Homeಮುಖಪುಟಲಾಕ್‌ಡೌನ್ - ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

- Advertisement -
- Advertisement -

ಮಸ್ಕಿ ಉಪ ಚುನಾವಣೆಯಲ್ಲಿ ಆಡಳಿರೂಢ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡಿದ್ದರಲ್ಲಿ ಎನ್‌ಆರ್‌ಬಿಸಿ 5ಎ ನೀರಾವರಿ ಕಾಲುವೆ ಹೋರಾಟದ ಪ್ರಧಾನ ಪಾತ್ರವಿದೆ. ಅದಕ್ಕೂ ಮುಖ್ಯವಾಗಿ ದೆಹಲಿಯ ಗಡಿಗಳಲ್ಲಿನ ರೈತರ ಹೋರಾಟವನ್ನು ಬಗ್ಗುಬಡಿಯಲು ಸಾಂಕ್ರಾಮಿಕ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಪ್ರಭುತ್ವಗಳು, ಮುಖ್ಯವಾಗಿ ಮೋದಿ ಸರ್ಕಾರವು ಯತ್ನಿಸುತ್ತಿರುವುದರ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ನೀರಾವರಿ ಹೋರಾಟವೊಂದು ಅಡೆತಡೆಗಳನ್ನು ಮೀರಿ ಮುಂದುವರೆದಿದೆ.

ದೆಹಲಿ ಗಡಿಗಳಲ್ಲಿ ಕಂಡು ಬರುತ್ತಿರುವ ಹೋರಾಟದ ದೃಢತೆ ಮಸ್ಕಿಯಲ್ಲೂ ವ್ಯಕ್ತವಾಗುತ್ತಿದೆ.
ಇವತ್ತು 5-ಎ ನೀರಾವರಿ ಹೋರಾಟ 173ನೇ ದಿನಕ್ಕೆ ತಲುಪಿದೆ. ಚುನಾವಣೆ ನಂತರವೂ ದೃಢವಾಗಿ ಮುನ್ನುಗ್ಗುತ್ತಿದೆ.

ನಿನ್ನೆಯಿಂದ ಲಾಕ್‌ಡೌನ್ ಶುರುವಾದ ನಂತರ ಈ ಪ್ರತಿಭಟನೆ ನಿಲ್ಲಿಸಬೇಕು ಎಂದು ಪೊಲೀಸರು, ಅಂದರೆ ಸರ್ಕಾರ ಒತ್ತಡ ಹೇರುತ್ತಿದೆ. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳುತ್ತಿದ್ದಾರೆ.
ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ರೈತರ ಮತ್ತು ಶ್ರಮಿಕರ ಹೋರಾಟಗಳನ್ನು ಮುರಿಯಲು ಹಲವು ಕುತಂತ್ರಗಳನ್ನು ಮಾಡುತ್ತ ಬರಲಾಗಿದೆ. ಈಗ ಕೊರೋನಾ ಬಿಕ್ಕಟ್ಟು, ಲಾಕ್‌ಡೌನ್‌ಗಳ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪರ ಮತ್ತು ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ನಾವು ಯಾವುದೇ ನಿಯಮ ಉಲ್ಲಂಘಿಸುತ್ತಿಲ್ಲ. ಪ್ರತಿಭಟನೆಯಲ್ಲಿ ಇರುವವರು ಮಾಸ್ಕ್ ಧರಿಸುತ್ತಿದ್ದಾರೆ, ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಜಾಸ್ತಿ ಜನರನ್ನು ಸೇರಿಸದೇ ಇದನ್ನು ಸಾಂಕೇತಿಕ ಪ್ರತಿಭಟನೆಯನ್ನಾಗಿ ಮುಂದುವರೆಸಿದ್ದೇವೆ. ಇದು ಈಗ ಒಂದೇ ಊರಿಗೆ ಸಮೀತವಾಗಿಲ್ಲ. ಪ್ರತಿದಿನ ಬೇರೆಬೇರೆ ಹಳ್ಳಿಗಳಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ’ ಎಂದರು.

ಪ್ರತಿಭಟನೆಯಲ್ಲಿರುವ ಕೆಲವು ಯುವಕರು, ‘ಎಫ್‌ಐಆರ್ ದಾಖಲಿಸತ್ತೇವೆ ಎಂದೆಲ್ಲ ಪೊಲೀಸರು ಹೆದರಿಸುತ್ತಿದ್ದಾರೆ. ನಾವು ಮನೆಮನೆಗೂ ಈ ಹೋರಾಟ ಒಯ್ಯತ್ತೇವೆ. ಜನರು ಮನೆ ಮುಂದೆ ಬ್ಯಾನರ್ ಕಟ್ಟಿ ಅವರ ಮನೆ ಕಟ್ಟೆಗಳ ಮೇಲೆಯೇ ಸಾಂಕೇತಿಕ ಹೋರಾಟ ನಡೆಯುವಂತೆ ಮಾಡುತ್ತೇವೆ’ ಎಂದು ದೃಢನಿರ್ಧಾರ ಮಾಡಿದ್ದಾರೆ.

ಮಸ್ಕಿ ತಾಲೂಕಿನ 58 ಗ್ರಾಮಗಳ ಜಮೀನುಗಳಿಗೆ ಕೃಷ್ಣಾ ನದಿಯ ನೀರು ಒದಗಿಸುವ 5-ಎ ನೀರಾವರಿ ಯೋಜನೆ ಜಾರಿ ಆಗಬೇಕೆಂದು 173 ದಿನಗಳಿಂದ ಸತತ ಹೋರಾಟ ನಡೆದಿದೆ. ಇದು ಈ ಸಲದ ಉಪ ಉನಾವಣೆ ಫಲಿತಾಶದಲ್ಲೂ ಪ್ರಮುಖ ಪರಿಣಾಮ ಬೀರಿದ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋಲು ಉಂಡಿದ್ದಾರೆ.

 * ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...