HomeUncategorizedಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ 'ಕಮಲ-ದಳ' ಮುಖಂಡರು

ಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ ‘ಕಮಲ-ದಳ’ ಮುಖಂಡರು

- Advertisement -
- Advertisement -

ಲೋಕಸಭಾ ಚುನಾವಣೆ ಸಬಂಧ ಸೋಮವಾರ ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದ್ದು, ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ನಂತರ ಬಿಜೆಪಿಗೆ ಪ್ರವೇಶಿಸಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

‘2019ರ ಚುನಾವಣೆಯಲ್ಲಿ ಬಿಜೆಪಿಯ ಕೊಂಡಜ್ಜಿ ವಿಶ್ವನಾಥ್‌ ಅವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಬೆಂಬಲ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ ಇದ್ದುಕೊಂಡು ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆಯೇ ಅಥವಾ ಬೇರೆ ಏನಾದರೂ ಮಾಡುತ್ತಾರೆಯೇ’ ಎಂದು ಕೃಷ್ಣಪ್ಪ ಅವರು ಪ್ರಶ್ನಿಸಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು.

ವಾಕ್ಸಮರ ತಾರಕಕ್ಕೆ ಏರುತ್ತಿದ್ದಂತೆಯೇ ಕೃಷ್ಣಪ್ಪ ಹೇಳಿಕೆಗೆ ಸಮಜಾಯಿಷಿ ಕೊಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್‌ ಅವರನ್ನು ತಡೆದ ವಿ. ಸೋಮಣ್ಣ, ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ‘ಈಗ ಏನೂ ಮಾತನಾಡುವುದು ಬೇಡ’ ಎಂದು ವಿಶ್ವನಾಥ್ ಅವರನ್ನು ವಾಪಸ್‌ ಕಳುಹಿಸಿದರು. ಇದರಿಂದಾಗಿ ವೇದಿಕೆ ಮೇಲೆಯೇ ಮುಖಂಡರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ವೇದಿಕೆಯ ಮುಂಭಾಗದಲ್ಲಿದ್ದ ಬಿಜೆಪಿಯ ಕಡೇಹಳ್ಳಿ ಸಿದ್ದೇಗೌಡ ಮಾತನಾಡಿ, “ಕೃಷ್ಣಪ್ಪ ಯಾವಾಗಲೂ ಇಂತಹ ದುರಹಂಕಾರದ ಮಾತುಗಳನ್ನು ಆಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಕೇಳಿಸಿಕೊಂಡು ವೇದಿಕೆಯಲ್ಲಿದ್ದ ಜೆಡಿಎಸ್‌ನ ವೆಂಕಟಾಪುರದ ಯೋಗೇಶ್‌ ಅವರು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. ಎರಡೂ ಪಕ್ಷದ ಮುಖಂಡರನ್ನು ಸಮಾಧಾನ ಪಡಿಸಲು ಸೋಮಣ್ಣ ಯತ್ನಿಸಿದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿಯ ರಾಜ್ಯ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ನಡುವೆ ಸೈದ್ದಾಂತಿಕ ಹೊಂದಾಣಿಕೆ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಸಮಾಧಾನ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದರೂ, ಚುನಾವಣೆಗೆ ಮುನ್ನ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡದೇ ಇರುವುದು ಸೋಮಣ್ಣ ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್  ಸ್ಪರ್ಧೆ ಮಾಡಲಿದೆ. ಆದರೆ, ಜೆಡಿಎಸ್ ಯಾವ ಕ್ಷೇತ್ರಗಳಿಗೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಾದ  ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...