Homeಮುಖಪುಟಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

- Advertisement -
- Advertisement -

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಲೋಧಿ 40,000 ಮತಗಳ ಅಂತರದಿಂದ ಜಯಗಳಿಸಿದರೆ, ಅಜಂಗಢದಲ್ಲಿ ಪಕ್ಷದ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಗೆಲುವು ಸಾಧಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ಶಿರೋಮಣಿ ಅಕಾಲಿದಳದ ಸಿಮ್ರಂಜಿತ್ ಸಿಂಗ್ ಮಾನ್ 7,000 ಮತಗಳ ಅಂತರದಿಂದ ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ರಾಜಿಂದರ್ ನಗರ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ದುರ್ಗೇಶ್ ಪಾಠಕ್ 11,000 ಮತಗಳಿಂದ ಗೆದ್ದಿದ್ದಾರೆ.

ತ್ರಿಪುರಾದಲ್ಲಿ ಅಗರ್ತಲಾ, ಜುಬಾರಾಜ್‌ನಗರ, ಸುರ್ಮಾ ಮತ್ತು ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಚುನಾಯಿತರಾಗಬೇಕಾಗಿದ್ದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬರ್ಡೋವಾಲಿಯಲ್ಲಿ 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದರು.

ಆಂಧ್ರಪ್ರದೇಶದ ಆತ್ಮಕೂರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಮೇಕಪತಿ ವಿಕ್ರಮ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಜೂನ್ 23 ರಂದು ಉಪಚುನಾವಣೆ ನಡೆದಿತ್ತು.

ಎಸ್‌ಪಿಗೆ ಆಘಾತ

ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ ಈ ಚುನಾವಣೆಯಲ್ಲಿ ಬಿದ್ದಿದೆ. ರಾಮ್‌ಪುರ, ಅಜಂಗಢ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ಹಿನ್ನಡೆಯಾಗಿದೆ. ರಾಂಪುರದಲ್ಲಿ ನಡೆದ ನೇರ ಸ್ಪರ್ಧೆಯಲ್ಲಿ ಬಿಜೆಪಿಯ ಘನಶ್ಯಾಮ್ ಲೋಧಿ ಅವರು ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ಮೊಹಮ್ಮದ್ ಅಸೀಂ ರಾಜಾ ಅವರನ್ನು 42,192 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಲೋಧಿ ಅವರು 42,000 ಮತಗಳಿಂದ ಗೆದ್ದಿದ್ದಾರೆ ಎಂದು ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಬಿಜೆಪಿ ಅಭ್ಯರ್ಥಿಗೆ ಗೆಲುವಿನ ಪ್ರಮಾಣಪತ್ರ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೋಧಿ 3,67,397 ಮತಗಳನ್ನು (ಶೇ 51.96) ಗಳಿಸಿದರೆ, ಎಸ್‌ಪಿಯ ರಾಜಾ 3,25,205 (ಶೇ 46) ಮತಗಳನ್ನು ಪಡೆದರು ಎಂದು ಚುನಾವಣಾ ಆಯೋಗ (ಇಸಿ) ತಿಳಿಸಿದೆ.

ಎರಡೂ ಕ್ಷೇತ್ರಗಳು ಅಖಿಲೇಶ್ ಯಾದವ್ ಪಕ್ಷದ ಭದ್ರಕೋಟೆಗಳಾಗಿದ್ದವು.

“ಉಪಚುನಾವಣೆಯಲ್ಲಿನ ಗೆಲುವು 2024ರ ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಆಶಾವಾದದ ಸಂದೇಶವನ್ನು ರವಾನಿಸಿದೆ. ಜನರು ಪ್ರಧಾನಿ ಮೋದಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರದ ಮೇಲೆ ತಮ್ಮ ವಿಶ್ವಾಸವನ್ನು ತೋರಿಸಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.

PC: NDTV

ತ್ರಿಪುರದಲ್ಲಿ ಹಿಂಸಾಚಾರ

ತ್ರಿಪುರಾ ವಿಧಾನಸಭೆಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ಪ್ರಕಟವಾದ ಕೆಲವೇ ಗಂಟೆಗಳ ನಂತರ, ಅಗರ್ತಲಾ ನಗರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪೋಸ್ಟ್ ಆಫೀಸ್ ಚೌಮುಹಾನಿಯಲ್ಲಿರುವ ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಘರ್ಷಣೆ ಸಂಭವಿಸಿದೆ.

ಇದನ್ನೂ ಓದಿರಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

“ಬಿಜೆಪಿ ಬೆಂಬಲಿತ ಗೂಂಡಾಗಳ ಗುಂಪು ಕಾಂಗ್ರೆಸ್‌ ಬೆಂಬಲಿಗರ ಮೇಲೆ ದಾಳಿ ಮಾಡಿದೆ. ಯುವ ಕಾಂಗ್ರೆಸ್ ಕಾರ್ಯಕರ್ತನಿಗೆ ಇರಿಯಲಾಗಿದೆ. ಪಕ್ಷದ ಕೇಂದ್ರ ಕಚೇರಿಗೆ ಕಲ್ಲು ತೂರಾಟ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ತಲೆಗೆ ಗಾಯವಾಗಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಅಗರ್ತಲಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ನಂತರ ಬಿಜೆಪಿ ಗೂಂಡಾಗಳು ನಮ್ಮ ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆಸಿದ ಕೆಟ್ಟ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...