Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...