Homeಮುಖಪುಟ2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

- Advertisement -
- Advertisement -

ಲೋಕಸಭಾ ಚುನಾವಣೆ ಸಂಫೂರ್ಣ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಎನ್‌ಡಿಎಗೆ ಸರಕಾರ ರಚನೆಗೆ ಬಹುಮತ ಸಿಕ್ಕಿದ್ದರೂ ಬಿಜೆಪಿಯ ವಿಜಯದ ನಾಗಲೋಟಕ್ಕೆ ಇಂಡಿಯಾ ಮೈತ್ರಿಕೂಟ ಬ್ರೇಕ್‌ ಹಾಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಸಂಪೂರ್ಣ ಬಹುಮತದ ಸರಕಾರವನ್ನು ರಚಿಸಿತ್ತು. ಈ ಬಾರಿ ಬಿಜೆಪಿ ಮತ್ತು ಎನ್‌ಡಿಎ 350ಕ್ಕೂ ಅಧಿಕ ದಾಖಲೆಯ ಅಂಕಿಯನ್ನು ದಾಟಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಜನಾದೇಶದ ಅಂತಿಮ ಫಲಿತಾಂಶವು ಇದೀಗ ಎಲ್ಲವೂ ತಲೆಕೆಳಗಾಗಿರುವುದನ್ನು ಸೂಚಿಸಿದೆ.

2019ರ  ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಪಡೆದುಕೊಂಡಿದ್ದು, 2019ರಲ್ಲಿ ಕಾಂಗ್ರೆಸ್‌ ಬರೀ 52 ಸ್ಥಾನಗಳನ್ನು ಪಡೆದುಕೊಂಡಿತ್ತು, ಈ ಬಾರಿ 47 ಸ್ಥಾನಗಳು ಕಾಂಗ್ರೆಸ್‌ಗೆ ಹೆಚ್ಚಳವಾಗಿದೆ. ಇದಲ್ಲದೆ 80 ಕ್ಷೇತ್ರಗಳಿರುವ ಅತಿದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ 50 ಸ್ಥಾನಗಳು ಸಿಗುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು, ಈ ಫಲಿತಾಂಶಗಳು ಉಲ್ಟಾ ಹೊಡೆದಿದ್ದು, ಬಿಜೆಪಿಗೆ ಉತ್ತರಪ್ರದೇಶದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಉತ್ತರಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು 33 ಸ್ಥಾನಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ. ಇದರಿಂದಾಗಿ ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿರುವುದನ್ನು ಗಮನಿಸಬಹುದಾಗಿದೆ.

2024ರ ಚುನವಾಣೆಯ ಎಕ್ಸಿಟ್ ಪೋಲ್‌ ಫಲಿತಾಂಶದಲ್ಲಿ  ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಎನ್‌ಡಿಎಗೆ 359 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 371 ಸ್ಥಾನಗಳು, ರಿಪಬ್ಲಿಕ್ ಭಾರತ್ ಮ್ಯಾಟ್ರಿಜ್ 353-368 ಸ್ಥಾನಗಳು, ಟಿವಿ 5 ತೆಲುಗು -359 ಸ್ಥಾನಗಳು, ಜನ್‌ ಕೀ ಬಾತ್‌-362-392 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು, ಲೋಕ್‌ ಪೋಲ್‌-325 ರಿಂದ 333,  ನ್ಯೂಸ್ ನೇಷನ್-342-378 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿತ್ತು. ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಇಂಡಿಯಾ ಮೈತ್ರಿಕೂಟವು 155ರ ಗಡಿ ದಾಟುವುದನ್ನು ಯಾವ ಮಾಧ್ಯಮ ಸಮೀಕ್ಷೆಗಳು ಕೂಡ ಹೇಳಿಲ್ಲ. ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 154 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು, ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು, ಟಿವಿ 5 ತೆಲುಗು- 154 ಸ್ಥಾನಗಳು, ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು, ಲೋಕ್‌ ಪೋಲ್‌-155 ರಿಂದ 165, ನ್ಯೂಸ್ ನೇಷನ್-ಇಂಡಿಯಾ 153 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ನೀಡಿತ್ತು. ಆದರೆ ಈ ಫಲಿತಾಂಶಗಳೆಲ್ಲ ಇದೀಗ ಹುಸಿಯಾಗಿದೆ. ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮೂಡಿದೆ.

ಇದನ್ನು ಓದಿ: ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...