Homeಮುಖಪುಟಲೋಕಸಭಾ ಚುನಾವಣೆ: 362 ಕ್ಷೇತ್ರಗಳಲ್ಲಿ 5,54,598 ಮತಗಳನ್ನು ಎಣಿಕೆಗೆ ಪರಿಗಣಿಸದೆ ಕೈಬಿಡಲಾಗಿದೆ

ಲೋಕಸಭಾ ಚುನಾವಣೆ: 362 ಕ್ಷೇತ್ರಗಳಲ್ಲಿ 5,54,598 ಮತಗಳನ್ನು ಎಣಿಕೆಗೆ ಪರಿಗಣಿಸದೆ ಕೈಬಿಡಲಾಗಿದೆ

- Advertisement -
- Advertisement -

ಜೂನ್ 4 ರಂದು ಮಂಗಳವಾರ ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟಿಸುವ ವೇಳೆ ವಿವಿಧ ರಾಜ್ಯಗಳ 362 ಕ್ಷೇತ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಮೂಲಕ ಚಲಾವಣೆಯಾದ 5,54,598 ಮತಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಕಸದ ಬುಟ್ಟಿಗೆ ಹಾಕಿದೆ ಎಂದು ವರದಿಯಾಗಿದೆ.

ಅಲ್ಲದೆ, ಚುನಾವಣಾ ಆಯೋಗ 176 ಕ್ಷೇತ್ರಗಳಲ್ಲಿ 35,093 ಇವಿಎಂ ಮತಗಳನ್ನು ಹೆಚ್ಚುವರಿಯಾಗಿ ದಾಖಲಿಸಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಎರಡು ಅಂಕಿ ಅಂಶಗಳ ನಡುವೆ ತಾಳೆಯಾಗದೆ 542 ಕ್ಷೇತ್ರಗಳ ಪೈಕಿ 538ರಲ್ಲಿ ಮತಗಳ ಅಂತರ ಕಂಡು ಬಂದಿದೆ. ಅರ್ಥಾತ್ ಈ ಕ್ಷೇತ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಚಲಾಯಿಸಲಾದ ಮತಗಳ ಸಂಖ್ಯೆ ಮತ್ತು ಫಲಿತಾಂಶದ ದಿನ ಎಣಿಕೆ ಮಾಡಲಾದ ಮತಗಳ ಸಂಖ್ಯೆಗಳು ಪರಸ್ಪರ ಹೊಂದಾಣಿಕೆಯಾಗುತ್ತಿಲ್ಲ (ಅಂಚೆ ಮತಗಳು ಹೊರತುಪಡಿಸಿ). ಕನಿಷ್ಠ 267 ಕ್ಷೇತ್ರಗಳಲ್ಲಿ ಚಲಾಯಿತ ಮತಗಳು ಮತ್ತು ಎಣಿಸಲಾದ ಮತಗಳ ನಡುವಿನ ವ್ಯತ್ಯಾಸ 500ಕ್ಕೂ ಹೆಚ್ಚಿದೆ.

ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತದಾನ ನಡೆದ ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದ ಅಂಕಿ ಅಂಶಗಳನ್ನು ಚುನಾವಣಾ ಆಯೋಗ ಮೇ 25ರಂದು ಬಿಡುಗಡೆ ಮಾಡಿತ್ತು. ಆಯೋಗದ ಪ್ರಕಾರ ಈ ಕ್ಷೇತ್ರದಲ್ಲಿ ಚಲಾಯಿಸಿದ ಇವಿಎಂ ಮತಗಳ ಸಂಖ್ಯೆ 14,30,738. ಆದರೆ, ಜೂನ್ 4ರ ಮತ ಎಣಿಕೆಯಲ್ಲಿ ಎಣಿಸಲಾದ ಮತಗಳ ಸಂಖ್ಯೆ 14,13,947. ಅಂದರೆ 16,791 ಮತಗಳನ್ನು ಎಣಿಕೆಗೆ ಪರಿಗಣಿಸಿಲ್ಲ.

ಏಪ್ರಿಲ್ 26ರಂದು ಮತದಾನ ನಡೆದ ಅಸ್ಸಾಮಿನ ಕರೀಮ್ ಗಂಜ್ ಕ್ಷೇತ್ರದಲ್ಲಿ ಆಯೋಗದ ಅಂಕಿ ಅಂಶಗಳ ಪ್ರಕಾರ ಚಲಾಯಿಸಲಾದ ಒಟ್ಟು ಇವಿಎಂ ಮತಗಳು 11,32,538. ಆದರೆ, ಫಲಿತಾಂಶದ ದಿನದಂದು ಎಣಿಸಲಾದ ಮತಗಳ ಸಂಖ್ಯೆ 11,40,349. ಹೆಚ್ಚುವರಿಯಾಗಿ 3,811 ಮತಗಳನ್ನು ಹೆಚ್ಚುವರಿಯಾಗಿ ಎಣಿಸಲಾಗಿದೆ.

ಈ ಎರಡು ಅಂಕಿ ಅಂಶಗಳು ತಾಳೆಯಾಗದೆ ಇರುವುದಕ್ಕೆ ಆಯೋಗ ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಎಕ್ಸ್‌ನಲ್ಲಿ ಉತ್ತರ ಪ್ರದೇಶಕ್ಕೆ ಸೀಮಿತಗೊಂಡಂತೆ ಈ ವ್ಯತ್ಯಾಸದ ಕುರಿತು ವಿವರಣೆ ನೀಡಿದ್ದಾರೆ.

“ಚುನಾವಣಾ ಆಯೋಗ ಮತ್ತು ಹಲವಾರು ಕೈಪಿಡಿಗಳಲ್ಲಿ ಒದಗಿಸಲಾಗಿರುವ ಸವಿವರ ಶಿಷ್ಟಾಚಾರದ (ಪ್ರೋಟೋಕಾಲ್) ಪ್ರಕಾರ ಹಲವು ನಿರ್ದಿಷ್ಟ ಮತಗಟ್ಟೆಗಳ ಮತಗಳನ್ನು ಎಣಿಕೆ ಮಾಡಿಲ್ಲ. ಹೀಗಾಗಿ, ಚಲಾಯಿತ ಮತಗಳು ಮತ್ತು ಎಣಿಸಿದ ಮತಗಳ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಅಸಲು ಮತದಾನ ಶುರುವಾಗುವ ಮುನ್ನ ಕಂಟ್ರೋಲ್ ಯೂನಿಟ್‌ನಲ್ಲಿ ಉಳಿದಿರಬಹುದಾದ ಅಣಕು ಚುನಾವಣಾ ಅಂಕಿ ಅಂಶವನ್ನು ಚುನಾವಣಾಧಿಕಾರಿ ಅಳಿಸಲು ಸಾಧ್ಯವಾಗದೆ ಹೋದಾಗ ಅಥವಾ ವಿವಿಪ್ಯಾಟ್ ನಲ್ಲಿರುವ ಅಣಕು ಮತ ಚೀಟಿಗಳನ್ನು ಅಸಲು ಮತದಾನ ಆರಂಭ ಆಗುವ ಮುನ್ನ ತೆಗೆದು ಹಾಕದೆ ಇದ್ದಾಗ ಈ ವ್ಯತ್ಯಾಸ ಕಂಡು ಬರುತ್ತದೆ” ಎಂದು ಹೇಳಿದ್ದಾರೆ.

ಎರಡನೆಯದಾಗಿ ಕಂಟ್ರೋಲ್ ಯೂನಿಟ್‌ನಲ್ಲಿ ದಾಖಲಾದ ಒಟ್ಟು ಚಲಾಯಿತ ಮತಗಳ ಸಂಖ್ಯೆಗೂ ಚುನಾವಣಾಧಿಕಾರಿ ಭರ್ತಿ ಮಾಡಿದ ನಮೂನೆ 17ಸಿ ಯಲ್ಲಿ ದಾಖಲಿಸಿದ ಒಟ್ಟು ಚಲಾಯಿತ ಮತಗಳಿಗೂ ಅಂತರವಿದ್ದಾಗ ಈ ವ್ಯತ್ಯಾಸ ಕಂಡು ಬಂದಿದೆ. ಈ ಎರಡೂ ಸನ್ನಿವೇಶಗಳಲ್ಲಿ ಚುನಾವಣಾಧಿಕಾರಿಯಿಂದ ಆಕಸ್ಮಿಕವಾಗಿ ಜರುಗುವ ದೋಷಗಳಿವು. ಉದ್ದೇಶಪೂರ್ವಕ ಅಲ್ಲ. ಎಲೆಕ್ಟ್ರಾನಿಕ್ ಮತಯಂತ್ರ ಸರಿಯಾಗಿ ಕೆಲಸ ಮಾಡುತ್ತಿದೆಯೇ ಇಲ್ಲವೇ ಎಂದು ಪರೀಕ್ಷಿಸಲು ಮತದಾನದ ದಿನ ಬೆಳಗಿನ ಜಾವ ಐದಕ್ಕೆ ಅಣಕು ಮತದಾನ ನಡೆಯುತ್ತದೆ. ಪ್ರತಿ ಅಭ್ಯರ್ಥಿಗೆ ಐದು ಅಣಕು ಮತಗಳನ್ನು ಹಾಕಲಾಗುತ್ತದೆ. ಅವುಗಳ ಫಲಿತಾಂಶಗಳನ್ನು ಆನಂತರ ಪರೀಕ್ಷಿಸಲಾಗುತ್ತದೆ.

ವಾಸ್ತವ ಮತದಾನ ಆರಂಭ ಆಗುವ ಮುನ್ನ ಕಂಟ್ರೋಲ್ ಯೂನಿಟ್‌ನಿಂದ ಈ ಮತಗಳನ್ನು ಚುನಾವಣಾಧಿಕಾರಿ ಅಳಿಸಿ ಹಾಕಬೇಕು. ನಮೂನೆ 17 ಸಿ ಎಂಬುದು ಪ್ರತಿಯೊಂದು ಮತಗಟ್ಟೆಯ ಮತದಾನದ ಸಮಗ್ರ ದಾಖಲೆ. ಪ್ರತಿಯೊಂದು ಮತಗಟ್ಟೆಗೆ ಹಂಚಿಕೆ ಮಾಡಲಾದ ಒಟ್ಟು ಮತದಾರರ ಸಂಖ್ಯೆ, ನಿರ್ದಿಷ್ಟ ಮತಗಟ್ಟೆ ವ್ಯಾಪ್ತಿಯಲ್ಲಿ ನೋಂದಣಿ ಮಾಡಿಕೊಂಡ ಒಟ್ಟು ಮತದಾರರ ಸಂಖ್ಯೆ, ಮತದಾನ ಮಾಡದೆ ಇರುವ ಮತದಾರರ ಸಂಖ್ಯೆ, ಮತದಾನ ಮಾಡಲು ಅವಕಾಶ ನಿರಾಕರಿಸಲಾದವರ ಸಂಖ್ಯೆ, ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ಮುಖಾಂತರ ಚಲಾಯಿತ ಮತಗಳ ಸಂಖ್ಯೆ ಹಾಗೂ ಮತಪತ್ರಗಳು ಮತ್ತು ಪೇಪರ್ ಮೊಹರುಗಳ ಕುರಿತ ವಿವರಗಳನ್ನು ಫಾರ್ಮ್ 17 ಸಿ ಹೊಂದಿರುತ್ತದೆ.

ಆದರೆ, ಯಾವ್ಯಾವ ಸನ್ನಿವೇಶಗಳಲ್ಲಿ ಹೆಚ್ಚುವರಿ ಮತಗಳನ್ನು ಎಣಿಸಬಹುದು ಎಂಬುವುದಕ್ಕೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಸ್ಪಷ್ಟೀಕರಣ ನೀಡಿಲ್ಲ.

ಬಿಹಾರದ ಬಕ್ಸರ್‌ (1010), ಮಧ್ಯ ಪ್ರದೇಶದ ಮಂಡ್ಲಾ (1089), ಆಂಧ್ರ ಪ್ರದೇಶದ ಓಂಗೋಲ್ (1467) ಹಾಗೂ ಅಸ್ಸಾಮಿನ ಕರೀಮ್ ಗಂಜ್ (3811) ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳನ್ನು ಎಣಿಸಲಾಗಿದೆ. ಕರೀಮ್ ಗಂಜ್‌ನಲ್ಲಿ ಭಾರತೀಯ ಜನತಾ ಪಾರ್ಟಿಯ ಕೃಪಾನಾಥ ಮಲ್ಲಾ 18,360 ಮತಗಳ ಅಂತರದಿಂದ ಗೆದ್ದಿದ್ದಾರೆ. ಒಡಿಶಾದ ಜಜಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಬೀಂದ್ರ ನಾರಾಯಣ ಬೆಹೆರ ಅವರು ಕೇವಲ 1,587 ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲಿ ಎಣಿಸಲಾಗಿರುವ ಹೆಚ್ಚುವರಿ ಮತಗಳು 809.

ಈ ವ್ಯತ್ಯಾಸಗಳಿಗೆ ಕ್ಷೇತ್ರವಾರು ನಿರ್ದಿಷ್ಟ ವಿವರಣೆಗಳನ್ನು ನೀಡಬೇಕೆಂದು ದಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ನ ಸಹಸಂಸ್ಥಾಪಕ ಜಗದೀಪ್ ಛೋಕರ್ ಚುನಾವಣಾ ಆಯೋಗವನ್ನು ಒತ್ತಾಯಪಡಿಸಿದ್ದಾರೆ.

ಇವಿಎಂ ಮತಗಳ ಹೆಚ್ಚುವರಿ ಅಥವಾ ಕೊರತೆಯ ಕುರಿತು ಆಯೋಗ ಈವರೆಗೆ ಸಾಮಾನ್ಯ ವಿವರಣೆ ನೀಡಿದೆ. ಅದೂ ಟ್ವಿಟರ್ ನಲ್ಲಿ. ನಿರ್ದಿಷ್ಟ ವಿವರಗಳನ್ನು ನೀಡಲೇಬೇಕು. ಈ ಕಾರಣಕ್ಕಾಗಿ ನಮೂನೆ 17ಸಿ ಯನ್ನು ಸಾರ್ವಜನಿಕಗೊಳಿಸಬೇಕು ಎಂಬ ವಾದಕ್ಕೆ ಹೆಚ್ಚು ಪುಷ್ಟಿ ನೀಡುವ ಅಂಶವಿದು. ಚುನಾವಣೆಯ ಫಲಿತಾಂಶಗಳ ಕುರಿತು ನಾವು ಸಂದೇಹ ವ್ಯಕ್ತಪಡಿಸುತ್ತಿಲ್ಲ. ಆದರೆ, ಮತ ಎಣಿಕೆಯ ಕುರಿತು ಪಾರದರ್ಶಕವಾದ ಮತ್ತು ಕಟ್ಟು ನಿಟ್ಟಾದ ವ್ಯವಸ್ಥೆ ಇರಲೇಬೇಕು ಎಂಬುವುದು ಛೋಕರ್ ಅಭಿಪ್ರಾಯ.

ತಮಿಳುನಾಡಿನ ತಿರುವಳ್ಳೂರಿನಲ್ಲಿ ಚಲಾಯಿತ ಮತಗಳಿಗಿಂತ 16,791 ಕಡಿಮೆ ಮತಗಳನ್ನು ಎಣಿಸಲಾಗಿದೆ. ಅಸ್ಸಾಮಿನ ಕೋಕ್ರಝಾರ್ ನಲ್ಲಿ ಇಂತಹ ಮತಗಳ ಸಂಖ್ಯೆ 10,760. ಒಡಿಶಾದ ಧೇಂಕನಾಳದಲ್ಲಿ 9,427. ಕೇರಳದ ಆಲಪ್ಪುಝದಲ್ಲಿ 7,928 ಮತ್ತು ಆಂಧ್ರ ಪ್ರದೇಶದ ಗುಂಟೂರಿನಲ್ಲಿ 7,928.

ಕೋಕ್ರಝಾರ್‌ನಲ್ಲಿ ಯುನೈಟೆಡ್ ಪೀಪಲ್ಸ್ ಪಾರ್ಟಿಯ ಅಭ್ಯರ್ಥಿ ಜೊಯೊಂತ ಬಸುಮತಾರಿ 51,580 ಮತಗಳಿಂದ ಗೆದ್ದಿದ್ದಾರೆ. ಉತ್ತರ ಪ್ರದೇಶದ ಅಲೀಗಢದಲ್ಲಿ ಬಿಜೆಪಿಯ ಸತೀಶ್ ಕುಮಾರ್ ಗೌತಮ್ 15,647 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಕ್ಷೇತ್ರದಲ್ಲಿ ಎಣಿಕೆಗೆ ಪರಿಗಣಿಸದೆ ಕೈ ಬಿಟ್ಟ ಮತಗಳ ಸಂಖ್ಯೆ 5,896.

2019ರಲ್ಲಿಯೂ ಇಂತಹುದೇ ದೋಷಗಳನ್ನು ಕ್ವಿಂಟ್ ವರದಿ ಬಯಲು ಮಾಡಿತ್ತು. ದಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಈ ದೋಷಗಳನ್ನು ಸರಿಪಡಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟನ್ನು ಕೋರಿತ್ತು. ವಿವಿಪ್ಯಾಟ್ ಮತಚೀಟಿಗಳು ಮತ್ತು ಇವಿಎಂಗಳ ಮತಗಳನ್ನು ಸಂಪೂರ್ಣವಾಗಿ ಪರಸ್ಪರ ತಾಳೆ ನೋಡಬೇಕೆಂಬ ಅಹವಾಲಿನ ಜೊತೆಗೆ ಈ ಕೋರಿಕೆಯನ್ನೂ ನ್ಯಾಯಾಲಯ ತಿರಸ್ಕರಿಸಿತ್ತು.

ನಾಲ್ಕು ಕೋಟಿ ವಿವಿಪ್ಯಾಟ್ ಚೀಟಿಗಳನ್ನು ತಾಳೆ ನೋಡಿರುವುದಾಗಿಯೂ, ಎಣಿಸಲಾದ ಮತಗಳು ಮತ್ತು ವಿವಿಪ್ಯಾಟ್ ಚೀಟಿಗಳ ಸಂಖ್ಯೆಗಳ ನಡುವೆ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲವೆಂದೂ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ತೀರ್ಪು ಹೊರಬಿದ್ದಿತ್ತು.

ಕೃಪೆ : ದಿ ಕ್ವಿಂಟ್ 

ಇದನ್ನೂ ಓದಿ : ಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಮುಸ್ಲಿಮರಿಗೆ ಸಿಗದ ಪ್ರಾತಿನಿಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...