Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...