Homeಮುಖಪುಟ2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

- Advertisement -
- Advertisement -

ಲೋಕಸಭಾ ಚುನಾವಣೆ ಸಂಫೂರ್ಣ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಎನ್‌ಡಿಎಗೆ ಸರಕಾರ ರಚನೆಗೆ ಬಹುಮತ ಸಿಕ್ಕಿದ್ದರೂ ಬಿಜೆಪಿಯ ವಿಜಯದ ನಾಗಲೋಟಕ್ಕೆ ಇಂಡಿಯಾ ಮೈತ್ರಿಕೂಟ ಬ್ರೇಕ್‌ ಹಾಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಸಂಪೂರ್ಣ ಬಹುಮತದ ಸರಕಾರವನ್ನು ರಚಿಸಿತ್ತು. ಈ ಬಾರಿ ಬಿಜೆಪಿ ಮತ್ತು ಎನ್‌ಡಿಎ 350ಕ್ಕೂ ಅಧಿಕ ದಾಖಲೆಯ ಅಂಕಿಯನ್ನು ದಾಟಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಜನಾದೇಶದ ಅಂತಿಮ ಫಲಿತಾಂಶವು ಇದೀಗ ಎಲ್ಲವೂ ತಲೆಕೆಳಗಾಗಿರುವುದನ್ನು ಸೂಚಿಸಿದೆ.

2019ರ  ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಪಡೆದುಕೊಂಡಿದ್ದು, 2019ರಲ್ಲಿ ಕಾಂಗ್ರೆಸ್‌ ಬರೀ 52 ಸ್ಥಾನಗಳನ್ನು ಪಡೆದುಕೊಂಡಿತ್ತು, ಈ ಬಾರಿ 47 ಸ್ಥಾನಗಳು ಕಾಂಗ್ರೆಸ್‌ಗೆ ಹೆಚ್ಚಳವಾಗಿದೆ. ಇದಲ್ಲದೆ 80 ಕ್ಷೇತ್ರಗಳಿರುವ ಅತಿದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ 50 ಸ್ಥಾನಗಳು ಸಿಗುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು, ಈ ಫಲಿತಾಂಶಗಳು ಉಲ್ಟಾ ಹೊಡೆದಿದ್ದು, ಬಿಜೆಪಿಗೆ ಉತ್ತರಪ್ರದೇಶದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಉತ್ತರಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು 33 ಸ್ಥಾನಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ. ಇದರಿಂದಾಗಿ ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿರುವುದನ್ನು ಗಮನಿಸಬಹುದಾಗಿದೆ.

2024ರ ಚುನವಾಣೆಯ ಎಕ್ಸಿಟ್ ಪೋಲ್‌ ಫಲಿತಾಂಶದಲ್ಲಿ  ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಎನ್‌ಡಿಎಗೆ 359 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 371 ಸ್ಥಾನಗಳು, ರಿಪಬ್ಲಿಕ್ ಭಾರತ್ ಮ್ಯಾಟ್ರಿಜ್ 353-368 ಸ್ಥಾನಗಳು, ಟಿವಿ 5 ತೆಲುಗು -359 ಸ್ಥಾನಗಳು, ಜನ್‌ ಕೀ ಬಾತ್‌-362-392 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು, ಲೋಕ್‌ ಪೋಲ್‌-325 ರಿಂದ 333,  ನ್ಯೂಸ್ ನೇಷನ್-342-378 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿತ್ತು. ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಇಂಡಿಯಾ ಮೈತ್ರಿಕೂಟವು 155ರ ಗಡಿ ದಾಟುವುದನ್ನು ಯಾವ ಮಾಧ್ಯಮ ಸಮೀಕ್ಷೆಗಳು ಕೂಡ ಹೇಳಿಲ್ಲ. ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 154 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು, ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು, ಟಿವಿ 5 ತೆಲುಗು- 154 ಸ್ಥಾನಗಳು, ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು, ಲೋಕ್‌ ಪೋಲ್‌-155 ರಿಂದ 165, ನ್ಯೂಸ್ ನೇಷನ್-ಇಂಡಿಯಾ 153 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ನೀಡಿತ್ತು. ಆದರೆ ಈ ಫಲಿತಾಂಶಗಳೆಲ್ಲ ಇದೀಗ ಹುಸಿಯಾಗಿದೆ. ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮೂಡಿದೆ.

ಇದನ್ನು ಓದಿ: ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...