Homeಮುಖಪುಟಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

- Advertisement -
- Advertisement -

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

ಹಿಮಾಚಲ ಪ್ರದೇಶ – ಮಂಡಿ

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಆಗ ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಉಪಚುನಾವಣೆ ಘೋಷಣೆಯಾಗಿತ್ತು. ಬಿಜೆಪಿಯು ಬ್ರಿಗೇಡಿಯರ್ ಖುಶಾಲ್ ಸಿಂಗ್ ಠಾಕೂರ್ ರವರಿಗೆ ಟಿಕೆಟ್ ನೀಡಿತ್ತು. ಕಾಂಗ್ರೆಸ್‌ ಪಕ್ಷವು ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ರವರನ್ನು ಕಣಕ್ಕಿಳಿಸಿದ್ದರು. ನೇರಾ ನೇರ ಪೈಪೋಟಿ ನಡೆದು ಕೊನೆಗೆ ಕಾಂಗ್ರೆಸ್‌ನ ಪ್ರತಿಭಾ ಸಿಂಗ್ 7,490 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಬಿಜೆಪಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ.

ಮಧ್ಯಪ್ರದೇಶ – ಖಾಂಡ್ವಾ

ಬಿಜೆಪಿ ಅಭ್ಯರ್ಥಿ ಜ್ಞಾನೇಶ್ವರ್ ಪಾಟೀಲ್ ಅವರು ತಮ್ಮ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜನಾರಾಯಣ್ ಸಿಂಗ್ ಅವರನ್ನು 80,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನದ ನಂತರ ಖಾಂಡ್ವಾ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಗೆಲುವಿನ ಮೂಲಕ ಆ ಸ್ಥಾನವನ್ನು ಬಿಜೆಪಿ ಉಳಿಸಿಕೊಂಡಿದೆ.

ದಾದ್ರ ಮತ್ತು ನಗರ ಹಾವೇಲಿ

ಮಾಜಿ ಸ್ವತಂತ್ರ ಸಂಸದ ದಿವಂಗತ ಮೋಹನ್ ದೇಲ್ಕರ್ ಅವರ ಪತ್ನಿ, ಶಿವಸೇನಾ ಅಭ್ಯರ್ಥಿ ಕಲಾಬೆನ್ ದೇಲ್ಕರ್ ಅವರು ದಾದ್ರಾ ಮತ್ತು ನಗರ ಹಾವೇಲಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 51,269 ಮತಗಳಿಂದ ಗೆದ್ದಿದ್ದಾರೆ.

2019 ರಲ್ಲಿ ಸ್ವತಂತ್ರ ಅಭ್ಯರ್ಥಿ ಮೋಹನ್ ದೇಲ್ಕರ್ ಬಿಜೆಪಿಯ ನಾಥುಭೈ ಪಟೇಲ್ ಅವರನ್ನು 9001 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ ಈ ವರ್ಷದ ಫೆಬ್ರವರಿ 22 ರಂದು ಸಂಸದರಾಗಿದ್ದ ಮೋಹನ್ ದೇಲ್ಕರ್ ಹೋಟೆಲ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಹಾಗಾಗಿ ಇಲ್ಲಿ ಉಪಚುನಾವಣೆ ನಡೆಸಲಾಯಿತು. ಅವರ ಪತ್ನಿ ಶಿವಸೇನೆ ಟಿಕೆಟ್ ಅಡಿಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅಲ್ಲಿಗೆ ಸ್ವತಂತ್ರ ಅಭ್ಯರ್ಥಿಯ ಸ್ಥಾನ ಶಿವಸೇನೆ ಪಾಲಾಗಿದೆ.


ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...