Homeಮುಖಪುಟಲಾಕ್‌ಡೌನ್ - ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

- Advertisement -
- Advertisement -

ಮಸ್ಕಿ ಉಪ ಚುನಾವಣೆಯಲ್ಲಿ ಆಡಳಿರೂಢ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡಿದ್ದರಲ್ಲಿ ಎನ್‌ಆರ್‌ಬಿಸಿ 5ಎ ನೀರಾವರಿ ಕಾಲುವೆ ಹೋರಾಟದ ಪ್ರಧಾನ ಪಾತ್ರವಿದೆ. ಅದಕ್ಕೂ ಮುಖ್ಯವಾಗಿ ದೆಹಲಿಯ ಗಡಿಗಳಲ್ಲಿನ ರೈತರ ಹೋರಾಟವನ್ನು ಬಗ್ಗುಬಡಿಯಲು ಸಾಂಕ್ರಾಮಿಕ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಪ್ರಭುತ್ವಗಳು, ಮುಖ್ಯವಾಗಿ ಮೋದಿ ಸರ್ಕಾರವು ಯತ್ನಿಸುತ್ತಿರುವುದರ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ನೀರಾವರಿ ಹೋರಾಟವೊಂದು ಅಡೆತಡೆಗಳನ್ನು ಮೀರಿ ಮುಂದುವರೆದಿದೆ.

ದೆಹಲಿ ಗಡಿಗಳಲ್ಲಿ ಕಂಡು ಬರುತ್ತಿರುವ ಹೋರಾಟದ ದೃಢತೆ ಮಸ್ಕಿಯಲ್ಲೂ ವ್ಯಕ್ತವಾಗುತ್ತಿದೆ.
ಇವತ್ತು 5-ಎ ನೀರಾವರಿ ಹೋರಾಟ 173ನೇ ದಿನಕ್ಕೆ ತಲುಪಿದೆ. ಚುನಾವಣೆ ನಂತರವೂ ದೃಢವಾಗಿ ಮುನ್ನುಗ್ಗುತ್ತಿದೆ.

ನಿನ್ನೆಯಿಂದ ಲಾಕ್‌ಡೌನ್ ಶುರುವಾದ ನಂತರ ಈ ಪ್ರತಿಭಟನೆ ನಿಲ್ಲಿಸಬೇಕು ಎಂದು ಪೊಲೀಸರು, ಅಂದರೆ ಸರ್ಕಾರ ಒತ್ತಡ ಹೇರುತ್ತಿದೆ. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳುತ್ತಿದ್ದಾರೆ.
ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ರೈತರ ಮತ್ತು ಶ್ರಮಿಕರ ಹೋರಾಟಗಳನ್ನು ಮುರಿಯಲು ಹಲವು ಕುತಂತ್ರಗಳನ್ನು ಮಾಡುತ್ತ ಬರಲಾಗಿದೆ. ಈಗ ಕೊರೋನಾ ಬಿಕ್ಕಟ್ಟು, ಲಾಕ್‌ಡೌನ್‌ಗಳ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪರ ಮತ್ತು ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ನಾವು ಯಾವುದೇ ನಿಯಮ ಉಲ್ಲಂಘಿಸುತ್ತಿಲ್ಲ. ಪ್ರತಿಭಟನೆಯಲ್ಲಿ ಇರುವವರು ಮಾಸ್ಕ್ ಧರಿಸುತ್ತಿದ್ದಾರೆ, ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಜಾಸ್ತಿ ಜನರನ್ನು ಸೇರಿಸದೇ ಇದನ್ನು ಸಾಂಕೇತಿಕ ಪ್ರತಿಭಟನೆಯನ್ನಾಗಿ ಮುಂದುವರೆಸಿದ್ದೇವೆ. ಇದು ಈಗ ಒಂದೇ ಊರಿಗೆ ಸಮೀತವಾಗಿಲ್ಲ. ಪ್ರತಿದಿನ ಬೇರೆಬೇರೆ ಹಳ್ಳಿಗಳಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ’ ಎಂದರು.

ಪ್ರತಿಭಟನೆಯಲ್ಲಿರುವ ಕೆಲವು ಯುವಕರು, ‘ಎಫ್‌ಐಆರ್ ದಾಖಲಿಸತ್ತೇವೆ ಎಂದೆಲ್ಲ ಪೊಲೀಸರು ಹೆದರಿಸುತ್ತಿದ್ದಾರೆ. ನಾವು ಮನೆಮನೆಗೂ ಈ ಹೋರಾಟ ಒಯ್ಯತ್ತೇವೆ. ಜನರು ಮನೆ ಮುಂದೆ ಬ್ಯಾನರ್ ಕಟ್ಟಿ ಅವರ ಮನೆ ಕಟ್ಟೆಗಳ ಮೇಲೆಯೇ ಸಾಂಕೇತಿಕ ಹೋರಾಟ ನಡೆಯುವಂತೆ ಮಾಡುತ್ತೇವೆ’ ಎಂದು ದೃಢನಿರ್ಧಾರ ಮಾಡಿದ್ದಾರೆ.

ಮಸ್ಕಿ ತಾಲೂಕಿನ 58 ಗ್ರಾಮಗಳ ಜಮೀನುಗಳಿಗೆ ಕೃಷ್ಣಾ ನದಿಯ ನೀರು ಒದಗಿಸುವ 5-ಎ ನೀರಾವರಿ ಯೋಜನೆ ಜಾರಿ ಆಗಬೇಕೆಂದು 173 ದಿನಗಳಿಂದ ಸತತ ಹೋರಾಟ ನಡೆದಿದೆ. ಇದು ಈ ಸಲದ ಉಪ ಉನಾವಣೆ ಫಲಿತಾಶದಲ್ಲೂ ಪ್ರಮುಖ ಪರಿಣಾಮ ಬೀರಿದ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋಲು ಉಂಡಿದ್ದಾರೆ.

 * ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...