Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...