Homeಕರ್ನಾಟಕಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

- Advertisement -
- Advertisement -

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಕೊರಿಯರ್ ಸೇವೆಗಳು, ನಿರ್ಮಾಣ ಕಾರ್ಯಗಳು ಮತ್ತು ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆಗೆ ಏಪ್ರಿಲ್ 23 ರಿಂದ ರಾಜ್ಯ ಸರ್ಕಾರ ಅನುಮತಿಸಿದೆ.

“ಸಾರ್ವಜನಿಕರಿಗೆ ತೊಂದರೆಗಳನ್ನು ತಗ್ಗಿಸಲು, ಆಯ್ದ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ, ಇದು 2020 ರ ಏಪ್ರಿಲ್ 23 ರಿಂದ ಜಾರಿಗೆ ಬರಲಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರವು ಗುರುತಿಸಿರುವ ಕೊರೊನಾ ಪ್ರಕರಣ ಹೆಚ್ಚಿರುವ ವಲಯಗಳ (ಕಂಟೈನ್‌ಮೆಂಟ್‌) ಹೊರಗೆ ಮಾತ್ರ ಆಯ್ದ ಈ ಚಟುವಟಿಕೆಗಳಿಗೆ ಅವಕಾಶವಿರುತ್ತದೆ.

ಆದರೆ ಸಾರ್ವಜನಿಕ ಸಾರಿಗೆಯನ್ನು ಮೇ 3 ರವರೆಗೆ ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳಿಗೆ ಪಾಸ್ ಹೊಂದಿರುವ ಖಾಸಗಿ ವಾಹನಗಳು ಮತ್ತು ಕೆಲಸದ ಸ್ಥಳಗಳಿಗೆ ಹೋಗಲು ಮತ್ತು ಹಿಂತಿರುಗಲು ಪಾಸ್‌ಗಳೊಂದಿಗೆ ಪ್ರಯಾಣಿಸುವ ಸಿಬ್ಬಂದಿಗೆ ಅವಕಾಶವಿದೆ.

ರಸ್ತೆ ನಿರ್ಮಾಣ, ನೀರಾವರಿ ಯೋಜನೆಗಳು, ಕಟ್ಟಡಗಳು ಮತ್ತು ಎಂಎಸ್‌ಎಂಇಗಳು ಸೇರಿದಂತೆ ಕೈಗಾರಿಕಾ ಕೆಲಸಗಳು ನಡಯಬಹುದು. ಹಾಗೆಯೇ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರ್ಮಿಕರನ್ನು ಹೊರಗಿನಿಂದ ಕರೆತರದೇ ಸ್ಥಳೀಯ ಕಾರ್ಮಿಕರನ್ನು ಬಳಸಿ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.

ಮುಖ್ಯವಾಗಿ ಸ್ವಯಂ ಉದ್ಯೋಗಿಗಳು ನೀಡುವ ಸೇವೆಗಳಾದ, ಎಲೆಕ್ಟ್ರಿಷಿಯನ್, ಐಟಿ ರಿಪೇರಿ, ಕೊಳಾಯಿಗಾರರು, ಆಟೋ ಮೆಕ್ಯಾನಿಕ್ಸ್, ಬಡಗಿಗಳು ಇತ್ಯಾದಿಗಳನ್ನು ಅನುಮತಿಸಲಾಗಿದೆ.

ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳಾದ, ಔಷಧಗಳು, ವೈದ್ಯಕೀಯ ಸಾಧನಗಳು, ಅವುಗಳ ಕಚ್ಚಾ ವಸ್ತುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಹಾರ ಸಂಸ್ಕರಣಾ ಕೈಗಾರಿಕೆಗಳು, ಕಲ್ಲಿದ್ದಲು ಉತ್ಪಾದನೆ (ಗಣಿಗಳು ಮತ್ತು ಖನಿಜ ಉತ್ಪಾದನೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು) ಮತ್ತು ಪ್ಯಾಕೇಜಿಂಗ್ ವಸ್ತುಗಳ ಉತ್ಪಾದನಾ ಘಟಕಗಳನ್ನು ಅನುಮತಿಸಲಾಗಿದೆ.

ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ತುರ್ತಾಗಿ ಪ್ರಾರಂಭಿಸಲು ಭಾರೀ ಒತ್ತಡದಲ್ಲಿದೆ.

ಆದರೆ ವಿಮಾನಗಳು, ಬಸ್ಸುಗಳು, ಮೆಟ್ರೋ ರೈಲು ಮತ್ತು ಅಂತರ-ಜಿಲ್ಲಾ, ಅಂತರ-ರಾಜ್ಯ ಪ್ರಯಾಣವನ್ನು ಮೇ 3 ರವರೆಗೆ ನಿಷೇಧಿಸಲಾಗಿದೆ. ಹೋಟೆಲ್‌ಗಳು, ಬಾರ್‌ಗಳು, ಮಾಲ್‌ಗಳು, ಚಿತ್ರಮಂದಿರಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮುಂತಾದವುಗಳ ಸ್ಥಗಿತವು ಮುಂದುವರೆಯುತ್ತದೆ. ಅದಲ್ಲದೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಕೂಡಾ ಮುಚ್ಚಬೇಕಾಗಿದೆ.


ಇದನ್ನೂ ಓದಿ: ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...