Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...