Homeಮುಖಪುಟಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ, ಅಂದರೆ ನಾಳೆಗೆ (ಫೆ.6, ಶುಕ್ರವಾರ) ಮಂದೂಡಿದರು.

ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ, ವಿಪಕ್ಷಗಳ ಎಂಟು ಸಂಸದರ ಅಮಾನತು, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟಿಸಿದರು.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ಅಂಶಗಳನ್ನು ಉಲ್ಲೇಖಿಸಲು ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಚರ್ಚೆಗೆ ಅವಕಾಶ ನೀಡದಿರುವುದನ್ನು ಖಂಡಿಸಿದರು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಸದಸ್ಯರು ರೈತರ ಹಿತಾಸಕ್ತಿ ಕಾಪಾಡುವಂತೆ ಒತ್ತಾಯಿಸಿದರು. ಗದ್ದಲ ಹೆಚ್ಚಾದ ಕಾರಣ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

12 ಗಂಟೆಗೆ ಮತ್ತೆ ಸದನ ಪ್ರಾರಂಭವಾಯಿತು, ಪ್ರತಿಪಕ್ಷ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರದ (ಫೆ.4) ಘಟನೆಗಳನ್ನು ಉಲ್ಲೇಖಿಸಿ ಪ್ರತಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿದ್ದ ಸಂದರ್ಭದಲ್ಲಿ ಪ್ರತಿಪಕ್ಷದ ಮಹಿಳಾ ಸದಸ್ಯರು ಆಡಳಿತ ಪಕ್ಷದ ಆಸನಗಳ ಬಳಿ ನುಗ್ಗಿದ್ದು ಸಂಸದೀಯ ವ್ಯವಸ್ಥೆಗೆ ಮಾಡಿದ “ಅಪಮಾನ” ಎಂದು ಅವರು ಟೀಕಿಸಿದರು.

“ಸದನವು ಚರ್ಚೆ ಮತ್ತು ಸಂವಾದಕ್ಕಾಗಿ ಇದೆಯೇ ಹೊರತು, ಘೋಷಣೆಗಳನ್ನು ಕೂಗಲು ಅಲ್ಲ” ಎಂದು ಬಿರ್ಲಾ ಅವರು ಪ್ರತಿಪಕ್ಷ ಸದಸ್ಯರನ್ನು ಉದ್ದೇಶಿಸಿ ಹೇಳಿದರು. ಸಂಸತ್ತಿನ ಘನತೆಯನ್ನು ಕಾಪಾಡುವುದು ಎಲ್ಲ ಸದಸ್ಯರ ಜವಾಬ್ದಾರಿ ಎಂದರು.

ಗದ್ದಲದ ನಡುವೆಯೇ ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ನಡೆಸಲು ಪ್ರಯತ್ನಿಸಿದರು. ಕೇವಲ ಐದು ನಿಮಿಷಗಳ ಕಾಲ ನಡೆದ ಈ ಅವಧಿಯಲ್ಲಿ ಒಂದೇ ಒಂದು ಪ್ರಶ್ನೆ ಮತ್ತು ಅದರ ಉಪಪ್ರಶ್ನೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಯಿತು.

ಈ ನಡುವೆ ಪ್ರತಿಪಕ್ಷದ ಸದಸ್ಯರು ಪ್ಲಕಾರ್ಡ್‌ಗಳನ್ನು ಪ್ರದರ್ಶಿಸುತ್ತಾ ಸದನದ ಬಾವಿಗೆ ಇಳಿದು ಪ್ರತಿಭಟನೆ ಮುಂದುವರಿಸಿದ ಕಾರಣ, ಸ್ಪೀಕರ್ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಮಧ್ಯಾಹ್ನ 2 ಗಂಟೆಗೆ ಸದನ ಸೇರಿದಾಗ ಸರ್ಕಾರ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಮಂಡಿಸಿತು. ಗದ್ದಲದ ನಡುವೆಯೇ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಂಸತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯ ಉತ್ತರ ಇಲ್ಲದೆ ನಿರ್ಣಯ ಅಂಗೀಕಾರವಾಯಿತು.

ವಿರೋಧ ಪಕ್ಷದ ಸಂಸದರು ಪ್ರಧಾನಿ ನರೇಂದ್ರ ಮೋದಿಯವರ ಆಸನದ ಬಳಿ ಹೋಗಿ ಪ್ರತಿಭಟನೆ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಇದ್ದ ಕಾರಣ, ಸುರಕ್ಷತೆಯ ದೃಷ್ಟಿಯಿಂದ ಪ್ರಧಾನಿಯವರು ಸದನಕ್ಕೆ ಬರದಂತೆ ಸೂಚಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದರು.

ಗದ್ದಲದ ನಡುವೆ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ತೀರ್ಮಾನಿಸಿದ ಸ್ಪೀಕರ್, ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.

ರಾಜ್ಯಸಭೆಯಲ್ಲಿ ಮೋದಿ ಭಾಷಣ

ಲೋಕಸಭೆಯಲ್ಲಿ ಗದ್ದಲವಿದ್ದರೂ, ಪ್ರಧಾನಿ ಮೋದಿಯವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರ ನೀಡಿದರು. ಈ ವೇಳೆ ಅವರು ಕಾಂಗ್ರೆಸ್ ಆಡಳಿತದ ಹಳೆಯ ತಪ್ಪುಗಳನ್ನು ಟೀಕಿಸಿದರು ಮತ್ತು ಭಾರತದ ಆರ್ಥಿಕ ಪ್ರಗತಿಯನ್ನು ಸಮರ್ಥಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...