Homeಮುಖಪುಟಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ

ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ

ರಣವೀರ್ ಸಿಂಗ್ ಎಂಬ 29ರ ಯುವಕ ತನ್ನೂರಿಗೆ ನಡೆಯುತ್ತಲೇ ಪ್ರಾಣಬಿಟ್ಟ ಕಣ್ಣೀರ ಕಥೆಯನ್ನು ಕಣ್ಮುಂದೆ ಕಟ್ಟಿಕೊಡುವ ಲೇಖನ

- Advertisement -
- Advertisement -

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಕಳೆದ ದಿನ ತನ್ನ ಅಧಿಕೃತ ನಿವಾಸದಲ್ಲಿ ‘ರಾಮಾಯಣ’ ಧಾರವಾಹಿ ನೋಡಿ ಆನಂದಿಸುತ್ತಿದ್ದಾಗಲೇ, ರಣವೀರ್ ಸಿಂಗ್ ಎಂಬ ಯುವಕ ದೆಹಲಿಯ ಸರಹದ್ದು ದಾಟಿಯಾಗಿರಬೇಕು. ರಾಷ್ಟ್ರದ ರಾಜಧಾನಿಯಲ್ಲಿ ದಿನಗೂಲಿಗಾಗಿ ರೆಸ್ಟೋರೆಂಟ್‌ಗಳಲ್ಲಿ ಡೆಲಿವರಿ ಏಜೆಂಟ್ ಕೆಲಸ ಮಾಡುವ ಒಬ್ಬ ಸಾಮಾನ್ಯ ವ್ಯಕಿಯಾಗಿದ್ದ ರಣವೀರ್.

ಕೋವಿಡ್-19ರ ಹಿನ್ನೆಲೆಯಲ್ಲಿ, ಪ್ರತ್ಯೇಕವಾದ ಪೂರ್ವ ತಯಾರಿಗಳಿಲ್ಲದೆ ಮಾರ್ಚ್ 24 ಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‌ಡೌನ್ ಘೋಷಿಸಿದಾಗ, ಬೀದಿಗೆ ಬಿದ್ದ ಸಾವಿರಾರು ಜನರ ಪೈಕಿ ಅವನೂ ಒಬ್ಬ.

ಅತ್ತ ದುಡಿಮೆಯೂ, ಇತ್ತ ಆಹಾರವೂ ಇಲ್ಲದೆ ದೆಹಲಿಯಲ್ಲಿ ಕೂಡುವುದು ಕಷ್ಟಸಾಧ್ಯವೆಂಬುದನ್ನು ಅರಿತ ರಣವೀರ್, ಮಧ್ಯ ಪ್ರದೇಶದ ಮೊರೋನಾ ಜಿಲ್ಲೆಯ ತನ್ನ ಹುಟ್ಟೂರಿಗೆ ಹಿಂತಿರುಗಲು ತೀರ್ಮಾನಿಸಿದ. 200 ಕಿ.ಮೀ.ಗಿಂತಲೂ ಹೆಚ್ಚು ದೂರದ ಪ್ರದೇಶವದು. ಇತರ ಸಂಪರ್ಕ ವ್ಯವಸ್ಥೆಗಳಿಲ್ಲದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಕಾಲ್ನಡಿಗೆಯಲ್ಲೇ ಸಾಗಬೇಕಿತ್ತು. ಹಾಗೇ ಮರುದಿನ ರಾತ್ರಿ ಹೊತ್ತಲ್ಲಿ, ಕುಡಿಯಲು ನೀರೂ ಕೂಡಾ ಜೊತೆಗಿಲ್ಲದೆ ನಡೆಯಲು ಆರಂಭಿಸಿದ.

ಅದಾಗಲೇ ರಣವೀರ್ ಸುಮಾರು 100 ಕಿ.ಮೀ ದೂರವನ್ನು ಬರಿಗಾಲಲ್ಲೇ ಕ್ರಮಿಸಿಯಾಗಿತ್ತು. ಇದರ ನಡುವೆ ಯಾರೋ ದಾರಿ ನಡುವೆ ಸಿಕ್ಕ ವ್ಯಾಪಾರಿಯೋರ್ವರು ಕೊಟ್ಟ ಚಹಾ ಮತ್ತು ಬಿಸ್ಕತ್ತು ಮಾತ್ರವಾಗಿತ್ತು ದಾರಿಯುದ್ದಕ್ಕೂ ಆಹಾರ. ನಡೆದಾಡಿ ಬಳಲಿದ ಆ 29ರ ಹರೆಯದ ಯುವಕ, ತನ್ನ ಗ್ರಾಮ ತಲುಪುವುದಕ್ಕಿಂತಲೂ ಬಹಳ ದೂರದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದನೆಂದಾಗಿತ್ತು ವರದಿ.

ನರೇಂದ್ರ ಮೋದಿಯ ಎಂಟು ಗಂಟೆಯ ಘೋಷಣೆಯಿಂದ ಉಂಟಾದ ಆಘಾತದಿಂದಾಗಿ, ಇದರಂತೆಯೇ ಲಕ್ಷಾಂತರ ರಣವೀರ್‌ಗಳು ‘ಕಾಲ್ನಡಿಗೆ’ ಆರಂಭಿಸಿದ ದೃಶ್ಯಗಳನ್ನು ಎಲ್ಲೆಡೆ ಕಂಡಿದ್ದೇವೆ. ನೆರೆಯ ರಾಜ್ಯಗಳಿಂದ ಕೆಲಸ ಹುಡುಕುತ್ತಾ ದೆಹಲಿ ತಲುಪಿದ್ದ ಕಾರ್ಮಿಕರು ಲಾಕ್‌ಡೌನ್‌ ಕಾರಣದಿಂದಾಗಿ ಅವರ ಕುಟುಂಬಗಳೊಂದಿಗೆ ಸಾಲು ಸಾಲಾಗಿ ಗುಳೆ ಹೊರಟಿರುವ ದಯನೀಯ ದೃಶ್ಯಗಳು ದೇಶಕ್ಕೆ ಕೋವಿಡ್ ವೈರಾಣುವಿನಷ್ಟೇ ಭೀತಿಜನಕವಾದುದು.

ದೆಹಲಿ- ಯು.ಪಿ ಗಡಿಭಾಗದ ಗಾಜಿಯಾಬಾದ್‌ನಲ್ಲೂ ಅಂತೆಯೇ ಇನ್ನಿತರ ಪ್ರದೇಶಗಳಲ್ಲೂ ಊರು ಸೇರಲು ಲಾಕ್‌ಡೌನ್ ಉಲ್ಲಂಘಿಸಿ, ಬಸ್ಸಿಗಾಗಿ ಕಾಯುತ್ತಿರುವ ಈ ಜನರ ಗುಂಪು, ಎಲ್ಲಾ ಗಡಿಗಳಲ್ಲೂ ಇದೀಗ ‘ನಿರಾಶ್ರಿತ ವಲಸಿಗರು’  ಎಂಬ ವಿಶೇಷ ಮನ್ನಣೆ ಪಡೆದುಕೊಂಡಿದ್ದಾರೆ.

ಉತ್ತರ ಆಫ್ರಿಕಾದ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷ ಭೂಮಿಯಿಂದ ಮುಕ್ತಿ ಹೊಂದಿ, ಯುರೋಪಿಯನ್ ಯೂನಿಯನ್ನಿನ ಪ್ರವೇಶ ಕವಾಟಗಳಾದ ಮಾಸಿಡೋನಿಯ ಹಾಗೂ ಇತರೆಡೆಗಳಲ್ಲಿ ಅಭಯ ಯಾಚಿಸುತ್ತಾ ಕಾದು ನಿಂತಿರುವ ಲಕ್ಷಾಂತರ ಜನರನ್ನು ನೆನೆಪಿಸುತ್ತಿದೆ ಈ ಜನಸಾಗರ. ಜೀವನದ ಹೊಸ ನಿರ್ಣಾಯಕ ದಡವನ್ನು ಸೇರುವ ಆಸೆಯಿಂದ ಯುರೋಪಿನತ್ತ ಹಲವರು ಮೆಡಿಟೆರೇನಿಯನ್ ಸಮುದ್ರವನ್ನು ಈಜುತ್ತಾ ದಾಟಿ ಬಂದರೆ, ಇಲ್ಲಿ ಕಾಲ್ನಡಿಗೆ ಸಂಚಾರ ಎನ್ನುವ ವ್ಯತ್ಯಾಸ ಮಾತ್ರ. ಪಲಾಯನದ ಉದ್ದೇಶ ಮಾತ್ರ ಒಂದೇ. ಒಂದು ಹೊತ್ತಿನ ತುತ್ತು ಅನ್ನ.

ದೆಹಲಿಯಲ್ಲಿರುವ ಕೂಲಿ ಕಾರ್ಮಿಕರ ಸಂಖ್ಯೆ 20 ಲಕ್ಷಕ್ಕಿಂತಲೂ ಹೆಚ್ಚು. ಲಾಕ್‌ಡೌನ್ ಘೋಷಿಸಿದಾಗ ಇದರಲ್ಲಿ ಹೆಚ್ಚಿನ ಪ್ರಮಾಣದ ಜನರು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ದೆಹಲಿ ಸರ್ಕಾರದ ಗಣತಿಯಂತೆ, ಈಗಾಗಲೇ ನಾಲ್ಕು ಲಕ್ಷದಷ್ಟು ಬರುವ ಜನರಿಗಾಗುವಷ್ಟು ಮಾತ್ರ ಆಹಾರ ಮತ್ತು ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.  ಕೇಂದ್ರ ಸರಕಾರವೋ ಬಂದ್ ಮಾಡಿ ಅನ್ನೋ ಘೋಷಣೆ ಬಿಟ್ಟು ಕ್ರಿಯಾತ್ಮಕವಾದ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಗುಳೆ ಹೊರಡುವುದು ಸ್ವಾಭಾವಿಕ.

ಸರಕಾರವು ಗುರುತರವಾದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವಾಗ, ವಲಸೆ ಕಾರ್ಮಿಕರು ಗುಳೆ ಹೊರಟಿರುವುದರ ಹಿಂದಿನ ಉದ್ದೇಶ ನಿಜವಾಗಿಯೂ ಹಸಿವಿನಿಂದ ಬರುವ ಸಾವುಗಳನ್ನ ಪ್ರತಿರೋಧಿಸುವುದಕ್ಕಾಗಿಯೇ ಆಗಿದೆ. ಈ ಸಾಮೂಹಿಕ ಗುಳೆಯ ಬಗ್ಗೆ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲೂ ವರದಿಯಾದಾಗ, ವಲಸಿಗರನ್ನು ಕರೆತರಲು ನೆರೆಯ ರಾಜ್ಯಗಳು ಬಸ್ಸುಗಳನ್ನು ಕಳುಹಿಸಲು ಮುಂದೆ ಬಂದವು.  ಇದು ಬರಿ ದೆಹಲಿಯ ದೃಶ್ಯಗಳಾಗಿವೆ ಅಂದುಕೊಂಡರೆ ಅದು ತಪ್ಪು. ಮುಂಬೈ , ಕಲ್ಕತ್ತಾ, ಚೆನ್ನೈ, ಬೆಂಗಳೂರು ಮುಂತಾದ ಮೆಟ್ರೋ ನಗರಗಳಲ್ಲಿನ ಬೀದಿಗಳಿಂದೆಲ್ಲಾ, ಈ ರೀತಿಯ ಸಾಮೂಹಿಕ ಪಲಾಯನದ ಸುದ್ದಿಗಳು ವರದಿಯಾಗುತ್ತಿವೆ.

ಗಾಜಿಯಾಬಾದ್ ಮತ್ತು ಇತರೆಡೆಗಳಲ್ಲಿ ಬಸ್ಸುಗಳಿಗಾಗಿ ಕಾಯುತಿರುವ ಹಲವರು ಆಡುವ ಮಾತು “ನಮ್ಮಲ್ಲಿ ಹಲವರಿಗೆ ಆಧಾರ್ ನಂತಹ ಯಾವುದೇ ಗುರುತು ಚೀಟಿಗಳಿಲ್ಲ” ಎಂದಾಗಿದೆ. ಅಂದರೆ, ನಾಮಮಾತ್ರವಾದರೂ, ಈ ಸಮಯದಲ್ಲಿ ಸರಕಾರ ನೀಡುವ ಯಾವುದೇ ಸೌಜನ್ಯ ಸವಲತ್ತುಗಳಿಗೆ ಅವರು ಅನರ್ಹರು. ಇವೆಲ್ಲವೂ ವರ್ತಮಾನ ಭಾರತದ ಅವ್ಯವಸ್ಥೆಯ ನೇರನೋಟಗಳಾಗಿವೆ ಎಂಬುದನ್ನು ಮನಗಾಣಬೇಕಿದೆ.

ಗೃಹ ಸಚಿವ ಅಮಿತ್ ಶಾ ಘೋಷಿಸಿದ ಎನ್‌ಆರ್‌ಸಿ ದೇಶವ್ಯಾಪಿಯಾಗಿ ಪ್ರಾಬಲ್ಯಕ್ಕೆ ಬಂದರೆ, ಗುರುತು ತೋರಿಸಲು ದಾಖಲೆಗಳಿಲ್ಲದ ಈ ಜನರ ಸ್ಥಿತಿ ಏನಾಗಬಹುದೆಂಬುದು ಈ ಮೂಲಕ ಊಹಿಸಬಹುದಾಗಿದೆ. ಆದ್ದರಿಂದ ಹಲವರ ನಿರೀಕ್ಷಿಸಿದಂತೆ, ಮೋದಿಯ ಲಾಕ್‌ಡೌನ್ ಘೋಷಣೆಯು ಹಳೆಯ ನೋಟು ನಿಷೇಧವನ್ನಲ್ಲ ನೆನೆಪಿಸೋದು. ಬದಲಾಗಿ, ಇನ್ನೇನು ಜಾರಿಗೊಳಿಸಲಿರುವ ಎನ್‌ಆರ್‌ಸಿಯ ಪ್ರತ್ಯಾಘಾತ ಎಂಬಂತೆ, ದೇಶದುದ್ದಕ್ಕೂ ಪ್ರತ್ಯಕ್ಷವಾಗಲು ಸಾಧ್ಯತೆಗಳಿರುವ ಬಹುದೊಡ್ಡ ಸಂಖ್ಯೆಯ  ನಿರಾಶ್ರಿತ ಸಮೂಹಗಳ ಸೂಕ್ತ ಮುನ್ಸೂಚನೆಯೇ ಆಗಿದೆ ಈ ಬಸ್ಸು ಕಾಯುತ್ತಿರುವ ಜನ ಸಮೂಹ ಅನ್ನುವುದು ಸ್ಪಷ್ಟ.

ಈ ಸಾಮೂಹಿಕವಾಗಿ ಗುಳೆ ಹೊರಟವರೊಂದಿಗಿನ ಅಧಿಕಾರಿಗಳ ಮನೋಭಾವ ಕೂಡಾ ಅತ್ಯಂತ ದಯನೀಯವಾದುದು. ಲಾಕ್‌ಡೌನ್ ಅನ್ನುವ ಕಠಿಣ ನಿರ್ಧಾರವನ್ನು ತಳೆದಿದ್ದಕ್ಕಾಗಿ ಜನತೆಯೊಂದಿಗೆ ಕ್ಷಮೆ ಯಾಚಿಸುತ್ತೇನೆ ಎಂದಾಗಿತ್ತು ಕಳೆದೆರಡು ದಿನಗಳ ಹಿಂದಿನ ಮೋದಿಯ ಪ್ರಸ್ತಾವನೆ. ಯಾವುದೇ ಪೂರ್ವ ತಯಾರಿಗಳಿಲ್ಲದೆ, ನಾಲ್ಕು ಗಂಟೆಗಳ ಸಮಯವನ್ನು ಮಾತ್ರ ನೀಡಿ, 130 ಕೋಟಿ ಜನರನ್ನು ನಿರ್ದಾಕ್ಷಿಣ್ಯ ಲಾಕ್‌ಡೌನ್ ನತ್ತ ತಳ್ಳಿಹಾಕಿ, ನಂತರದ ಈ ಕ್ಷಮಾಪಣೆಯಲ್ಲಿ ಯಾವುದೇ ಅರ್ಥವಿಲ್ಲ.

ನೋಟ್ ಬ್ಯಾನ್‌ನ ನಂತರ, 50 ದಿನಗಳ ಸಮಯಾವಕಾಶ ಕೋರಿದ, ಅದೇ ‘ಪ್ರಾಮಾಣ ಕತೆ’ಯಷ್ಟೇ ಈ ಪ್ರಸ್ತಾವನೆಗೂ ಇರುವುದು. ಅಂದು ನೋಟು ಬ್ಯಾನ್‌ನಲ್ಲಿ ಕ್ಯೂ ನಿಂತು ಅಸ್ವಸ್ಥರಾದವರೇ ಇಂದೂ ಬೀದಿಗೆ ಬಂದಿರುವುದು. ಆ ಜನರೊಂದಿಗೆ ‘ಮನೆಯೊಳಗೇ ಕುಳಿತುಕೊಂಡಿರಿ’ ಎಂಬುದಾಗಿದೆ ಈಗಲೂ ನೀಡಿರುವ ಎಚ್ಚರಿಕೆ. ಹಾಗಾದರೆ ಇದಕ್ಕೂ ಮುನ್ನವೇ ಸೂರು ಕಳೆದುಕೊಂಡ ಬಡಜನರು ಎತ್ತ ಹೋಗಬೇಕು..? ಸಂಘರಾಜಕೀಯದ ವಿಷಬೀಜಗಳು ಬಿತ್ತಿದ ರಾಮಾನಂದ ಸಾಗರನ ‘ಸೀರಿಯಲ್ ನಾಸ್ಟಾಲ್ಜಿಯ’ದ ಮೂಲಕ ಜನರ ಹಸಿವು ನೀಗುತ್ತದೆ ಎಂದಾಗಿದೆಯೋ ಈ ಆಡಳಿತಾರೂಢರು ಅಂದ್ಕೊಂಡಿರೋದು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...