Homeಮುಖಪುಟಲೋಕಸಭಾ ಚುನಾವಣೆ ಫಲಿತಾಂಶ: 73 ಮಹಿಳಾ ಅಭ್ಯರ್ಥಿಗಳಿಗೆ ಗೆಲುವು

ಲೋಕಸಭಾ ಚುನಾವಣೆ ಫಲಿತಾಂಶ: 73 ಮಹಿಳಾ ಅಭ್ಯರ್ಥಿಗಳಿಗೆ ಗೆಲುವು

- Advertisement -
- Advertisement -

ಚಿಕ್ಕೋಡಿಯ ಪ್ರಿಯಾಂಕಾ ಜಾರಕಿಹೊಳಿ, ದಾವಣೆಗೆಯಲ್ಲಿ ಪ್ರಭಾ ಮಲ್ಲಿಕಾರ್ಜುನ, ಬೆಂಗಳೂರು ಉತ್ತರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ, ಕಾಂಗ್ರೆಸ್‌ನ ಕುಮಾರಿ ಸೆಲ್ಜಾ, ಬಿಜೆಪಿಯ ಕಂಗನಾ ರನೌತ್ ಮತ್ತು ಹೇಮಾ ಮಾಲಿನಿ, ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಮತ್ತು ಆರ್‌ಜೆಡಿಯ ಮಿಸಾ ಭಾರತಿ ಸೇರಿದಂತೆ 73 ಜನ ಮಹಿಳಾ ಅಭ್ಯರ್ಥಿಗಳು ದೇಶದಾದ್ಯಂತ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಅಮೇಥಿಯ ಹಾಲಿ ಸಂಸದೆ ಸ್ಮೃತಿ ಇರಾನಿ ಮತ್ತು ಸುಲ್ತಾನ್‌ಪುರ ಸಂಸದೆ ಮೇನಕಾ ಗಾಂಧಿ ಸೋತ ಸಂಸದರ ಪಟ್ಟಿಗೆ ಸೇರಿದ್ದಾರೆ.

ಹರಿಯಾಣದ ಸಿರ್ಸಾ ಲೋಕಸಭಾ ಕ್ಷೇತ್ರದಲ್ಲಿ ಸೆಲ್ಜಾ 2.5 ಲಕ್ಷ ಮತಗಳಿಂದ ಗೆದ್ದರೆ, ಬಿಜೆಪಿಯ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ 78,370 ಮತಗಳಿಂದ ನವದೆಹಲಿ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಒಟ್ಟು 797 ಮಹಿಳೆಯರು ಸ್ಪರ್ಧಿಸಿದ್ದರು.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮೊದಲ ಬಾರಿಗೆ ಸ್ಪರ್ಧಿಸಿರುವ ನಟಿ-ರಾಜಕಾರಣಿ ರನೌತ್ ಅವರು ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ವಿರುದ್ಧ 74,755 ಮತಗಳಿಂದ ಗೆದ್ದಿದ್ದಾರೆ. ಮತ್ತೊಂದೆಡೆ ಹಿರಿಯ ನಟಿ, ಮಥುರಾದಿಂದ ಹಾಲಿ ಸಂಸದೆ ಹೇಮಾ ಮಾಲಿನಿ ಅವರು 5.1 ಲಕ್ಷ ಮತಗಳನ್ನು ಪಡೆಯುವ ಮೂಲಕ ಸ್ಥಾನವನ್ನು ಉಳಿಸಿಕೊಂಡರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಮತ್ತು ಮೈನ್‌ಪುರಿಯ ಹಾಲಿ ಸಂಸದೆ ಡಿಂಪಲ್ ಯಾದವ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜಯವೀರ್ ಸಿಂಗ್ ವಿರುದ್ಧ 2,21,639 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಶಾ ಭಾರತಿ ಅವರು ಕೇಂದ್ರ ಸಚಿವ ಮತ್ತು ಬಿಹಾರದ ಪಾಟಲಿಪುತ್ರದ ಹಾಲಿ ಸಂಸದ ರಾಮ್ ಕೃಪಾಲ್ ಯಾದವ್ ವಿರುದ್ಧ 85,174 ಮತಗಳ ಅಂತರದಿಂದ ಗೆದ್ದಿದ್ದಾರೆ.

ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ 56,705 ಮತಗಳಿಂದ ಜಯಗಳಿಸಿದ್ದಾರೆ. ಡಿಎಂಕೆಯ ಕನಿಮೋಳಿ ಕರುಣಾನಿಧಿ ಅವರು 5,40,729 ಮತಗಳನ್ನು ಪಡೆಯುವ ಮೂಲಕ ತಮ್ಮ ತೂತುಕ್ಕುಡಿ ಕ್ಷೇತ್ರವನ್ನು ಕ್ಷೇತ್ರವಾರು ಉಳಿಸಿಕೊಂಡಿದ್ದಾರೆ.

ಸಮಾಜವಾದಿ ಪಕ್ಷದ ಮಚ್ಲಿಶಹರ್‌ನ 25 ವರ್ಷದ ಅಭ್ಯರ್ಥಿ ಪ್ರಿಯಾ ಸರೋಜ್ ಮತ್ತು ಕೈರಾನಾ ಕ್ಷೇತ್ರದಿಂದ 29 ವರ್ಷದ ಇಕ್ರಾ ಚೌಧರಿ ಗೆಲುವು ಸಾಧಿಸಿದ ಅತ್ಯಂತ ಕಿರಿಯ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇದುವರೆಗೆ 30ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಿಂದ ಗೆದ್ದಿದ್ದಾರೆ. 78 ಮಹಿಳಾ ಅಭ್ಯರ್ಥಿಗಳು ಗೆದ್ದಿದ್ದ 2019 ರ ಲೋಕಸಭೆ ಚುನಾವಣೆಗಿಂತ ಈ ಸಂಖ್ಯೆ ಕಡಿಮೆಯಾಗಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ 12 ಗಂಟೆಗಳ ಮತ ಎಣಿಕೆ ನಂತರ 543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಕಳೆದ ಬಾರಿ ಗಳಿಸಿದ್ದ 303 ಸಂಖ್ಯೆಯಿಂದ ಬಹಳ ದೂರವಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಫಲಿತಾಂಶ: ಮರಾಠವಾಡದಲ್ಲಿ ಸ್ಪರ್ಧಿಸಿದ್ದ ನಾಲ್ಕೂ ಕ್ಷೇತ್ರಗಳಲ್ಲಿ ಸೋತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...