Homeಮುಖಪುಟಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

- Advertisement -
- Advertisement -

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಲೋಧಿ 40,000 ಮತಗಳ ಅಂತರದಿಂದ ಜಯಗಳಿಸಿದರೆ, ಅಜಂಗಢದಲ್ಲಿ ಪಕ್ಷದ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಗೆಲುವು ಸಾಧಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ಶಿರೋಮಣಿ ಅಕಾಲಿದಳದ ಸಿಮ್ರಂಜಿತ್ ಸಿಂಗ್ ಮಾನ್ 7,000 ಮತಗಳ ಅಂತರದಿಂದ ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ರಾಜಿಂದರ್ ನಗರ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ದುರ್ಗೇಶ್ ಪಾಠಕ್ 11,000 ಮತಗಳಿಂದ ಗೆದ್ದಿದ್ದಾರೆ.

ತ್ರಿಪುರಾದಲ್ಲಿ ಅಗರ್ತಲಾ, ಜುಬಾರಾಜ್‌ನಗರ, ಸುರ್ಮಾ ಮತ್ತು ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಚುನಾಯಿತರಾಗಬೇಕಾಗಿದ್ದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬರ್ಡೋವಾಲಿಯಲ್ಲಿ 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದರು.

ಆಂಧ್ರಪ್ರದೇಶದ ಆತ್ಮಕೂರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಮೇಕಪತಿ ವಿಕ್ರಮ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಜೂನ್ 23 ರಂದು ಉಪಚುನಾವಣೆ ನಡೆದಿತ್ತು.

ಎಸ್‌ಪಿಗೆ ಆಘಾತ

ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ ಈ ಚುನಾವಣೆಯಲ್ಲಿ ಬಿದ್ದಿದೆ. ರಾಮ್‌ಪುರ, ಅಜಂಗಢ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ಹಿನ್ನಡೆಯಾಗಿದೆ. ರಾಂಪುರದಲ್ಲಿ ನಡೆದ ನೇರ ಸ್ಪರ್ಧೆಯಲ್ಲಿ ಬಿಜೆಪಿಯ ಘನಶ್ಯಾಮ್ ಲೋಧಿ ಅವರು ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ಮೊಹಮ್ಮದ್ ಅಸೀಂ ರಾಜಾ ಅವರನ್ನು 42,192 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಲೋಧಿ ಅವರು 42,000 ಮತಗಳಿಂದ ಗೆದ್ದಿದ್ದಾರೆ ಎಂದು ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಬಿಜೆಪಿ ಅಭ್ಯರ್ಥಿಗೆ ಗೆಲುವಿನ ಪ್ರಮಾಣಪತ್ರ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೋಧಿ 3,67,397 ಮತಗಳನ್ನು (ಶೇ 51.96) ಗಳಿಸಿದರೆ, ಎಸ್‌ಪಿಯ ರಾಜಾ 3,25,205 (ಶೇ 46) ಮತಗಳನ್ನು ಪಡೆದರು ಎಂದು ಚುನಾವಣಾ ಆಯೋಗ (ಇಸಿ) ತಿಳಿಸಿದೆ.

ಎರಡೂ ಕ್ಷೇತ್ರಗಳು ಅಖಿಲೇಶ್ ಯಾದವ್ ಪಕ್ಷದ ಭದ್ರಕೋಟೆಗಳಾಗಿದ್ದವು.

“ಉಪಚುನಾವಣೆಯಲ್ಲಿನ ಗೆಲುವು 2024ರ ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಆಶಾವಾದದ ಸಂದೇಶವನ್ನು ರವಾನಿಸಿದೆ. ಜನರು ಪ್ರಧಾನಿ ಮೋದಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರದ ಮೇಲೆ ತಮ್ಮ ವಿಶ್ವಾಸವನ್ನು ತೋರಿಸಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.

PC: NDTV

ತ್ರಿಪುರದಲ್ಲಿ ಹಿಂಸಾಚಾರ

ತ್ರಿಪುರಾ ವಿಧಾನಸಭೆಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ಪ್ರಕಟವಾದ ಕೆಲವೇ ಗಂಟೆಗಳ ನಂತರ, ಅಗರ್ತಲಾ ನಗರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪೋಸ್ಟ್ ಆಫೀಸ್ ಚೌಮುಹಾನಿಯಲ್ಲಿರುವ ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಘರ್ಷಣೆ ಸಂಭವಿಸಿದೆ.

ಇದನ್ನೂ ಓದಿರಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

“ಬಿಜೆಪಿ ಬೆಂಬಲಿತ ಗೂಂಡಾಗಳ ಗುಂಪು ಕಾಂಗ್ರೆಸ್‌ ಬೆಂಬಲಿಗರ ಮೇಲೆ ದಾಳಿ ಮಾಡಿದೆ. ಯುವ ಕಾಂಗ್ರೆಸ್ ಕಾರ್ಯಕರ್ತನಿಗೆ ಇರಿಯಲಾಗಿದೆ. ಪಕ್ಷದ ಕೇಂದ್ರ ಕಚೇರಿಗೆ ಕಲ್ಲು ತೂರಾಟ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ತಲೆಗೆ ಗಾಯವಾಗಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಅಗರ್ತಲಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ನಂತರ ಬಿಜೆಪಿ ಗೂಂಡಾಗಳು ನಮ್ಮ ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆಸಿದ ಕೆಟ್ಟ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...