್ತದೆ. ಇಂತಹ ನಿಷೇಧಗಳು ಸಾಂಕ್ರಾಮಿಕ ಸಮಯದಲ್ಲಿ ಜಾಗತಿಕ ಆರೋಗ್ಯ ಪ್ರಯತ್ನಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

“ವೈರಸ್ ಪ್ರಸರಣವನ್ನು ತಡೆಗಟ್ಟಲು ಲಾಕ್‌ಡೌನ್ ಹೇರುವ ಆಯ್ಕೆಯು ಪರಿಣಾಮಕಾರಿಯಾಗಿದ್ದರೂ, ಇದು ಅತ್ಯಂತ ದುಬಾರಿ ಅಸ್ತ್ರವಾಗಿ. ಇದನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು. ನಾವು ವೈರಸ್ ಮತ್ತು ಅದರ ರೂಪಾಂತರಗಳನ್ನು ಹರಡಲು ಹಾಗೂ ಅದು ಮತ್ತಷ್ಟು ರೂಪಾಂತರಗೊಂಡು ನಮಗೆ ಸವಾಲು ಹಾಕಲು ಬಿಡಬಾರದು. ವೈರಸ್ ಹರಡುವಿಕೆಯನ್ನು ಮೊಟಕುಗೊಳಿಸಲು ನಾವು ಎಲ್ಲವನ್ನೂ ಮಾಡಬೇಕಾಗಿದೆ. ಈ ಸಾಂಕ್ರಾಮಿಕ ರೋಗವು ತುಂಬಾ ದೀರ್ಘವಾಗಿದೆ. ಇದು ಅಮೂಲ್ಯವಾದ ಮಾನವ ಮತ್ತು ಇತರ ಸಂಪನ್ಮೂಲಗಳನ್ನು ಬರಿದುಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಹೊಸ ರೂಪಾಂತರವನ್ನು ಎದುರಿಸಲು ಮಾಸ್ಕ್‌ಗಳ ಬಳಕೆ, ದೈಹಿಕ ಅಂತರ ಕಾಪಾಡುವುದು, ಸಭೆಗಳನ್ನು ತಪ್ಪಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಹೊರೆಯನ್ನು ತಪ್ಪಿಸಲು ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಸಮಯೋಚಿತವಾಗಿ ಹೆಚ್ಚಿಸಲು ಸಿದ್ಧರಾಗಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...