Homeಮುಖಪುಟಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಮೈತ್ರಿ ಘೋಷಿಸಿದ ಬಿಆರ್‌ಎಸ್‌-ಬಿಎಸ್‌ಪಿ

ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಮೈತ್ರಿ ಘೋಷಿಸಿದ ಬಿಆರ್‌ಎಸ್‌-ಬಿಎಸ್‌ಪಿ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ಘೋಷಿಸಿವೆ.

ಬಿಎಸ್‌ಪಿ ತೆಲಂಗಾಣ ಘಟಕದ ಅಧ್ಯಕ್ಷ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಆರ್‌ಎಸ್ ಪ್ರವೀಣ್ ಕುಮಾರ್ ಅವರೊಂದಿಗೆ ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್‌) ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, “ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರಿಂದ ಒಪ್ಪಿಗೆ ಪಡೆದ ನಂತರ ಕುಮಾರ್ ಅವರು ನಮ್ಮನ್ನು ಸಂಪರ್ಕಿಸಿ ಮೈತ್ರಿ ಪ್ರಸ್ತಾವ ಮಾಡಿದ್ದರು. ಹಾಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ತಾತ್ವಿಕವಾಗಿ ಒಪ್ಪಿಕೊಂಡಿವೆ” ಎಂದಿದ್ದಾರೆ.

“ಬಿಆರ್‌ಎಸ್‌ ಮತ್ತು ಬಿಎಸ್‌ಪಿ ಎರಡೂ ಪಕ್ಷಗಳು ಒಂದೇ ಸಿದ್ಧಾಂತ ಮತ್ತು ಗುರಿಗಳನ್ನು ಹೊಂದಿವೆ. ತೆಲಂಗಾಣದಲ್ಲಿ ದಲಿತ ಬಂಧು, ವಸತಿ ಕಲ್ಯಾಣ ಶಾಲೆಗಳು ಸೇರಿದಂತೆ ದುರ್ಬಲ ವರ್ಗದ ಜನರಿಗಾಗಿ ಬಿಆರ್‌ಎಸ್‌ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿತ್ತು. ನನ್ನ ಹಳೆಯ ಪರಿಚಯಸ್ಥರಾದ ಮಾಯಾವತಿ ಅವರೊಂದಿಗೆ ಮಾತನಾಡಿದ ನಂತರ ನಾವು ಸೀಟು ಹಂಚಿಕೆಗೆ ಸಂಬಂಧಿಸಿದ ವಿಷಯಗಳನ್ನು ಅಂತಿಮಗೊಳಿಸುತ್ತೇವೆ” ಎಂದು ಕೆಸಿಆರ್‌ ಹೇಳಿದ್ದಾರೆ.

ದೇಶದ ಜಾತ್ಯತೀತ ವ್ಯವಸ್ಥೆ ನಾಶ ಮಾಡಲು ಪ್ರಯತ್ನಿಸುತ್ತಿರುವ ಮತ್ತು ದುರ್ಬಲ ವರ್ಗಗಳ ಸಾಂವಿಧಾನ ಹಕ್ಕುಗಳನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಎದುರಿಸಲು ಬಿಆರ್‌ಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಬಿಎಸ್‌ಪಿ ಅಧ್ಯಕ್ಷ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ ಕೂಡ ದಲಿತ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಪ್ರವೀಣ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

“ಎರಡು ಪಕ್ಷಗಳಿಂದ (ಬಿಜೆಪಿ ಮತ್ತು ಕಾಂಗ್ರೆಸ್) ತೆಲಂಗಾಣವನ್ನು ರಕ್ಷಿಸುವ ಸಲುವಾಗಿ, ನಾವು ಮುಂಬರುವ ಚುನಾವಣೆಯಲ್ಲಿ ಬಿಆರ್‌ಎಸ್‌ನೊಂದಿಗೆ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಕೆಸಿಆರ್ ಬಲವಾದ ಜಾತ್ಯತೀತ ಧ್ವನಿಯಾಗಿದ್ದಾರೆ. ನಮ್ಮ ಮೈತ್ರಿ ತೆಲಂಗಾಣದ ಗಂಗಾ ಜಮುನಿ ತೆಹಝೀಬ್ ಅನ್ನು ರಕ್ಷಿಸುವ ಗುರಿ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಮೈತ್ರಿ ಮಾತುಕತೆಯ ಸಭೆಯಲ್ಲಿ ಬಿಆರ್‌ಎಸ್ ಹಿರಿಯ ಮುಖಂಡರಾದ ಟಿ.ಹರೀಶ್ ರಾವ್, ವೇಮುಲ ಪ್ರಶಾಂತ್ ರೆಡ್ಡಿ, ಜೆ.ಸಂತೋಷ್ ಕುಮಾರ್, ಬಾಲ್ಕ ಸುಮನ್, ಎಂಎಲ್ ಸಿ ದೇಶಪತಿ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ವರದಿಗಳ ಪ್ರಕಾರ, ಪ್ರವೀಣ್ ಕುಮಾರ್ ಅವರು ಮೈತ್ರಿಕೂಟದ ಅಭ್ಯರ್ಥಿಯಾಗಿ ತೆಲಂಗಾಣದ ನಾಗರ್‌ಕರ್ನೂಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಕ್ಷೇತ್ರದ ಹಾಲಿ ಬಿಆರ್‌ಎಸ್‌ ಸಂಸದ ಪೋತುಗಂಟಿ ರಾಮುಲು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಜೊತೆ ಕೈಜೋಡಿಸಿದ್ದು, ಕಳೆದೆರಡು ದಿನಗಳ ಹಿಂದೆ ತಮ್ಮ ಪುತ್ರ ಪೋತುಗಂಟಿ ಭರತ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ : ‘ರಾಯಬರೇಲಿ ಕರೆಯುತ್ತಿದೆ…’; ಕಾಂಗ್ರೆಸ್ ಭದ್ರಕೋಟೆ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿಯನ್ನು ಬೆಂಬಲಿಸಿ ಪೋಸ್ಟರ್‌ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...