Homeಮುಖಪುಟಲೋಕಸಭೆ ಚುನಾವಣೆ-2024: 'ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..' ಎಂದ ಕಾಂಗ್ರೆಸ್

ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಭಾರತೀಯ ಚುನಾವಣಾ ಆಯೋಗ (ಇಸಿಐ) 2024ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಇಂದು ಪ್ರಕಟಿಸಿದೆ. ಚುನಾವಣಾ ವೇಳಾಪಟ್ಟಿಯ ಘೋಷಣೆಯು ರಾಜಕೀಯ ಬಿಸಿಯನ್ನು ತೀವ್ರಗೊಳಿಸಿದೆ.

ವಿರೋಧ ಪಕ್ಷಗಳು 2024ರ ಲೋಕಸಭಾ ಚುನಾವಣೆಗೆ ತಾವು ಸಿದ್ಧವಾಗಿದ್ದೇವೆ ಎಂದು ಒತ್ತಿಹೇಳಿವೆ. ಆದರೆ, ಏಳು ಹಂತಗಳಲ್ಲಿ ಚುನಾವಣೆ ನಡೆಸುತ್ತಿರುವುದನ್ನು ಪ್ರಶ್ನಿಸಿ, ಪ್ರಜಾಪ್ರಭುತ್ವವನ್ನು ಉಳಿಸಲು ಇದು ಕೊನೆಯ ಅವಕಾಶ ಎಂದು ಕಾಂಗ್ರೆಸ್ ಕರೆದಿದೆ.

ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಿಂದ ಪ್ರಾರಂಭವಾಗಿ ಜೂನ್ 1 ರಂದು ಮುಕ್ತಾಯಗೊಳ್ಳಲಿದೆ. ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. ಲೋಕಸಭೆ ಚುನಾವಣೆ 2024 ಮತ್ತು ನಾಲ್ಕು ರಾಜ್ಯಗಳಿಗೆ 2024ರ ವಿಧಾನಸಭೆ ಚುನಾವಣೆಗಳ ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳ ಚುನಾವಣೆಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಎಂಸಿ) ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಚುನಾವಣಾ ವ್ಯವಸ್ಥೆಯು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ತನ್ನ ಹಣಬಲವನ್ನು ಚುನಾವಣೆಯಲ್ಲಿ ಬಳಸಲು ಸಹಾಯ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದೆ.

“ಒಂದು ಅಥವಾ ಎರಡು ಹಂತಗಳಲ್ಲಿ ಚುನಾವಣೆ ನಡೆಸುವಂತೆ ನಾವು ಚುನಾವಣಾ ಆಯೋಗವನ್ನು ಕೇಳಿದ್ದೇವೆ. ಆದರೆ, ಚುನಾವಣಾ ಸಮಿತಿಯು ಪಶ್ಚಿಮ ಬಂಗಾಳಕ್ಕೆ ಏಳು ಹಂತದ ಚುನಾವಣೆಯನ್ನು ಘೋಷಿಸಿದೆ; ಇದರಿಂದ ನಮಗೆ ತೃಪ್ತಿ ಇಲ್ಲ. ಚುನಾವಣಾ ಆಯೋಗವನ್ನು ಟೀಕಿಸದೆ, ಈ ರೀತಿಯ ಚುನಾವಣಾ ವ್ಯವಸ್ಥೆಯು ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿ ತನ್ನ ಹಣದ ಬಲವನ್ನು ಬಳಸಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ. ಅವರ ನಾಯಕರು ರಾಜ್ಯದಲ್ಲಿ ಸಾಧ್ಯವಾದಷ್ಟು ರ್ಯಾಲಿಗಳನ್ನು ನಡೆಸಲು ಸಾಧ್ಯವಾಗುತ್ತದೆ” ಎಂದು ಟಿಎಂಸಿಯ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭೆ ಚುನಾವಣೆ 2024ಕ್ಕಾಗಿ ತಮ್ಮ ‘ನ್ಯಾಯ’ ಘೋಷಣೆಯನ್ನು ಪುನರುಚ್ಚರಿಸಿದರು. ‘ಪ್ರಜಾಪ್ರಭುತ್ವವನ್ನು ಉಳಿಸಲು ಇದು ಕೊನೆಯ ಅವಕಾಶ’ ಎಂದು ಕರೆದರು. “2024 ರ ಲೋಕಸಭೆ ಚುನಾವಣೆಯು ಭಾರತಕ್ಕೆ ‘ನ್ಯಾಯದ ಬಾಗಿಲು’ ತೆರೆಯುತ್ತದೆ. ಪ್ರಜಾಪ್ರಭುತ್ವ ಮತ್ತು ನಮ್ಮ ಸಂವಿಧಾನವನ್ನು ಸರ್ವಾಧಿಕಾರದಿಂದ ರಕ್ಷಿಸಲು ಇದು ಬಹುಶಃ ಕೊನೆಯ ಅವಕಾಶವಾಗಿದೆ. ದ್ವೇಷ, ಲೂಟಿ, ನಿರುದ್ಯೋಗ, ಬೆಲೆ ಏರಿಕೆ ಮತ್ತು ದೌರ್ಜನ್ಯಗಳ ವಿರುದ್ಧ ‘ಭಾರತದ ಜನರು ನಾವು’ ಒಟ್ಟಾಗಿ ಹೋರಾಡುತ್ತೇವೆ; ಹಾತ್ ಬದ್ಲೇಗಾ ಹಲಾತ್” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

“ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ, ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಫಲಿತಾಂಶಗಳು ಅನುಕೂಲಕರವಾಗಿರುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಶಿವಸೇನೆ (ಯುಬಿಟಿ) ಸಂಸದ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಇದನ್ನೂ ಓದಿ; ಏ.19 ರಂದು ಅರುಣಾಚಲ-ಸಿಕ್ಕಿಂ; ಮೇ 13ರಂದು ಆಂಧ್ರ-ಒಡಿಶಾದಲ್ಲಿ ವಿಧಾನಸಭೆ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...