Homeಮುಖಪುಟಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ 'ಟ್ರಾನ್ಸ್‌ ಜೆಂಡರ್' ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ ‘ಟ್ರಾನ್ಸ್‌ ಜೆಂಡರ್’ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

- Advertisement -
- Advertisement -

ಚುನಾವಣಾ ಆಯೋಗದ (ಇಸಿ) ಅಂಕಿಅಂಶಗಳ ಪ್ರಕಾರ, 2019ರ ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಟ್ರಾನ್ಸ್‌ ಜೆಂಡರ್ (ತೃತೀಯ ಲಿಂಗ) ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. 2024 ರಲ್ಲಿ, ತೃತೀಯ ಲಿಂಗದ ಮತದಾರರು ಶೇಕಡಾ 25 ರಷ್ಟಿದ್ದರೆ, ಕಳೆದ ಚುನಾವಣೆಯಲ್ಲಿ ಅದು ಶೇಕಡಾ 14.58 ರಷ್ಟಿತ್ತು.

ಈಗಷ್ಟೇ ಮುಗಿದಿರುವ ಏಳು ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಹಂತ-ಹಂತದ ಡೇಟಾವನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 19 ರಂದು ನಡೆದ 2024 ರ ಮೊದಲ ಹಂತದ ಚುನಾವಣೆಯಲ್ಲಿ ತೃತೀಯ ಲಿಂಗದ ಮತದಾರರು ಶೇಕಡಾ 31.32 ರಷ್ಟಿದ್ದರು. ಏಪ್ರಿಲ್ 26ರಂದು ನಡೆದ ಎರಡನೇ ಹಂತದಲ್ಲಿ ಶೇ.23.86, ಮೇ 7ರಂದು ನಡೆದ ಮೂರನೇ ಹಂತದಲ್ಲಿ ಶೇ.25.2, ಮೇ 13ರಂದು ನಡೆದ ನಾಲ್ಕನೇ ಹಂತದಲ್ಲಿ ಶೇ.34.23, ಮೇ 20ರಂದು ನಡೆದ ಐದನೇ ಹಂತದಲ್ಲಿ ಶೇ.21.96 ಮತ್ತು ಮೇ 25 ರಂದು ನಡೆದ ಆರನೇ ಹಂತದಲ್ಲಿ ಶೇ. 18.67 ರಷ್ಟು ಜನ ಮತದಾನ ಮಾಡಿದ್ದಾರೆ.

ಜೂನ್ 1 ರಂದು ನಡೆದ ಅಂತಿಮ ಮತ್ತು ಏಳನೇ ಹಂತದ ಮತದಾನದಲ್ಲಿ ಶೇ 22.33 ರಷ್ಟು ತೃತೀಯಲಿಂಗಿ ಮತದಾನವಾಗಿದೆ. 2011ರ ಜನಗಣತಿ ಪ್ರಕಾರ ದೇಶದಲ್ಲಿ 4,87,803 ತೃತೀಯಲಿಂಗಿಗಳಿದ್ದಾರೆ.

18ನೇ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರದ ದೊಡ್ಡ ಪಕ್ಷ ಕಾಂಗ್ರೆಸ್ 99 ಸ್ಥಾನಗಳೊಂದಿಗೆ, ಸಮಾಜವಾದಿ ಪಕ್ಷವು 37 ಸ್ಥಾನಗಳನ್ನು ಗಳಿಸಿದೆ.

ಒಟ್ಟು ಮತದಾನದ ಪ್ರಮಾಣ

2024 ರ ಲೋಕಸಭಾ ಚುನಾವಣೆಯ ಒಟ್ಟಾರೆ ಮತದಾನದ ಪ್ರಮಾಣವು ಶೇಕಡಾ 65.79 ರಷ್ಟಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ (ಜೂನ್ 6) ಹೇಳಿಕೆಯಲ್ಲಿ ತಿಳಿಸಿದೆ. ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಶೇ.81.56ರಷ್ಟು ಮತದಾನವಾಗಿದೆ. ರಾಜ್ಯಗಳ ಪೈಕಿ ಶೇ.56.19 ರಷ್ಟು ಮತದಾನದಲ್ಲಿ ಬಿಹಾರ ಕಡಿಮೆ ಮತದಾನವಾಗಿದೆ ಎಂದು ಇಸಿ ಹೇಳಿದೆ.

“ಅಂಚೆ ಮತಗಳ ಸಂಖ್ಯೆ ಮತ್ತು ಒಟ್ಟು ಮತದಾನದ ಪ್ರಮಾಣ ಹೊಂದಿರುವ ವಿವರವಾದ ಅಂಕಿಅಂಶಗಳ ವರದಿಗಳು ವಿವರಗಳನ್ನು ಅಂತಿಮಗೊಳಿಸಿದ ನಂತರ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಆಯೋಗ ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಪುರುಷ ಮತದಾರರು ಶೇಕಡಾ 63.11 ರಷ್ಟಿದ್ದರೆ, ಶೇಕಡಾ 64.72 ರಷ್ಟು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ತೃತೀಯ ಲಿಂಗದ ಮತದಾನದ ಪ್ರಮಾಣವು ಶೇಕಡಾ 22.33 ರಷ್ಟಿತ್ತು. ಈ ವಾರದ ಆರಂಭದಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಮತದಾರರೊಂದಿಗೆ ಭಾರತವು ಇತಿಹಾಸವನ್ನು ನಿರ್ಮಿಸಿದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...