Homeಮುಖಪುಟಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಮೊದಲ ಹಂತದ 10 ರಾಜ್ಯಗಳ ಪೈಕಿ 6 ರಾಜ್ಯಗಳಿಗೆ ಕಾಂಗ್ರೆಸ್‌ ಬಹುತೇಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ನಿನ್ನೆ(ಮಾ.7) ಸಂಜೆ ಪ್ರಾರಂಭಗೊಂಡ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲ ಸಭೆ ತಡರಾತ್ರಿ ಮುಕ್ತಾಯಗೊಂಡಿತ್ತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮಗೊಂಡಿರುವುದಾಗಿ ಹೇಳಿದ್ದಾರೆ.

“ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಮತ್ತು ಲಕ್ಷದ್ವೀಪದ ಲೋಕಸಭಾ ಕ್ಷೇತ್ರಗಳಿಗೆ ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಇನ್ನೂ ಪ್ರಕ್ರಿಯೆ ಮುಂದುವರೆಯುತ್ತಿದೆ. ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು” ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ಅವರು ಕೇರಳದ ವಯನಾಡ್‌ನಿಂದ, ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಛತ್ತೀಸ್‌ಗಢದ ರಾಜನಂದಗಾಂವ್‌ನಿಂದ ಮತ್ತು ಜ್ಯೋತ್ಸ್ನಾ ಮಹಂತ್ ಕೊರ್ಬಾದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. ಅಲ್ಲದೆ, ಛತ್ತೀಸ್‌ಗಢದ ಎಲ್ಲ ಪ್ರಮುಖ ನಾಯಕರು ಚುನಾವಣಾ ಕಣದಲ್ಲಿದ್ದಾರೆ.

ಕೇರಳದ 20 ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಕೇಂದ್ರದ ಮಾಜಿ ಸಚಿವ ಹಾಗೂ ತಿರುವನಂತಪುರದ ಹಾಲಿ ಸಂಸದ ಶಶಿ ತರೂರ್ ಅಭ್ಯರ್ಥಿಗಳ ಪೈಕಿ ಸೇರಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವರನ್ನು ಕಣಕ್ಕಿಳಿಸುವ ಸಾಧ್ಯತೆಯಿಲ್ಲ. ಬಹುತೇಕ ಸಚಿವರು ರಾಷ್ಟ್ರೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ತಿಳಿದು ಬಂದಿದೆ.

ರಾಜ್ಯದ ಅಭ್ಯರ್ಥಿಗಳ ಪೈಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ಕೂಡ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಚುನಾವಣಾ ಸಮಿತಿಯು ಸೋಮವಾರ ಮತ್ತೆ ಸಭೆ ಸೇರಲಿದೆ. ಅಂದು ದೆಹಲಿ, ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಲಕ್ಷದ್ವೀಪದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳಿಗೆ ಮುಂದಿನ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬರೋಬ್ಬರಿ 90 ಸ್ಥಾನಗಳನ್ನು ಹೊಂದಿರುವ ಎರಡು ನಿರ್ಣಾಯಕ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಬಂಗಾಳದಲ್ಲಿ ಕಾಂಗ್ರೆಸ್ ಇನ್ನೂ ಸೀಟು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಿಲ್ಲ. ಈ ನಡುವೆ ಇತರ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಕಾರ್ಯ ಪ್ರವೃತ್ತವಾಗಿದೆ.

ಮಹಾರಾಷ್ಟ್ರದ 48 ಸ್ಥಾನಗಳ ಸೀಟು ಹಂಚಿಕೆಯ ಕುರಿತು ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳ ನಡುವೆ ಮಾತುಕತೆ ಇನ್ನೂ ಪ್ರಗತಿಯಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರ ಸ್ಪರ್ಧೆಗೆ ಟಿಎಂಸಿ ಮುಂದಾಗಿದೆ. ಇಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಅಸಮಾಧಾನ ಶಮನಗೊಳಿಸಬೇಕಿದೆ.

ಇದನ್ನೂ ಓದಿ : ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿಗೆ ಕಾಂಗ್ರೆಸ್‌ನ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...