Homeಮುಖಪುಟಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

ಲೋಕಸಭೆ: ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಪ್ರಾತಿನಿಧ್ಯದ ಮಸೂದೆ ಚರ್ಚೆ

- Advertisement -
- Advertisement -

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಪ್ರಾತಿನಿಧ್ಯದ ಮಸೂದೆಯ ಕುರಿತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ  ಮಾತನಾಡಿದರು.

ಮಂಗಳವಾರ ಲೋಕಸಭೆಯಲ್ಲಿ ಚರ್ಚೆ ಮುಂದುವರಿದಾಗ, ಹಲವಾರು ವಿರೋಧ ಪಕ್ಷದ ಸಂಸದರು ದೇಶಾದ್ಯಂತ 2021 ರ ಜನಗಣತಿಯನ್ನು ನಡೆಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಜನಗಣತಿ ಇತಿಹಾಸದಲ್ಲೇ ಪ್ರಥಮ ಬಾರಿ ಸಾಕಷ್ಟು ಸಮಯದಿಂದ ವಿಳಂಬವಾಗಿದೆ. ಇನ್ನೂ ಮುಂದೆಯೂ ಜನಗಣತಿ ಪ್ರಾರಂಭವಾಗುವ ಯಾವುದೇ “ಸೂಚನೆಗಳು” ಇಲ್ಲದ ಕಾರಣ ಸಮಯಕ್ಕೆ ಮಿತಿ ಹಾಕುವ (ಗಡಿ ನಿರ್ಧರಿಸುವಿಕೆ) ಸಾಮರ್ಥ್ಯ ಕೇಂದ್ರಕ್ಕೆ ಇದೆಯೇ ಎಂದು ಕೆಲವರು ಅನುಮಾನಿಸಿದರು.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯವನ್ನು ಮರುಸಂಘಟಿಸುವ ಕುರಿತು ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮಂಡಿಸಿದ ಗೋವಾ ರಾಜ್ಯ ಮಸೂದೆ-2024 ಅನ್ನು ಲೋಕಸಭೆಯಲ್ಲಿ ಮತ್ತೆ ಚರ್ಚಿಸಲಾಯಿತು.

ಈ ಕಾಯ್ದೆಯು ಜನಗಣತಿ ಆಯುಕ್ತರಿಗೆ ಗೋವಾದಲ್ಲಿ ST (ಪರಿಶಿಷ್ಟ ಪಂಗಡ) ಜನಸಂಖ್ಯೆಯನ್ನು “ನಿರ್ಧರಿಸಲು ಅಥವಾ ಅಂದಾಜು ಮಾಡಲು” ಅಧಿಕಾರ ನೀಡುತ್ತದೆ ಮತ್ತು ಇದು ಚುನಾವಣಾ ಆಯೋಗಕ್ಕೆ (EC) ಗೋವಾ ವಿಧಾನಸಭೆಗಳಲ್ಲಿ ಸ್ಥಾನಗಳನ್ನು ಮರುಸಂಘಟಿಸಲು ಸಹಾಯ ಮಾಡುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ST ಗಳಿಗೆ ಸ್ಥಾನಗಳನ್ನು ಹಂಚುತ್ತದೆ.

ಗೋವಾದಲ್ಲಿ ST ಜನಸಂಖ್ಯೆಯು 2001ರ ಜನಗಣತಿ ಅಂಕಿಅಂಶಗಳನ್ನು  2011 ರ ಜನಗಣತಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ.

2001ರ ಜನಗಣತಿಯ ಪ್ರಕಾರ ಗೋವಾದಲ್ಲಿ 566 ST ಜನಸಂಖ್ಯೆ ದಾಖಲಾಗಿತ್ತು ಮತ್ತು 2011ರ ಜನಗಣತಿಯಲ್ಲಿ  1,49,275 ಆಗಿದೆ. ST ಜನಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಗಮನಾರ್ಹ ಕಾರಣವೆಂದರೆ ಮೂರು ಹೊಸ ಸಮುದಾಯಗಳು ಅಂದರೆ ಕುಂಬಿ, ಗೌಡ ಮತ್ತು ವೆಲಿಪ್  ಗಳು 2003ರಲ್ಲಿ ಗೋವಾದ ST ಪಟ್ಟಿಗೆ ಸೇರಿಸಿದ್ದಾಗಿದೆ.

ಒಟ್ಟಾರೆಯಾಗಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಪ್ರತಿಪಕ್ಷ ಸಂಸದರಾದ ಪ್ರತಿಮಾ ಮೊಂಡಲ್ (ತೃಣಮೂಲ ಕಾಂಗ್ರೆಸ್), ಸುಪ್ರಿಯಾ ಸುಳೆ (ಎನ್‌ಸಿಪಿ[ಎಸ್‌ಪಿ]) ಮತ್ತು ಕಿರ್ಸನ್ ನಾಮ್‌ದೇವ್ (ಕಾಂಗ್ರೆಸ್) ಅವರು ದೇಶಾದ್ಯಂತ ಜನಗಣತಿ ನಡೆಸುವುದಕ್ಕೆ ಸಮಯದ ಮಿತಿ ಹಾಕುವ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಿದರು. ಕೇಂದ್ರವು 2021ರ ಜನಗಣತಿಯ ಬಗ್ಗೆ ಮೌನವಾಗಿದೆ, ಅದು ಇನ್ನೂ ಪ್ರಾರಂಭಿಸಬೇಕಿದೆ ಎಂದರು.

2029ರ ಒಳಗೆ ಮುಂದಿನ ಜನಗಣತಿ ನಡೆಸಿ, ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಸರಕಾರ ತೋರಬೇಕೆಂದು ಸುಳೆ ಕೋರಿದರು.

ಜನಗಣತಿ ಕಾರ್ಯಕ್ಕೆ ಸುಮಾರು ₹ 12,000 ಕೋಟಿ ಬೇಕಾಗುತ್ತದೆ ಎಂದು ಹಿಂದಿನ ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಸದನದಲ್ಲಿ ಅಂಗೀಕಾರವಾದ ಅನುದಾನವು ಕೇವಲ 1,000 ಕೋಟಿ ರೂ. ಬಜೆಟ್ ಮಾತ್ರ ತೋರಿಸಿದೆ ಎಂದು ಸುಳೆ ತಿಳಿಸಿದರು.

ಅವರ ಸಹೋದ್ಯೋಗಿ ಕಿರ್ಸಾನ್ ನಾಮದೇವ್ ಅವರು ಇದೇ ಅಭಿಪ್ರಾಯವನ್ನು ಪ್ರತಿಧ್ವನಿಸುತ್ತಾ, “150 ವರ್ಷಗಳಲ್ಲೇ ಮೊದಲ ಬಾರಿಗೆ, ಈ ದೇಶದಲ್ಲಿ ಜನಗಣತಿ ವಿಳಂಬವಾಗುತ್ತಿದೆ” ಎಂದು ಹೇಳಿದರು.

ತಮ್ಮ ಪಕ್ಷವು ಗೋವಾದ ಪರಿಶಿಷ್ಟ ಬುಡಕಟ್ಟುಗಳನ್ನು ಮಾತ್ರ ಬೆಂಬಲಿಸುವುದಿಲ್ಲ. ದೇಶದ ಎಲ್ಲಾ ಜನರನ್ನು ಬೆಂಬಲಿಸುತ್ತದೆ, ನಮ್ಮ ಪಕ್ಷವು ರಾಷ್ಟ್ರವ್ಯಾಪಿ ಜಾತಿಗಣತಿಗೆ ಮತ್ತಷ್ಟು ಒತ್ತು ನೀಡುತ್ತದೆ ಎಂದು ನಾಮದೇವ್ ಹೇಳಿದರು.

ಏತನ್ಮಧ್ಯೆ, ಆಡಳಿತಾರೂಢ ಮೈತ್ರಿಕೂಟದ ಹಲವಾರು ಸಂಸದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ ಆದಿವಾಸಿಗಳ ಉನ್ನತಿಗಾಗಿ ಅದರ ಬದ್ಧತೆಯ ಪರವಾಗಿ ಮಾತನಾಡಿದರು.

ಇದನ್ನೂ ಓದಿ….ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...