Homeಕರ್ನಾಟಕಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

- Advertisement -
- Advertisement -

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಕೊರಿಯರ್ ಸೇವೆಗಳು, ನಿರ್ಮಾಣ ಕಾರ್ಯಗಳು ಮತ್ತು ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆಗೆ ಏಪ್ರಿಲ್ 23 ರಿಂದ ರಾಜ್ಯ ಸರ್ಕಾರ ಅನುಮತಿಸಿದೆ.

“ಸಾರ್ವಜನಿಕರಿಗೆ ತೊಂದರೆಗಳನ್ನು ತಗ್ಗಿಸಲು, ಆಯ್ದ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ, ಇದು 2020 ರ ಏಪ್ರಿಲ್ 23 ರಿಂದ ಜಾರಿಗೆ ಬರಲಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರವು ಗುರುತಿಸಿರುವ ಕೊರೊನಾ ಪ್ರಕರಣ ಹೆಚ್ಚಿರುವ ವಲಯಗಳ (ಕಂಟೈನ್‌ಮೆಂಟ್‌) ಹೊರಗೆ ಮಾತ್ರ ಆಯ್ದ ಈ ಚಟುವಟಿಕೆಗಳಿಗೆ ಅವಕಾಶವಿರುತ್ತದೆ.

ಆದರೆ ಸಾರ್ವಜನಿಕ ಸಾರಿಗೆಯನ್ನು ಮೇ 3 ರವರೆಗೆ ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳಿಗೆ ಪಾಸ್ ಹೊಂದಿರುವ ಖಾಸಗಿ ವಾಹನಗಳು ಮತ್ತು ಕೆಲಸದ ಸ್ಥಳಗಳಿಗೆ ಹೋಗಲು ಮತ್ತು ಹಿಂತಿರುಗಲು ಪಾಸ್‌ಗಳೊಂದಿಗೆ ಪ್ರಯಾಣಿಸುವ ಸಿಬ್ಬಂದಿಗೆ ಅವಕಾಶವಿದೆ.

ರಸ್ತೆ ನಿರ್ಮಾಣ, ನೀರಾವರಿ ಯೋಜನೆಗಳು, ಕಟ್ಟಡಗಳು ಮತ್ತು ಎಂಎಸ್‌ಎಂಇಗಳು ಸೇರಿದಂತೆ ಕೈಗಾರಿಕಾ ಕೆಲಸಗಳು ನಡಯಬಹುದು. ಹಾಗೆಯೇ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರ್ಮಿಕರನ್ನು ಹೊರಗಿನಿಂದ ಕರೆತರದೇ ಸ್ಥಳೀಯ ಕಾರ್ಮಿಕರನ್ನು ಬಳಸಿ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.

ಮುಖ್ಯವಾಗಿ ಸ್ವಯಂ ಉದ್ಯೋಗಿಗಳು ನೀಡುವ ಸೇವೆಗಳಾದ, ಎಲೆಕ್ಟ್ರಿಷಿಯನ್, ಐಟಿ ರಿಪೇರಿ, ಕೊಳಾಯಿಗಾರರು, ಆಟೋ ಮೆಕ್ಯಾನಿಕ್ಸ್, ಬಡಗಿಗಳು ಇತ್ಯಾದಿಗಳನ್ನು ಅನುಮತಿಸಲಾಗಿದೆ.

ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳಾದ, ಔಷಧಗಳು, ವೈದ್ಯಕೀಯ ಸಾಧನಗಳು, ಅವುಗಳ ಕಚ್ಚಾ ವಸ್ತುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಹಾರ ಸಂಸ್ಕರಣಾ ಕೈಗಾರಿಕೆಗಳು, ಕಲ್ಲಿದ್ದಲು ಉತ್ಪಾದನೆ (ಗಣಿಗಳು ಮತ್ತು ಖನಿಜ ಉತ್ಪಾದನೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು) ಮತ್ತು ಪ್ಯಾಕೇಜಿಂಗ್ ವಸ್ತುಗಳ ಉತ್ಪಾದನಾ ಘಟಕಗಳನ್ನು ಅನುಮತಿಸಲಾಗಿದೆ.

ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ತುರ್ತಾಗಿ ಪ್ರಾರಂಭಿಸಲು ಭಾರೀ ಒತ್ತಡದಲ್ಲಿದೆ.

ಆದರೆ ವಿಮಾನಗಳು, ಬಸ್ಸುಗಳು, ಮೆಟ್ರೋ ರೈಲು ಮತ್ತು ಅಂತರ-ಜಿಲ್ಲಾ, ಅಂತರ-ರಾಜ್ಯ ಪ್ರಯಾಣವನ್ನು ಮೇ 3 ರವರೆಗೆ ನಿಷೇಧಿಸಲಾಗಿದೆ. ಹೋಟೆಲ್‌ಗಳು, ಬಾರ್‌ಗಳು, ಮಾಲ್‌ಗಳು, ಚಿತ್ರಮಂದಿರಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮುಂತಾದವುಗಳ ಸ್ಥಗಿತವು ಮುಂದುವರೆಯುತ್ತದೆ. ಅದಲ್ಲದೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಕೂಡಾ ಮುಚ್ಚಬೇಕಾಗಿದೆ.


ಇದನ್ನೂ ಓದಿ: ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...