Homeಮುಖಪುಟ2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

- Advertisement -
- Advertisement -

ಲೋಕಸಭಾ ಚುನಾವಣೆ ಸಂಫೂರ್ಣ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಎನ್‌ಡಿಎಗೆ ಸರಕಾರ ರಚನೆಗೆ ಬಹುಮತ ಸಿಕ್ಕಿದ್ದರೂ ಬಿಜೆಪಿಯ ವಿಜಯದ ನಾಗಲೋಟಕ್ಕೆ ಇಂಡಿಯಾ ಮೈತ್ರಿಕೂಟ ಬ್ರೇಕ್‌ ಹಾಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಸಂಪೂರ್ಣ ಬಹುಮತದ ಸರಕಾರವನ್ನು ರಚಿಸಿತ್ತು. ಈ ಬಾರಿ ಬಿಜೆಪಿ ಮತ್ತು ಎನ್‌ಡಿಎ 350ಕ್ಕೂ ಅಧಿಕ ದಾಖಲೆಯ ಅಂಕಿಯನ್ನು ದಾಟಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಜನಾದೇಶದ ಅಂತಿಮ ಫಲಿತಾಂಶವು ಇದೀಗ ಎಲ್ಲವೂ ತಲೆಕೆಳಗಾಗಿರುವುದನ್ನು ಸೂಚಿಸಿದೆ.

2019ರ  ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಪಡೆದುಕೊಂಡಿದ್ದು, 2019ರಲ್ಲಿ ಕಾಂಗ್ರೆಸ್‌ ಬರೀ 52 ಸ್ಥಾನಗಳನ್ನು ಪಡೆದುಕೊಂಡಿತ್ತು, ಈ ಬಾರಿ 47 ಸ್ಥಾನಗಳು ಕಾಂಗ್ರೆಸ್‌ಗೆ ಹೆಚ್ಚಳವಾಗಿದೆ. ಇದಲ್ಲದೆ 80 ಕ್ಷೇತ್ರಗಳಿರುವ ಅತಿದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ 50 ಸ್ಥಾನಗಳು ಸಿಗುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು, ಈ ಫಲಿತಾಂಶಗಳು ಉಲ್ಟಾ ಹೊಡೆದಿದ್ದು, ಬಿಜೆಪಿಗೆ ಉತ್ತರಪ್ರದೇಶದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಉತ್ತರಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು 33 ಸ್ಥಾನಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ. ಇದರಿಂದಾಗಿ ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿರುವುದನ್ನು ಗಮನಿಸಬಹುದಾಗಿದೆ.

2024ರ ಚುನವಾಣೆಯ ಎಕ್ಸಿಟ್ ಪೋಲ್‌ ಫಲಿತಾಂಶದಲ್ಲಿ  ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಎನ್‌ಡಿಎಗೆ 359 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 371 ಸ್ಥಾನಗಳು, ರಿಪಬ್ಲಿಕ್ ಭಾರತ್ ಮ್ಯಾಟ್ರಿಜ್ 353-368 ಸ್ಥಾನಗಳು, ಟಿವಿ 5 ತೆಲುಗು -359 ಸ್ಥಾನಗಳು, ಜನ್‌ ಕೀ ಬಾತ್‌-362-392 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು, ಲೋಕ್‌ ಪೋಲ್‌-325 ರಿಂದ 333,  ನ್ಯೂಸ್ ನೇಷನ್-342-378 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿತ್ತು. ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಇಂಡಿಯಾ ಮೈತ್ರಿಕೂಟವು 155ರ ಗಡಿ ದಾಟುವುದನ್ನು ಯಾವ ಮಾಧ್ಯಮ ಸಮೀಕ್ಷೆಗಳು ಕೂಡ ಹೇಳಿಲ್ಲ. ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 154 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು, ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು, ಟಿವಿ 5 ತೆಲುಗು- 154 ಸ್ಥಾನಗಳು, ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು, ಲೋಕ್‌ ಪೋಲ್‌-155 ರಿಂದ 165, ನ್ಯೂಸ್ ನೇಷನ್-ಇಂಡಿಯಾ 153 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ನೀಡಿತ್ತು. ಆದರೆ ಈ ಫಲಿತಾಂಶಗಳೆಲ್ಲ ಇದೀಗ ಹುಸಿಯಾಗಿದೆ. ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮೂಡಿದೆ.

ಇದನ್ನು ಓದಿ: ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...