Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ.

- Advertisement -
- Advertisement -

ಕೊರೋನಾ ಪುರಾಣ, ವರ್ಣಕಾರಣ ಕಾಂಡ

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ -ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...