Homeಕರ್ನಾಟಕಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

- Advertisement -
- Advertisement -

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಕೊರಿಯರ್ ಸೇವೆಗಳು, ನಿರ್ಮಾಣ ಕಾರ್ಯಗಳು ಮತ್ತು ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆಗೆ ಏಪ್ರಿಲ್ 23 ರಿಂದ ರಾಜ್ಯ ಸರ್ಕಾರ ಅನುಮತಿಸಿದೆ.

“ಸಾರ್ವಜನಿಕರಿಗೆ ತೊಂದರೆಗಳನ್ನು ತಗ್ಗಿಸಲು, ಆಯ್ದ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ, ಇದು 2020 ರ ಏಪ್ರಿಲ್ 23 ರಿಂದ ಜಾರಿಗೆ ಬರಲಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರವು ಗುರುತಿಸಿರುವ ಕೊರೊನಾ ಪ್ರಕರಣ ಹೆಚ್ಚಿರುವ ವಲಯಗಳ (ಕಂಟೈನ್‌ಮೆಂಟ್‌) ಹೊರಗೆ ಮಾತ್ರ ಆಯ್ದ ಈ ಚಟುವಟಿಕೆಗಳಿಗೆ ಅವಕಾಶವಿರುತ್ತದೆ.

ಆದರೆ ಸಾರ್ವಜನಿಕ ಸಾರಿಗೆಯನ್ನು ಮೇ 3 ರವರೆಗೆ ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳಿಗೆ ಪಾಸ್ ಹೊಂದಿರುವ ಖಾಸಗಿ ವಾಹನಗಳು ಮತ್ತು ಕೆಲಸದ ಸ್ಥಳಗಳಿಗೆ ಹೋಗಲು ಮತ್ತು ಹಿಂತಿರುಗಲು ಪಾಸ್‌ಗಳೊಂದಿಗೆ ಪ್ರಯಾಣಿಸುವ ಸಿಬ್ಬಂದಿಗೆ ಅವಕಾಶವಿದೆ.

ರಸ್ತೆ ನಿರ್ಮಾಣ, ನೀರಾವರಿ ಯೋಜನೆಗಳು, ಕಟ್ಟಡಗಳು ಮತ್ತು ಎಂಎಸ್‌ಎಂಇಗಳು ಸೇರಿದಂತೆ ಕೈಗಾರಿಕಾ ಕೆಲಸಗಳು ನಡಯಬಹುದು. ಹಾಗೆಯೇ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರ್ಮಿಕರನ್ನು ಹೊರಗಿನಿಂದ ಕರೆತರದೇ ಸ್ಥಳೀಯ ಕಾರ್ಮಿಕರನ್ನು ಬಳಸಿ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.

ಮುಖ್ಯವಾಗಿ ಸ್ವಯಂ ಉದ್ಯೋಗಿಗಳು ನೀಡುವ ಸೇವೆಗಳಾದ, ಎಲೆಕ್ಟ್ರಿಷಿಯನ್, ಐಟಿ ರಿಪೇರಿ, ಕೊಳಾಯಿಗಾರರು, ಆಟೋ ಮೆಕ್ಯಾನಿಕ್ಸ್, ಬಡಗಿಗಳು ಇತ್ಯಾದಿಗಳನ್ನು ಅನುಮತಿಸಲಾಗಿದೆ.

ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳಾದ, ಔಷಧಗಳು, ವೈದ್ಯಕೀಯ ಸಾಧನಗಳು, ಅವುಗಳ ಕಚ್ಚಾ ವಸ್ತುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಹಾರ ಸಂಸ್ಕರಣಾ ಕೈಗಾರಿಕೆಗಳು, ಕಲ್ಲಿದ್ದಲು ಉತ್ಪಾದನೆ (ಗಣಿಗಳು ಮತ್ತು ಖನಿಜ ಉತ್ಪಾದನೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು) ಮತ್ತು ಪ್ಯಾಕೇಜಿಂಗ್ ವಸ್ತುಗಳ ಉತ್ಪಾದನಾ ಘಟಕಗಳನ್ನು ಅನುಮತಿಸಲಾಗಿದೆ.

ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ತುರ್ತಾಗಿ ಪ್ರಾರಂಭಿಸಲು ಭಾರೀ ಒತ್ತಡದಲ್ಲಿದೆ.

ಆದರೆ ವಿಮಾನಗಳು, ಬಸ್ಸುಗಳು, ಮೆಟ್ರೋ ರೈಲು ಮತ್ತು ಅಂತರ-ಜಿಲ್ಲಾ, ಅಂತರ-ರಾಜ್ಯ ಪ್ರಯಾಣವನ್ನು ಮೇ 3 ರವರೆಗೆ ನಿಷೇಧಿಸಲಾಗಿದೆ. ಹೋಟೆಲ್‌ಗಳು, ಬಾರ್‌ಗಳು, ಮಾಲ್‌ಗಳು, ಚಿತ್ರಮಂದಿರಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮುಂತಾದವುಗಳ ಸ್ಥಗಿತವು ಮುಂದುವರೆಯುತ್ತದೆ. ಅದಲ್ಲದೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಕೂಡಾ ಮುಚ್ಚಬೇಕಾಗಿದೆ.


ಇದನ್ನೂ ಓದಿ: ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...