Homeಮುಖಪುಟಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ 'ಟ್ರಾನ್ಸ್‌ ಜೆಂಡರ್' ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ ‘ಟ್ರಾನ್ಸ್‌ ಜೆಂಡರ್’ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

- Advertisement -
- Advertisement -

ಚುನಾವಣಾ ಆಯೋಗದ (ಇಸಿ) ಅಂಕಿಅಂಶಗಳ ಪ್ರಕಾರ, 2019ರ ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಟ್ರಾನ್ಸ್‌ ಜೆಂಡರ್ (ತೃತೀಯ ಲಿಂಗ) ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. 2024 ರಲ್ಲಿ, ತೃತೀಯ ಲಿಂಗದ ಮತದಾರರು ಶೇಕಡಾ 25 ರಷ್ಟಿದ್ದರೆ, ಕಳೆದ ಚುನಾವಣೆಯಲ್ಲಿ ಅದು ಶೇಕಡಾ 14.58 ರಷ್ಟಿತ್ತು.

ಈಗಷ್ಟೇ ಮುಗಿದಿರುವ ಏಳು ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಹಂತ-ಹಂತದ ಡೇಟಾವನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 19 ರಂದು ನಡೆದ 2024 ರ ಮೊದಲ ಹಂತದ ಚುನಾವಣೆಯಲ್ಲಿ ತೃತೀಯ ಲಿಂಗದ ಮತದಾರರು ಶೇಕಡಾ 31.32 ರಷ್ಟಿದ್ದರು. ಏಪ್ರಿಲ್ 26ರಂದು ನಡೆದ ಎರಡನೇ ಹಂತದಲ್ಲಿ ಶೇ.23.86, ಮೇ 7ರಂದು ನಡೆದ ಮೂರನೇ ಹಂತದಲ್ಲಿ ಶೇ.25.2, ಮೇ 13ರಂದು ನಡೆದ ನಾಲ್ಕನೇ ಹಂತದಲ್ಲಿ ಶೇ.34.23, ಮೇ 20ರಂದು ನಡೆದ ಐದನೇ ಹಂತದಲ್ಲಿ ಶೇ.21.96 ಮತ್ತು ಮೇ 25 ರಂದು ನಡೆದ ಆರನೇ ಹಂತದಲ್ಲಿ ಶೇ. 18.67 ರಷ್ಟು ಜನ ಮತದಾನ ಮಾಡಿದ್ದಾರೆ.

ಜೂನ್ 1 ರಂದು ನಡೆದ ಅಂತಿಮ ಮತ್ತು ಏಳನೇ ಹಂತದ ಮತದಾನದಲ್ಲಿ ಶೇ 22.33 ರಷ್ಟು ತೃತೀಯಲಿಂಗಿ ಮತದಾನವಾಗಿದೆ. 2011ರ ಜನಗಣತಿ ಪ್ರಕಾರ ದೇಶದಲ್ಲಿ 4,87,803 ತೃತೀಯಲಿಂಗಿಗಳಿದ್ದಾರೆ.

18ನೇ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರದ ದೊಡ್ಡ ಪಕ್ಷ ಕಾಂಗ್ರೆಸ್ 99 ಸ್ಥಾನಗಳೊಂದಿಗೆ, ಸಮಾಜವಾದಿ ಪಕ್ಷವು 37 ಸ್ಥಾನಗಳನ್ನು ಗಳಿಸಿದೆ.

ಒಟ್ಟು ಮತದಾನದ ಪ್ರಮಾಣ

2024 ರ ಲೋಕಸಭಾ ಚುನಾವಣೆಯ ಒಟ್ಟಾರೆ ಮತದಾನದ ಪ್ರಮಾಣವು ಶೇಕಡಾ 65.79 ರಷ್ಟಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ (ಜೂನ್ 6) ಹೇಳಿಕೆಯಲ್ಲಿ ತಿಳಿಸಿದೆ. ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಶೇ.81.56ರಷ್ಟು ಮತದಾನವಾಗಿದೆ. ರಾಜ್ಯಗಳ ಪೈಕಿ ಶೇ.56.19 ರಷ್ಟು ಮತದಾನದಲ್ಲಿ ಬಿಹಾರ ಕಡಿಮೆ ಮತದಾನವಾಗಿದೆ ಎಂದು ಇಸಿ ಹೇಳಿದೆ.

“ಅಂಚೆ ಮತಗಳ ಸಂಖ್ಯೆ ಮತ್ತು ಒಟ್ಟು ಮತದಾನದ ಪ್ರಮಾಣ ಹೊಂದಿರುವ ವಿವರವಾದ ಅಂಕಿಅಂಶಗಳ ವರದಿಗಳು ವಿವರಗಳನ್ನು ಅಂತಿಮಗೊಳಿಸಿದ ನಂತರ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಆಯೋಗ ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಪುರುಷ ಮತದಾರರು ಶೇಕಡಾ 63.11 ರಷ್ಟಿದ್ದರೆ, ಶೇಕಡಾ 64.72 ರಷ್ಟು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ತೃತೀಯ ಲಿಂಗದ ಮತದಾನದ ಪ್ರಮಾಣವು ಶೇಕಡಾ 22.33 ರಷ್ಟಿತ್ತು. ಈ ವಾರದ ಆರಂಭದಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಮತದಾರರೊಂದಿಗೆ ಭಾರತವು ಇತಿಹಾಸವನ್ನು ನಿರ್ಮಿಸಿದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...