Homeಕರ್ನಾಟಕಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

- Advertisement -
- Advertisement -

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಕೊರಿಯರ್ ಸೇವೆಗಳು, ನಿರ್ಮಾಣ ಕಾರ್ಯಗಳು ಮತ್ತು ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆಗೆ ಏಪ್ರಿಲ್ 23 ರಿಂದ ರಾಜ್ಯ ಸರ್ಕಾರ ಅನುಮತಿಸಿದೆ.

“ಸಾರ್ವಜನಿಕರಿಗೆ ತೊಂದರೆಗಳನ್ನು ತಗ್ಗಿಸಲು, ಆಯ್ದ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ, ಇದು 2020 ರ ಏಪ್ರಿಲ್ 23 ರಿಂದ ಜಾರಿಗೆ ಬರಲಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರವು ಗುರುತಿಸಿರುವ ಕೊರೊನಾ ಪ್ರಕರಣ ಹೆಚ್ಚಿರುವ ವಲಯಗಳ (ಕಂಟೈನ್‌ಮೆಂಟ್‌) ಹೊರಗೆ ಮಾತ್ರ ಆಯ್ದ ಈ ಚಟುವಟಿಕೆಗಳಿಗೆ ಅವಕಾಶವಿರುತ್ತದೆ.

ಆದರೆ ಸಾರ್ವಜನಿಕ ಸಾರಿಗೆಯನ್ನು ಮೇ 3 ರವರೆಗೆ ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳಿಗೆ ಪಾಸ್ ಹೊಂದಿರುವ ಖಾಸಗಿ ವಾಹನಗಳು ಮತ್ತು ಕೆಲಸದ ಸ್ಥಳಗಳಿಗೆ ಹೋಗಲು ಮತ್ತು ಹಿಂತಿರುಗಲು ಪಾಸ್‌ಗಳೊಂದಿಗೆ ಪ್ರಯಾಣಿಸುವ ಸಿಬ್ಬಂದಿಗೆ ಅವಕಾಶವಿದೆ.

ರಸ್ತೆ ನಿರ್ಮಾಣ, ನೀರಾವರಿ ಯೋಜನೆಗಳು, ಕಟ್ಟಡಗಳು ಮತ್ತು ಎಂಎಸ್‌ಎಂಇಗಳು ಸೇರಿದಂತೆ ಕೈಗಾರಿಕಾ ಕೆಲಸಗಳು ನಡಯಬಹುದು. ಹಾಗೆಯೇ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರ್ಮಿಕರನ್ನು ಹೊರಗಿನಿಂದ ಕರೆತರದೇ ಸ್ಥಳೀಯ ಕಾರ್ಮಿಕರನ್ನು ಬಳಸಿ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.

ಮುಖ್ಯವಾಗಿ ಸ್ವಯಂ ಉದ್ಯೋಗಿಗಳು ನೀಡುವ ಸೇವೆಗಳಾದ, ಎಲೆಕ್ಟ್ರಿಷಿಯನ್, ಐಟಿ ರಿಪೇರಿ, ಕೊಳಾಯಿಗಾರರು, ಆಟೋ ಮೆಕ್ಯಾನಿಕ್ಸ್, ಬಡಗಿಗಳು ಇತ್ಯಾದಿಗಳನ್ನು ಅನುಮತಿಸಲಾಗಿದೆ.

ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳಾದ, ಔಷಧಗಳು, ವೈದ್ಯಕೀಯ ಸಾಧನಗಳು, ಅವುಗಳ ಕಚ್ಚಾ ವಸ್ತುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಹಾರ ಸಂಸ್ಕರಣಾ ಕೈಗಾರಿಕೆಗಳು, ಕಲ್ಲಿದ್ದಲು ಉತ್ಪಾದನೆ (ಗಣಿಗಳು ಮತ್ತು ಖನಿಜ ಉತ್ಪಾದನೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು) ಮತ್ತು ಪ್ಯಾಕೇಜಿಂಗ್ ವಸ್ತುಗಳ ಉತ್ಪಾದನಾ ಘಟಕಗಳನ್ನು ಅನುಮತಿಸಲಾಗಿದೆ.

ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ತುರ್ತಾಗಿ ಪ್ರಾರಂಭಿಸಲು ಭಾರೀ ಒತ್ತಡದಲ್ಲಿದೆ.

ಆದರೆ ವಿಮಾನಗಳು, ಬಸ್ಸುಗಳು, ಮೆಟ್ರೋ ರೈಲು ಮತ್ತು ಅಂತರ-ಜಿಲ್ಲಾ, ಅಂತರ-ರಾಜ್ಯ ಪ್ರಯಾಣವನ್ನು ಮೇ 3 ರವರೆಗೆ ನಿಷೇಧಿಸಲಾಗಿದೆ. ಹೋಟೆಲ್‌ಗಳು, ಬಾರ್‌ಗಳು, ಮಾಲ್‌ಗಳು, ಚಿತ್ರಮಂದಿರಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮುಂತಾದವುಗಳ ಸ್ಥಗಿತವು ಮುಂದುವರೆಯುತ್ತದೆ. ಅದಲ್ಲದೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಕೂಡಾ ಮುಚ್ಚಬೇಕಾಗಿದೆ.


ಇದನ್ನೂ ಓದಿ: ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...