Homeಮುಖಪುಟಲೋಕಸಭೆ ಚುನಾವಣೆ ಫಲಿತಾಂಶ: ಮರಾಠವಾಡದಲ್ಲಿ ಸ್ಪರ್ಧಿಸಿದ್ದ ನಾಲ್ಕೂ ಕ್ಷೇತ್ರಗಳಲ್ಲಿ ಸೋತ ಬಿಜೆಪಿ

ಲೋಕಸಭೆ ಚುನಾವಣೆ ಫಲಿತಾಂಶ: ಮರಾಠವಾಡದಲ್ಲಿ ಸ್ಪರ್ಧಿಸಿದ್ದ ನಾಲ್ಕೂ ಕ್ಷೇತ್ರಗಳಲ್ಲಿ ಸೋತ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಎಲ್ಲಾ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಇದರಲ್ಲಿ ಕೇಂದ್ರ ಸಚಿವ ರಾವ್ಸಾಹೇಬ್ ದಾನ್ವೆ ಸೋಲಿಗೆ ಸಾಕ್ಷಿಯಾದ ಜಲನಾ ಕ್ಷೇತ್ರವೂ ಒಂದಾಗಿದೆ. ಅವರು ಜಲ್ನಾದಿಂದ ಐದು ಬಾರಿ ಸಂಸದರಾಗಿದ್ದರು ಮತ್ತು 1999 ರಿಂದ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು.

ಜಲ್ನಾದಲ್ಲಿ ಬಿಜೆಪಿಯ ಸೋಲು ಆಶ್ಚರ್ಯಕರವಾಗಿತ್ತು. ಏಕೆಂದರೆ, ಇದು 1996 ರಿಂದ ಪಕ್ಷದ ಭದ್ರಕೋಟೆಯಾಗಿದೆ. ಜಲ್ನಾ ಜಿಲ್ಲೆ, ಮನೋಜ್ ಜಾರಂಜ್ ನೇತೃತ್ವದ ಮರಾಠ ಕೋಟಾ ಆಂದೋಲನದ ಕೇಂದ್ರಬಿಂದುವಾಗಿತ್ತು.

ದಾನ್ವೆ ಅವರು ಕಾಂಗ್ರೆಸ್‌ನ ಕಲ್ಯಾಣ್ ಕಾಳೆ ವಿರುದ್ಧ 1,09,958 ಮತಗಳ ಅಂತರದಿಂದ ಸೋತಿದ್ದರು. ಮರಾಠವಾಡದಲ್ಲಿ ಗೆದ್ದಿರುವ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯ ಏಕೈಕ ಅಭ್ಯರ್ಥಿ ಸಂದೀಪನ್ ಭೂಮಾರೆ. ಮತ್ತೊಂದೆಡೆ, ಕಾಂಗ್ರೆಸ್ ಸ್ಪರ್ಧಿಸಿದ ಎಲ್ಲ ಮೂರು ಸ್ಥಾನಗಳನ್ನು ಗೆದ್ದರೆ, ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಸ್ಪರ್ಧಿಸಿದ ನಾಲ್ಕು ಸ್ಥಾನಗಳ ಮೂರರಲ್ಲಿ ಗೆದ್ದಿದೆ.

ಮರಾಠವಾಡದ ವೈಟ್ ಸೀಟುಗಳು

ಗಮನಾರ್ಹವಾಗಿ, ಮರಾಠವಾಡವು ನಾಂದೇಡ್, ಪರ್ಭಾನಿ, ಹಿಂಗೋಲಿ, ಒಸ್ಮಾನಾಬಾದ್, ಲಾತೂರ್, ಔರಂಗಾಬಾದ್, ಜಲ್ನಾ ಮತ್ತು ಬೀಡ್ ಎಂಬ ಎಂಟು ಸ್ಥಾನಗಳನ್ನು ಒಳಗೊಂಡಿದೆ. ಮರಾಠವಾಡದಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನಡೆಯಲ್ಲಿ, ಬಿಜೆಪಿಯ ಪಂಕಜಾ ಮುಂಡೆಯವರು ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಬಜರಂಗ್ ಸೋನಾವ್ನೆ ಅವರ ಮುಂದೆ ಸೋಲನ್ನು ಎದುರಿಸಿದರು. ಅವರು ಕೊನೆ ಕ್ಷಣದ ಎಣಿಕೆಯನಂತರ 6,553 ಮತಗಳ ಅಂತರದಿಂದ ಗೆದ್ದರು.

ಅದೇ ರೀತಿ ನಾಂದೇಡ್‌ನಲ್ಲಿ ಈ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಿಜೆಪಿಯ ಅಶೋಕ್ ಚವ್ಹಾಣ್ ಚುನಾವಣೆಯಲ್ಲಿ ಸೋತರು. ಲಾತೂರ್‌ನಲ್ಲಿ ಎರಡನೇ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸುಧಾಕರ ಶ್ರಂಗಾರೆ ಅವರು ಕಾಂಗ್ರೆಸ್‌ನ ಶಿವಾಜಿ ಕಾಲ್ಗೆ ವಿರುದ್ಧ 61,881 ಮತಗಳಿಂದ ಸೋತಿದ್ದಾರೆ.

ಬಿಜೆಪಿಯ ಎರಡು ಅವಧಿಯ ಸಂಸದ ಪ್ರತಾಪ್ರರಾವ್ ಚಿಖಾಲಿಕರ್ ಕೂಡ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಸಂತರಾವ್ ಚವಾಣ್ ವಿರುದ್ಧ 59,442 ಮತಗಳ ಅಂತರದಿಂದ ಸೋತಿದ್ದಾರೆ.

ಉದ್ಧವ್ ಬಣಕ್ಕೆ ಲಾಭ

ಶಿವಸೇನೆಯ ಭೀಮ್ರೆ ಮರಾಠವಾಡದಲ್ಲಿ ಮಹಾಯುತಿಯ ಏಕೈಕ ಸ್ಥಾನವಾಗಿ ಔರಂಗಾಬಾದ್ ಅನ್ನು ಗೆದ್ದುಕೊಂಡರೆ, ಶಿವಸೇನೆ (ಯುಬಿಟಿ) ಹಿಂಗೋಲಿ, ಒಸ್ಮಾನಾಬಾದ್ ಮತ್ತು ಪರ್ಭಾನಿಗಳನ್ನು ಗೆದ್ದಿದೆ.

ಆಡಳಿತ ಮಹಾಯುತಿ, ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿತ್ತು. ಮತ್ತೊಂದೆಡೆ, ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬುಟಿ) ಮತ್ತು ಶರದ್ ಪವಾರ್ ನೇತೃತ್ವದ NCP (ಎಸ್‌ಪಿ) ಅನ್ನು ಒಳಗೊಂಡಿದೆ.

ಇದನ್ನೂ ಓದಿ; ಜೈಲಿನಿಂದಲೆ ಚುನಾವಣೆ ಗೆದ್ದ ಇಬ್ಬರು ಅಭ್ಯರ್ಥಿಗಳು; ಪ್ರಮಾಣ ವಚನ ಸ್ವೀಕರಿಸುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...