Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...