HomeUncategorizedಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ 'ಕಮಲ-ದಳ' ಮುಖಂಡರು

ಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ ‘ಕಮಲ-ದಳ’ ಮುಖಂಡರು

- Advertisement -
- Advertisement -

ಲೋಕಸಭಾ ಚುನಾವಣೆ ಸಬಂಧ ಸೋಮವಾರ ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದ್ದು, ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ನಂತರ ಬಿಜೆಪಿಗೆ ಪ್ರವೇಶಿಸಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

‘2019ರ ಚುನಾವಣೆಯಲ್ಲಿ ಬಿಜೆಪಿಯ ಕೊಂಡಜ್ಜಿ ವಿಶ್ವನಾಥ್‌ ಅವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಬೆಂಬಲ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ ಇದ್ದುಕೊಂಡು ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆಯೇ ಅಥವಾ ಬೇರೆ ಏನಾದರೂ ಮಾಡುತ್ತಾರೆಯೇ’ ಎಂದು ಕೃಷ್ಣಪ್ಪ ಅವರು ಪ್ರಶ್ನಿಸಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು.

ವಾಕ್ಸಮರ ತಾರಕಕ್ಕೆ ಏರುತ್ತಿದ್ದಂತೆಯೇ ಕೃಷ್ಣಪ್ಪ ಹೇಳಿಕೆಗೆ ಸಮಜಾಯಿಷಿ ಕೊಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್‌ ಅವರನ್ನು ತಡೆದ ವಿ. ಸೋಮಣ್ಣ, ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ‘ಈಗ ಏನೂ ಮಾತನಾಡುವುದು ಬೇಡ’ ಎಂದು ವಿಶ್ವನಾಥ್ ಅವರನ್ನು ವಾಪಸ್‌ ಕಳುಹಿಸಿದರು. ಇದರಿಂದಾಗಿ ವೇದಿಕೆ ಮೇಲೆಯೇ ಮುಖಂಡರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ವೇದಿಕೆಯ ಮುಂಭಾಗದಲ್ಲಿದ್ದ ಬಿಜೆಪಿಯ ಕಡೇಹಳ್ಳಿ ಸಿದ್ದೇಗೌಡ ಮಾತನಾಡಿ, “ಕೃಷ್ಣಪ್ಪ ಯಾವಾಗಲೂ ಇಂತಹ ದುರಹಂಕಾರದ ಮಾತುಗಳನ್ನು ಆಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಕೇಳಿಸಿಕೊಂಡು ವೇದಿಕೆಯಲ್ಲಿದ್ದ ಜೆಡಿಎಸ್‌ನ ವೆಂಕಟಾಪುರದ ಯೋಗೇಶ್‌ ಅವರು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. ಎರಡೂ ಪಕ್ಷದ ಮುಖಂಡರನ್ನು ಸಮಾಧಾನ ಪಡಿಸಲು ಸೋಮಣ್ಣ ಯತ್ನಿಸಿದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿಯ ರಾಜ್ಯ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ನಡುವೆ ಸೈದ್ದಾಂತಿಕ ಹೊಂದಾಣಿಕೆ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಸಮಾಧಾನ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದರೂ, ಚುನಾವಣೆಗೆ ಮುನ್ನ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡದೇ ಇರುವುದು ಸೋಮಣ್ಣ ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್  ಸ್ಪರ್ಧೆ ಮಾಡಲಿದೆ. ಆದರೆ, ಜೆಡಿಎಸ್ ಯಾವ ಕ್ಷೇತ್ರಗಳಿಗೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಾದ  ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...