HomeUncategorizedಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ 'ಕಮಲ-ದಳ' ಮುಖಂಡರು

ಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ ‘ಕಮಲ-ದಳ’ ಮುಖಂಡರು

- Advertisement -
- Advertisement -

ಲೋಕಸಭಾ ಚುನಾವಣೆ ಸಬಂಧ ಸೋಮವಾರ ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದ್ದು, ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ನಂತರ ಬಿಜೆಪಿಗೆ ಪ್ರವೇಶಿಸಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

‘2019ರ ಚುನಾವಣೆಯಲ್ಲಿ ಬಿಜೆಪಿಯ ಕೊಂಡಜ್ಜಿ ವಿಶ್ವನಾಥ್‌ ಅವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಬೆಂಬಲ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ ಇದ್ದುಕೊಂಡು ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆಯೇ ಅಥವಾ ಬೇರೆ ಏನಾದರೂ ಮಾಡುತ್ತಾರೆಯೇ’ ಎಂದು ಕೃಷ್ಣಪ್ಪ ಅವರು ಪ್ರಶ್ನಿಸಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು.

ವಾಕ್ಸಮರ ತಾರಕಕ್ಕೆ ಏರುತ್ತಿದ್ದಂತೆಯೇ ಕೃಷ್ಣಪ್ಪ ಹೇಳಿಕೆಗೆ ಸಮಜಾಯಿಷಿ ಕೊಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್‌ ಅವರನ್ನು ತಡೆದ ವಿ. ಸೋಮಣ್ಣ, ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ‘ಈಗ ಏನೂ ಮಾತನಾಡುವುದು ಬೇಡ’ ಎಂದು ವಿಶ್ವನಾಥ್ ಅವರನ್ನು ವಾಪಸ್‌ ಕಳುಹಿಸಿದರು. ಇದರಿಂದಾಗಿ ವೇದಿಕೆ ಮೇಲೆಯೇ ಮುಖಂಡರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ವೇದಿಕೆಯ ಮುಂಭಾಗದಲ್ಲಿದ್ದ ಬಿಜೆಪಿಯ ಕಡೇಹಳ್ಳಿ ಸಿದ್ದೇಗೌಡ ಮಾತನಾಡಿ, “ಕೃಷ್ಣಪ್ಪ ಯಾವಾಗಲೂ ಇಂತಹ ದುರಹಂಕಾರದ ಮಾತುಗಳನ್ನು ಆಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಕೇಳಿಸಿಕೊಂಡು ವೇದಿಕೆಯಲ್ಲಿದ್ದ ಜೆಡಿಎಸ್‌ನ ವೆಂಕಟಾಪುರದ ಯೋಗೇಶ್‌ ಅವರು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. ಎರಡೂ ಪಕ್ಷದ ಮುಖಂಡರನ್ನು ಸಮಾಧಾನ ಪಡಿಸಲು ಸೋಮಣ್ಣ ಯತ್ನಿಸಿದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿಯ ರಾಜ್ಯ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ನಡುವೆ ಸೈದ್ದಾಂತಿಕ ಹೊಂದಾಣಿಕೆ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಸಮಾಧಾನ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದರೂ, ಚುನಾವಣೆಗೆ ಮುನ್ನ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡದೇ ಇರುವುದು ಸೋಮಣ್ಣ ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್  ಸ್ಪರ್ಧೆ ಮಾಡಲಿದೆ. ಆದರೆ, ಜೆಡಿಎಸ್ ಯಾವ ಕ್ಷೇತ್ರಗಳಿಗೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಾದ  ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...