HomeUncategorizedಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ 'ಕಮಲ-ದಳ' ಮುಖಂಡರು

ಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ ‘ಕಮಲ-ದಳ’ ಮುಖಂಡರು

- Advertisement -
- Advertisement -

ಲೋಕಸಭಾ ಚುನಾವಣೆ ಸಬಂಧ ಸೋಮವಾರ ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದ್ದು, ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ನಂತರ ಬಿಜೆಪಿಗೆ ಪ್ರವೇಶಿಸಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

‘2019ರ ಚುನಾವಣೆಯಲ್ಲಿ ಬಿಜೆಪಿಯ ಕೊಂಡಜ್ಜಿ ವಿಶ್ವನಾಥ್‌ ಅವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಬೆಂಬಲ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ ಇದ್ದುಕೊಂಡು ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆಯೇ ಅಥವಾ ಬೇರೆ ಏನಾದರೂ ಮಾಡುತ್ತಾರೆಯೇ’ ಎಂದು ಕೃಷ್ಣಪ್ಪ ಅವರು ಪ್ರಶ್ನಿಸಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು.

ವಾಕ್ಸಮರ ತಾರಕಕ್ಕೆ ಏರುತ್ತಿದ್ದಂತೆಯೇ ಕೃಷ್ಣಪ್ಪ ಹೇಳಿಕೆಗೆ ಸಮಜಾಯಿಷಿ ಕೊಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್‌ ಅವರನ್ನು ತಡೆದ ವಿ. ಸೋಮಣ್ಣ, ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ‘ಈಗ ಏನೂ ಮಾತನಾಡುವುದು ಬೇಡ’ ಎಂದು ವಿಶ್ವನಾಥ್ ಅವರನ್ನು ವಾಪಸ್‌ ಕಳುಹಿಸಿದರು. ಇದರಿಂದಾಗಿ ವೇದಿಕೆ ಮೇಲೆಯೇ ಮುಖಂಡರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ವೇದಿಕೆಯ ಮುಂಭಾಗದಲ್ಲಿದ್ದ ಬಿಜೆಪಿಯ ಕಡೇಹಳ್ಳಿ ಸಿದ್ದೇಗೌಡ ಮಾತನಾಡಿ, “ಕೃಷ್ಣಪ್ಪ ಯಾವಾಗಲೂ ಇಂತಹ ದುರಹಂಕಾರದ ಮಾತುಗಳನ್ನು ಆಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಕೇಳಿಸಿಕೊಂಡು ವೇದಿಕೆಯಲ್ಲಿದ್ದ ಜೆಡಿಎಸ್‌ನ ವೆಂಕಟಾಪುರದ ಯೋಗೇಶ್‌ ಅವರು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. ಎರಡೂ ಪಕ್ಷದ ಮುಖಂಡರನ್ನು ಸಮಾಧಾನ ಪಡಿಸಲು ಸೋಮಣ್ಣ ಯತ್ನಿಸಿದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿಯ ರಾಜ್ಯ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ನಡುವೆ ಸೈದ್ದಾಂತಿಕ ಹೊಂದಾಣಿಕೆ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಸಮಾಧಾನ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದರೂ, ಚುನಾವಣೆಗೆ ಮುನ್ನ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡದೇ ಇರುವುದು ಸೋಮಣ್ಣ ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್  ಸ್ಪರ್ಧೆ ಮಾಡಲಿದೆ. ಆದರೆ, ಜೆಡಿಎಸ್ ಯಾವ ಕ್ಷೇತ್ರಗಳಿಗೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಾದ  ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...