Homeಮುಖಪುಟಲಾಕ್‌ಡೌನ್ - ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

- Advertisement -
- Advertisement -

ಮಸ್ಕಿ ಉಪ ಚುನಾವಣೆಯಲ್ಲಿ ಆಡಳಿರೂಢ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡಿದ್ದರಲ್ಲಿ ಎನ್‌ಆರ್‌ಬಿಸಿ 5ಎ ನೀರಾವರಿ ಕಾಲುವೆ ಹೋರಾಟದ ಪ್ರಧಾನ ಪಾತ್ರವಿದೆ. ಅದಕ್ಕೂ ಮುಖ್ಯವಾಗಿ ದೆಹಲಿಯ ಗಡಿಗಳಲ್ಲಿನ ರೈತರ ಹೋರಾಟವನ್ನು ಬಗ್ಗುಬಡಿಯಲು ಸಾಂಕ್ರಾಮಿಕ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಪ್ರಭುತ್ವಗಳು, ಮುಖ್ಯವಾಗಿ ಮೋದಿ ಸರ್ಕಾರವು ಯತ್ನಿಸುತ್ತಿರುವುದರ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ನೀರಾವರಿ ಹೋರಾಟವೊಂದು ಅಡೆತಡೆಗಳನ್ನು ಮೀರಿ ಮುಂದುವರೆದಿದೆ.

ದೆಹಲಿ ಗಡಿಗಳಲ್ಲಿ ಕಂಡು ಬರುತ್ತಿರುವ ಹೋರಾಟದ ದೃಢತೆ ಮಸ್ಕಿಯಲ್ಲೂ ವ್ಯಕ್ತವಾಗುತ್ತಿದೆ.
ಇವತ್ತು 5-ಎ ನೀರಾವರಿ ಹೋರಾಟ 173ನೇ ದಿನಕ್ಕೆ ತಲುಪಿದೆ. ಚುನಾವಣೆ ನಂತರವೂ ದೃಢವಾಗಿ ಮುನ್ನುಗ್ಗುತ್ತಿದೆ.

ನಿನ್ನೆಯಿಂದ ಲಾಕ್‌ಡೌನ್ ಶುರುವಾದ ನಂತರ ಈ ಪ್ರತಿಭಟನೆ ನಿಲ್ಲಿಸಬೇಕು ಎಂದು ಪೊಲೀಸರು, ಅಂದರೆ ಸರ್ಕಾರ ಒತ್ತಡ ಹೇರುತ್ತಿದೆ. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳುತ್ತಿದ್ದಾರೆ.
ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ರೈತರ ಮತ್ತು ಶ್ರಮಿಕರ ಹೋರಾಟಗಳನ್ನು ಮುರಿಯಲು ಹಲವು ಕುತಂತ್ರಗಳನ್ನು ಮಾಡುತ್ತ ಬರಲಾಗಿದೆ. ಈಗ ಕೊರೋನಾ ಬಿಕ್ಕಟ್ಟು, ಲಾಕ್‌ಡೌನ್‌ಗಳ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪರ ಮತ್ತು ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ನಾವು ಯಾವುದೇ ನಿಯಮ ಉಲ್ಲಂಘಿಸುತ್ತಿಲ್ಲ. ಪ್ರತಿಭಟನೆಯಲ್ಲಿ ಇರುವವರು ಮಾಸ್ಕ್ ಧರಿಸುತ್ತಿದ್ದಾರೆ, ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಜಾಸ್ತಿ ಜನರನ್ನು ಸೇರಿಸದೇ ಇದನ್ನು ಸಾಂಕೇತಿಕ ಪ್ರತಿಭಟನೆಯನ್ನಾಗಿ ಮುಂದುವರೆಸಿದ್ದೇವೆ. ಇದು ಈಗ ಒಂದೇ ಊರಿಗೆ ಸಮೀತವಾಗಿಲ್ಲ. ಪ್ರತಿದಿನ ಬೇರೆಬೇರೆ ಹಳ್ಳಿಗಳಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ’ ಎಂದರು.

ಪ್ರತಿಭಟನೆಯಲ್ಲಿರುವ ಕೆಲವು ಯುವಕರು, ‘ಎಫ್‌ಐಆರ್ ದಾಖಲಿಸತ್ತೇವೆ ಎಂದೆಲ್ಲ ಪೊಲೀಸರು ಹೆದರಿಸುತ್ತಿದ್ದಾರೆ. ನಾವು ಮನೆಮನೆಗೂ ಈ ಹೋರಾಟ ಒಯ್ಯತ್ತೇವೆ. ಜನರು ಮನೆ ಮುಂದೆ ಬ್ಯಾನರ್ ಕಟ್ಟಿ ಅವರ ಮನೆ ಕಟ್ಟೆಗಳ ಮೇಲೆಯೇ ಸಾಂಕೇತಿಕ ಹೋರಾಟ ನಡೆಯುವಂತೆ ಮಾಡುತ್ತೇವೆ’ ಎಂದು ದೃಢನಿರ್ಧಾರ ಮಾಡಿದ್ದಾರೆ.

ಮಸ್ಕಿ ತಾಲೂಕಿನ 58 ಗ್ರಾಮಗಳ ಜಮೀನುಗಳಿಗೆ ಕೃಷ್ಣಾ ನದಿಯ ನೀರು ಒದಗಿಸುವ 5-ಎ ನೀರಾವರಿ ಯೋಜನೆ ಜಾರಿ ಆಗಬೇಕೆಂದು 173 ದಿನಗಳಿಂದ ಸತತ ಹೋರಾಟ ನಡೆದಿದೆ. ಇದು ಈ ಸಲದ ಉಪ ಉನಾವಣೆ ಫಲಿತಾಶದಲ್ಲೂ ಪ್ರಮುಖ ಪರಿಣಾಮ ಬೀರಿದ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋಲು ಉಂಡಿದ್ದಾರೆ.

 * ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...