Homeಕರ್ನಾಟಕ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

- Advertisement -
- Advertisement -

ಕೊರೊನಾ ಎರಡನೇ ಅಲೆ ಹಾಗೂ ಸರ್ಕಾರ ಮತ್ತೆ ಹೇರಿರುವ ಲಾಕ್‌ಡೌನ್‌ನಿಂದಾಗಿ ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ, ಈ ಸಮಸ್ಯೆಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು AICCTU ಅಂಗ ಸಂಸ್ಥೆಯಾದ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಬರೆದಿದೆ.

ಪತ್ರದಲ್ಲಿ ಸಂಘವು, “ಕರ್ನಾಟಕದಾದ್ಯಂತ ಲಕ್ಷಾಂತರ ಜನ ಬೀದಿ ವ್ಯಾಪಾರಿಗಳಿದ್ದು ಬೆಂಗಳೂರು ನಗರದಲ್ಲೇ 2 ಲಕ್ಷದಷ್ಟು ಜನ ಬೀದಿ ವ್ಯಾಪಾರವನ್ನು ಜೀವನೋಪಾಯವನ್ನಾಗಿ ಆಧರಿಸಿದ್ದಾರೆ. ಬೀದಿ ವ್ಯಾಪಾರವು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ನೀಡುವುದಲ್ಲದೆ, ಲಕ್ಷಾಂತರ ಕಲಿಕೆ ಇಲ್ಲದೆ, ಶಕ್ತಿ ಇಲ್ಲದೆ, ಅಂಗಡಿ ಸ್ಥಾಪಿಸಲು ಬಂಡವಾಳ ಇಲ್ಲದ ಮತ್ತು ನಿರಾಶ್ರಿತ ಜನರಿಗೆ ಉದ್ಯೋಗವನ್ನು ದೊರಕಿಸಿದೆ. ಬೀದಿ ವ್ಯಾಪಾರಿಗಳಿಂದ ನಗರದ ಬಡಜನರಿಗೆ, ದುಡಿಯುವ ವರ್ಗಕ್ಕೆ ಮತ್ತು ಮಧ್ಯಮ ವರ್ಗಕ್ಕೆ ಕಡಿಮೆ ಬೆಲೆಯಲ್ಲಿ ಉತ್ತಮ ವಸ್ತುಗಳು ಮತ್ತು ಸೇವೆಗಳು ದೊರಕುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಬೀದಿ ವ್ಯಾಪಾರಿಗಳಿಗೆ ಕಳೆದ ಲಾಕ್‌ ಡೌನ್‌ ಸಮಯದಿಂದಲೇ ಹಲವು ಸಮಸ್ಯೆಗಳು ಉದ್ಭವವಾಗಿವೆ. ಬೀದಿ ವ್ಯಾಪಾರಿಗಳಿಗೆ ಮಾರ್ಚ್‌ 2020 ರಿಂದ ಜೂನ್‌ 2020 ರ ವರೆಗೂ ಘೋಷಿದ್ದ ಲಾಕ್‌ ಡೌನ್‌ ಸಮಯದಲ್ಲಿ ಬೀದಿ ವ್ಯಾಪಾರವನ್ನು ಅಗತ್ಯ ಸೇವೆ ಎಂದು ಘೋಷಿಸಿದ್ದರೂ, ಪೋಲೀಸರ ಕಿರುಕುಳದಿಂದ ಒಂದು ಪೈಸಾದಷ್ಟು ವ್ಯಾಪಾರವನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ವರ್ಷದ ಕಷ್ಟ-ನಷ್ಟಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಿ ಎಂದು ಕೋರಿತ್ತಾದರೂ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಅದರ ಬದಲಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲು ಮುಂದಾದರು. ಬೀದಿ ವ್ಯಾಪಾರಿಗಳು ದಿನನಿತ್ಯದ ಜೀವನ ನಡೆಸಲು ಮಾಡಿದ ಸಾಲಕ್ಕೆ ಕೇಂದ್ರ ಸರ್ಕಾರದ ಸಾಲವನ್ನು ತೀರಿಸುವ ಪರಿಸ್ಥಿತಿಗೆ ಬೀದಿ ವ್ಯಾಪಾರಿಗಳನ್ನು ನೂಕಲಾಗಿದೆ ಎಂದು ಸಂಘವು ಹೇಳಿದೆ.

ಸರ್ಕಾರ ಎರಡನೇ ಅಲೆಯನ್ನು ತಡೆಗಟ್ಟಲು ಹೇರಿರುವ ಅಘೋಷಿತ ಲಾಕ್‌ಡೌನ್‌ ಬೀದಿ ವ್ಯಾಪಾರಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಸಂಘವು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಹಣ್ಣು-ಹೂವು-ತರಕಾರಿ ವ್ಯಾಪಾರಿಗಳಿಗೆ ಮುಂಜಾನೆ 6 ರಿಂದ 10 ಗಂಟೆವರೆಗೂ ವ್ಯಾಪಾರ ಮಾಡಲು ಅವಕಾಶವಿದ್ದರೂ, ವ್ಯಾಪಾರಿಗಳು ಸಗಟು ಮಾರುಕಟ್ಟೆಗೆ ತಲುಪುವ ಹೊತ್ತಿಗೆ ಸರಕುಗಳು ಮಾರಾಟವಾಗಿರುತ್ತದೆ. ಜೊತೆಗೆ ಅಲ್ಲಿಂದ ಸರಕುಗಳನ್ನು ತಂದು ಮಾರಾಟ ಮಾಡಲು ಕೂಡಾ ಸಮಯ ಸಕಾಗುವುದಿಲ್ಲ. ಇದರಿಂದಾಗಿ ಸರಕುಗಳು ಹಾಳಾಗಿ ಹೋಗುತ್ತಿದೆ. ಈ ಮಧ್ಯೆ ಪೊಲೀಸರು ಕೂಡಾ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘವು ಸರ್ಕಾರಕ್ಕೆ ದೂರಿಕೊಂಡಿದೆ.

ಲಾಕ್‌ಡೌನ್‌ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕು ಕಿತ್ತುಕೊಂಡಿರುವ ಸರ್ಕಾರ ಆರ್ಥಿಕ ನೆರವಾದರು ನೀಡಬೇಕು. ಆದರೆ ಇದುವರೆಗೂ ಸರ್ಕಾರದ ವತಿಯಿಂದ ಯಾವುದೇ ಘೋಷಣೆ ಆಗಿಲ್ಲ. ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌‌ಡೌನ್‌ ಜೊತೆಗೆ ಬೀದಿ ವ್ಯಾಪಾರಿಗಳಿಗಾಗಿ ಪ್ರತ್ಯೇಕ ಆರ್ಥಿಕ ನೆರವು ಘೋಷಿಸಿದೆ. ಆದರೆ ಭಾರತದಲ್ಲಿ ಇಲ್ಲಿ ಬಡವರ ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಕಷ್ಟಗಳ ಜೊತೆಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಪ್ರಮಾಣವನ್ನು ಕೂಡಾ ಕಡಿಮೆ ಮಾಡಲಾಗಿದೆ. ರಾಜ್ಯದ ಜನರು ಇಷ್ಟು ಕಷ್ಟದಲ್ಲಿ ಬಾಳುತ್ತಾ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವೇ? ಎಂದು ಪತ್ರದಲ್ಲಿ ಸಂಘವು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ದೇಶವನ್ನು ನಾಶ ಮಾಡುವ ಹುಸಿ ಪಾಸಿಟಿವಿಟಿಯನ್ನು ಸತ್ಯ ಮತ್ತು ಧೈರ್ಯದಿಂದ ಎದುರಿಸಬೇಕಿದೆ

ಪತ್ರದಲ್ಲಿ ಸಂಘವು ಕೆಲವು ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಸರ್ಕಾರಕ್ಕೆ ಸಲಹೆಯನ್ನು ಕೂಡಾ ನೀಡಿದೆ.

  • ದಿನನಿತ್ಯದ ವ್ಯಾಪಾರದ ಸಮಯವನ್ನು ಕನಿಷ್ಠ ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸುತ್ತಾ, ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು.
  • ಪೊಲೀಸರ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವಿಕೆ ಆಗದಂತೆ ಆದೇಶ ನೀಡಬೇಕು.
  • ಮನೆ ಮಾಲೀಕರು ತಿಂಗಳ ಬಾಡಿಗೆಗೆ ಒತ್ತಾಯ ಮಾಡಬಾರದೆಂದು ಆದೇಶವನ್ನು ಹೊರಡಿಸಬೇಕು.
  • ಖಾಸಗಿ ಫೈನ್ಯಾನ್ಸ್‌ ಕಂಪನಿಗಳು ಸಾಲವನ್ನು ಮರುಪಾವತಿಸಲು ತೀವ್ರ ಒತ್ತಡ ಹಾಕುತ್ತಿದ್ದಾರೆ. ಹಾಗೆಯೇ ಹಲವು ಬೀದಿ ವ್ಯಾಪಾರಿಗಳು ಸಹಕಾರಿ ಬ್ಯಾಂಕ್‌ ಗಳಿಂದ ಸಾಲ ಪಡೆದಿದ್ದಾರೆ. ವ್ಯಾಪಾರ ಇಲ್ಲದ ಕಾರಣ ಸಾಲ ತೀರಿಸಲು ಕಷ್ಟವಾದ ಕಾರಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವಂತೆ ಆದೇಶ ಹೊರಡಿಸಬೇಕು.
  • ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ನೀಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
  • ಪ್ರತಿಯೋರ್ವ ಬೀದಿ ವ್ಯಾಪಾರಿಗೆ ಮೇ ಮತ್ತು ಜೂನ್‌ ತಿಂಗಳಿಗೆ 15,000/- ರೂ. ಗಳಷ್ಟು ಆರ್ಥಿಕ ನೆರವು ನೀಡಬೇಕು.
  • ಕೇರಳ ಮಾದರಿಯಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅಕ್ಕಿ, ಬೇಳೆ, ಕಾಳುಗಳು, ಅಡುಗೆ ಎಣ್ಣೆ, ಮಸಾಲೆ, ಇತ್ಯಾದಿಗಳನ್ನು ನೀಡಬೇಕು. ಕಡಿತವಾದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಬೇಕು.
  • ಬೀದಿ ವ್ಯಾಪಾರಿಗಳಿಗೂ ಸಹ ಇ.ಎಸ್‌.ಐ ಸ್ವರೂಪದಂತಹ ಸರ್ಕಾರಿ ಆರೋಗ್ಯ ವಿಮೆ ನೀಡಬೇಕು.
  • ನಗರ ಪ್ರದೇಶಗಳ ಕೊಳಗೇರಿಗಳಲ್ಲಿ, ವಲಸೆ ಕಾರ್ಮಿಕರ ವಾಸಸ್ಥಳಗಳಲ್ಲಿ ಸರ್ಕಾರವು ‘ಸಾಮೂಹಿಕ ಅಡುಗೆ ಮನೆ’ ರಚಿಸಿ ಅದರ ಮುಖಾಂತರ ನಗರದ ನಿರಾಶ್ರಿತರಿಗೆ ತಾಜಾ ಆಹಾರ ನೀಡಬೇಕು. ಇಂತಹ ಸಾಮೂಹಿಕ ಅಡುಗೆ ಮನೆಗಳನ್ನು ನಡೆಸಲು ಬೀದಿ ವ್ಯಾಪಾರಿಗಳ ಸೇವೆಯನ್ನು ಪಡೆಯಬೇಕು ಹಾಗೂ ಅವರಿಗೆ ವೇತನ ಅಥವಾ ಗುತ್ತಿಗೆ ನೀಡಬೇಕು.

ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರ  by naanugauri on Scribd

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...