Homeಕರ್ನಾಟಕ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

- Advertisement -
- Advertisement -

ಕೊರೊನಾ ಎರಡನೇ ಅಲೆ ಹಾಗೂ ಸರ್ಕಾರ ಮತ್ತೆ ಹೇರಿರುವ ಲಾಕ್‌ಡೌನ್‌ನಿಂದಾಗಿ ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ, ಈ ಸಮಸ್ಯೆಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು AICCTU ಅಂಗ ಸಂಸ್ಥೆಯಾದ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಬರೆದಿದೆ.

ಪತ್ರದಲ್ಲಿ ಸಂಘವು, “ಕರ್ನಾಟಕದಾದ್ಯಂತ ಲಕ್ಷಾಂತರ ಜನ ಬೀದಿ ವ್ಯಾಪಾರಿಗಳಿದ್ದು ಬೆಂಗಳೂರು ನಗರದಲ್ಲೇ 2 ಲಕ್ಷದಷ್ಟು ಜನ ಬೀದಿ ವ್ಯಾಪಾರವನ್ನು ಜೀವನೋಪಾಯವನ್ನಾಗಿ ಆಧರಿಸಿದ್ದಾರೆ. ಬೀದಿ ವ್ಯಾಪಾರವು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ನೀಡುವುದಲ್ಲದೆ, ಲಕ್ಷಾಂತರ ಕಲಿಕೆ ಇಲ್ಲದೆ, ಶಕ್ತಿ ಇಲ್ಲದೆ, ಅಂಗಡಿ ಸ್ಥಾಪಿಸಲು ಬಂಡವಾಳ ಇಲ್ಲದ ಮತ್ತು ನಿರಾಶ್ರಿತ ಜನರಿಗೆ ಉದ್ಯೋಗವನ್ನು ದೊರಕಿಸಿದೆ. ಬೀದಿ ವ್ಯಾಪಾರಿಗಳಿಂದ ನಗರದ ಬಡಜನರಿಗೆ, ದುಡಿಯುವ ವರ್ಗಕ್ಕೆ ಮತ್ತು ಮಧ್ಯಮ ವರ್ಗಕ್ಕೆ ಕಡಿಮೆ ಬೆಲೆಯಲ್ಲಿ ಉತ್ತಮ ವಸ್ತುಗಳು ಮತ್ತು ಸೇವೆಗಳು ದೊರಕುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಬೀದಿ ವ್ಯಾಪಾರಿಗಳಿಗೆ ಕಳೆದ ಲಾಕ್‌ ಡೌನ್‌ ಸಮಯದಿಂದಲೇ ಹಲವು ಸಮಸ್ಯೆಗಳು ಉದ್ಭವವಾಗಿವೆ. ಬೀದಿ ವ್ಯಾಪಾರಿಗಳಿಗೆ ಮಾರ್ಚ್‌ 2020 ರಿಂದ ಜೂನ್‌ 2020 ರ ವರೆಗೂ ಘೋಷಿದ್ದ ಲಾಕ್‌ ಡೌನ್‌ ಸಮಯದಲ್ಲಿ ಬೀದಿ ವ್ಯಾಪಾರವನ್ನು ಅಗತ್ಯ ಸೇವೆ ಎಂದು ಘೋಷಿಸಿದ್ದರೂ, ಪೋಲೀಸರ ಕಿರುಕುಳದಿಂದ ಒಂದು ಪೈಸಾದಷ್ಟು ವ್ಯಾಪಾರವನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ವರ್ಷದ ಕಷ್ಟ-ನಷ್ಟಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಿ ಎಂದು ಕೋರಿತ್ತಾದರೂ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಅದರ ಬದಲಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲು ಮುಂದಾದರು. ಬೀದಿ ವ್ಯಾಪಾರಿಗಳು ದಿನನಿತ್ಯದ ಜೀವನ ನಡೆಸಲು ಮಾಡಿದ ಸಾಲಕ್ಕೆ ಕೇಂದ್ರ ಸರ್ಕಾರದ ಸಾಲವನ್ನು ತೀರಿಸುವ ಪರಿಸ್ಥಿತಿಗೆ ಬೀದಿ ವ್ಯಾಪಾರಿಗಳನ್ನು ನೂಕಲಾಗಿದೆ ಎಂದು ಸಂಘವು ಹೇಳಿದೆ.

ಸರ್ಕಾರ ಎರಡನೇ ಅಲೆಯನ್ನು ತಡೆಗಟ್ಟಲು ಹೇರಿರುವ ಅಘೋಷಿತ ಲಾಕ್‌ಡೌನ್‌ ಬೀದಿ ವ್ಯಾಪಾರಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಸಂಘವು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಹಣ್ಣು-ಹೂವು-ತರಕಾರಿ ವ್ಯಾಪಾರಿಗಳಿಗೆ ಮುಂಜಾನೆ 6 ರಿಂದ 10 ಗಂಟೆವರೆಗೂ ವ್ಯಾಪಾರ ಮಾಡಲು ಅವಕಾಶವಿದ್ದರೂ, ವ್ಯಾಪಾರಿಗಳು ಸಗಟು ಮಾರುಕಟ್ಟೆಗೆ ತಲುಪುವ ಹೊತ್ತಿಗೆ ಸರಕುಗಳು ಮಾರಾಟವಾಗಿರುತ್ತದೆ. ಜೊತೆಗೆ ಅಲ್ಲಿಂದ ಸರಕುಗಳನ್ನು ತಂದು ಮಾರಾಟ ಮಾಡಲು ಕೂಡಾ ಸಮಯ ಸಕಾಗುವುದಿಲ್ಲ. ಇದರಿಂದಾಗಿ ಸರಕುಗಳು ಹಾಳಾಗಿ ಹೋಗುತ್ತಿದೆ. ಈ ಮಧ್ಯೆ ಪೊಲೀಸರು ಕೂಡಾ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘವು ಸರ್ಕಾರಕ್ಕೆ ದೂರಿಕೊಂಡಿದೆ.

ಲಾಕ್‌ಡೌನ್‌ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕು ಕಿತ್ತುಕೊಂಡಿರುವ ಸರ್ಕಾರ ಆರ್ಥಿಕ ನೆರವಾದರು ನೀಡಬೇಕು. ಆದರೆ ಇದುವರೆಗೂ ಸರ್ಕಾರದ ವತಿಯಿಂದ ಯಾವುದೇ ಘೋಷಣೆ ಆಗಿಲ್ಲ. ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌‌ಡೌನ್‌ ಜೊತೆಗೆ ಬೀದಿ ವ್ಯಾಪಾರಿಗಳಿಗಾಗಿ ಪ್ರತ್ಯೇಕ ಆರ್ಥಿಕ ನೆರವು ಘೋಷಿಸಿದೆ. ಆದರೆ ಭಾರತದಲ್ಲಿ ಇಲ್ಲಿ ಬಡವರ ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಕಷ್ಟಗಳ ಜೊತೆಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಪ್ರಮಾಣವನ್ನು ಕೂಡಾ ಕಡಿಮೆ ಮಾಡಲಾಗಿದೆ. ರಾಜ್ಯದ ಜನರು ಇಷ್ಟು ಕಷ್ಟದಲ್ಲಿ ಬಾಳುತ್ತಾ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವೇ? ಎಂದು ಪತ್ರದಲ್ಲಿ ಸಂಘವು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ದೇಶವನ್ನು ನಾಶ ಮಾಡುವ ಹುಸಿ ಪಾಸಿಟಿವಿಟಿಯನ್ನು ಸತ್ಯ ಮತ್ತು ಧೈರ್ಯದಿಂದ ಎದುರಿಸಬೇಕಿದೆ

ಪತ್ರದಲ್ಲಿ ಸಂಘವು ಕೆಲವು ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಸರ್ಕಾರಕ್ಕೆ ಸಲಹೆಯನ್ನು ಕೂಡಾ ನೀಡಿದೆ.

  • ದಿನನಿತ್ಯದ ವ್ಯಾಪಾರದ ಸಮಯವನ್ನು ಕನಿಷ್ಠ ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸುತ್ತಾ, ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು.
  • ಪೊಲೀಸರ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವಿಕೆ ಆಗದಂತೆ ಆದೇಶ ನೀಡಬೇಕು.
  • ಮನೆ ಮಾಲೀಕರು ತಿಂಗಳ ಬಾಡಿಗೆಗೆ ಒತ್ತಾಯ ಮಾಡಬಾರದೆಂದು ಆದೇಶವನ್ನು ಹೊರಡಿಸಬೇಕು.
  • ಖಾಸಗಿ ಫೈನ್ಯಾನ್ಸ್‌ ಕಂಪನಿಗಳು ಸಾಲವನ್ನು ಮರುಪಾವತಿಸಲು ತೀವ್ರ ಒತ್ತಡ ಹಾಕುತ್ತಿದ್ದಾರೆ. ಹಾಗೆಯೇ ಹಲವು ಬೀದಿ ವ್ಯಾಪಾರಿಗಳು ಸಹಕಾರಿ ಬ್ಯಾಂಕ್‌ ಗಳಿಂದ ಸಾಲ ಪಡೆದಿದ್ದಾರೆ. ವ್ಯಾಪಾರ ಇಲ್ಲದ ಕಾರಣ ಸಾಲ ತೀರಿಸಲು ಕಷ್ಟವಾದ ಕಾರಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವಂತೆ ಆದೇಶ ಹೊರಡಿಸಬೇಕು.
  • ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ನೀಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
  • ಪ್ರತಿಯೋರ್ವ ಬೀದಿ ವ್ಯಾಪಾರಿಗೆ ಮೇ ಮತ್ತು ಜೂನ್‌ ತಿಂಗಳಿಗೆ 15,000/- ರೂ. ಗಳಷ್ಟು ಆರ್ಥಿಕ ನೆರವು ನೀಡಬೇಕು.
  • ಕೇರಳ ಮಾದರಿಯಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅಕ್ಕಿ, ಬೇಳೆ, ಕಾಳುಗಳು, ಅಡುಗೆ ಎಣ್ಣೆ, ಮಸಾಲೆ, ಇತ್ಯಾದಿಗಳನ್ನು ನೀಡಬೇಕು. ಕಡಿತವಾದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಬೇಕು.
  • ಬೀದಿ ವ್ಯಾಪಾರಿಗಳಿಗೂ ಸಹ ಇ.ಎಸ್‌.ಐ ಸ್ವರೂಪದಂತಹ ಸರ್ಕಾರಿ ಆರೋಗ್ಯ ವಿಮೆ ನೀಡಬೇಕು.
  • ನಗರ ಪ್ರದೇಶಗಳ ಕೊಳಗೇರಿಗಳಲ್ಲಿ, ವಲಸೆ ಕಾರ್ಮಿಕರ ವಾಸಸ್ಥಳಗಳಲ್ಲಿ ಸರ್ಕಾರವು ‘ಸಾಮೂಹಿಕ ಅಡುಗೆ ಮನೆ’ ರಚಿಸಿ ಅದರ ಮುಖಾಂತರ ನಗರದ ನಿರಾಶ್ರಿತರಿಗೆ ತಾಜಾ ಆಹಾರ ನೀಡಬೇಕು. ಇಂತಹ ಸಾಮೂಹಿಕ ಅಡುಗೆ ಮನೆಗಳನ್ನು ನಡೆಸಲು ಬೀದಿ ವ್ಯಾಪಾರಿಗಳ ಸೇವೆಯನ್ನು ಪಡೆಯಬೇಕು ಹಾಗೂ ಅವರಿಗೆ ವೇತನ ಅಥವಾ ಗುತ್ತಿಗೆ ನೀಡಬೇಕು.

ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರ  by naanugauri on Scribd

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...