Homeಮುಖಪುಟಲೋಕಸಭಾ ಚುನಾವಣೆ 2024: ಉದ್ಧವ್ ಅಭ್ಯರ್ಥಿಯನ್ನು 'ಖಿಚಡಿ ಚೋರ್' ಎಂದು ಕರೆದ ಕಾಂಗ್ರೆಸ್ ನಾಯಕ

ಲೋಕಸಭಾ ಚುನಾವಣೆ 2024: ಉದ್ಧವ್ ಅಭ್ಯರ್ಥಿಯನ್ನು ‘ಖಿಚಡಿ ಚೋರ್’ ಎಂದು ಕರೆದ ಕಾಂಗ್ರೆಸ್ ನಾಯಕ

- Advertisement -
- Advertisement -

ಮಿತ್ರ ಪಕ್ಷಗಳ ಜತೆಗೆ ಮಾತುಕತೆಗೂ ಮುನ್ನವೇ ಮುಂಬೈನ ನಾಲ್ಕು ಸ್ಥಾನಗಳಿಗೆ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ್ದಕ್ಕಾಗಿ ಶಿವಸೇನೆ (ಯುಬಿಟಿ) ಮೇಲೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆ ಮೂಲಕ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳ ನಡುವಿನ ಬಿರುಕು ಬುಧವಾರ ಬಹಿರಂಗವಾಗಿದೆ.Lo

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರುಪಮ್, ಮುಂಬೈ ವಾಯುವ್ಯ ಕ್ಷೇತ್ರಕ್ಕೆ ಅಮೋಲ್ ಕೀರ್ತಿಕರ್ ಅವರ ಉಮೇದುವಾರಿಕೆಯನ್ನು “ಮೈತ್ರಿ ಧರ್ಮದ ಉಲ್ಲಂಘನೆ” ಎಂದು ಹೇಳಿದ್ದು, ಶಿವಸೇನಾ (ಯುಬಿಟಿ) ನಾಯಕನನ್ನು “ಖಿಚಡಿ ಚೋರ್” ಎಂದು ಕರೆದರು.

‘ಖಿಚಡಿ ಚೋರ್‌ಗೆ ಶಿವಸೇನೆ ಟಿಕೆಟ್ ನೀಡಿದೆ… ನಾವು ಖಿಚಡಿ ಚೋರ್ ಅಭ್ಯರ್ಥಿಗಳಿಗಾಗಿ ಕೆಲಸ ಮಾಡುವುದಿಲ್ಲ’ ಎಂದು ನಿರುಪಮ್ ಅವರು ಉದ್ಧವ್ ಸೇನಾ ಬಣದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವಲಸಿಗರಿಗೆ ‘ಖಿಚಡಿ’ ವಿತರಣೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಂಸದ ಗಜಾನನ ಕೀರ್ತಿಕರ್ ಅವರ ಪುತ್ರ ಅಮೋಲ್ ಕೀರ್ತಿಕರ್ ಅವರನ್ನು ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದ ನಂತರ ಈ ಹೇಳಿಕೆ ಬಂದಿದೆ.

ಕಾಂಗ್ರೆಸ್ ನಾಯಕತ್ವದ ಮಧ್ಯಪ್ರವೇಶವನ್ನು ಕೋರಿದ ನಿರುಪಮ್, ಶಿವಸೇನೆ (ಯುಬಿಟಿ) ಮಹಾನಗರದಲ್ಲಿನ ಆರು ಸ್ಥಾನಗಳಲ್ಲಿ ಒಂದನ್ನು ಏಕಪಕ್ಷೀಯವಾಗಿ ಹಂಚುವ ಮೂಲಕ ಮುಂಬೈನಲ್ಲಿ ಪಕ್ಷವನ್ನು “ಸಮಾಧಿ” ಮಾಡಿದೆ ಎಂದು ಆರೋಪಿಸಿದರು.

“ಮುಂಬೈನ ಆರು (ಲೋಕಸಭಾ) ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಮತ್ತು ಒಂದು ಸ್ಥಾನವನ್ನು ಕಾಂಗ್ರೆಸ್‌ಗೆ ದಾನವೆಂಬಂತೆ ಬಿಟ್ಟುಕೊಟ್ಟಿದೆ. ಈ ನಿರ್ಧಾರವು ಮುಂಬೈನಲ್ಲಿ ಕಾಂಗ್ರೆಸ್ ಅನ್ನು ಸಮಾಧಿ ಮಾಡುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

“ಶಿವಸೇನೆ ತೀವ್ರ ನಿಲುವು ತಳೆಯಬಾರದು; ಇದರಿಂದ ಕಾಂಗ್ರೆಸ್‌ಗೆ ದೊಡ್ಡ ನಷ್ಟವಾಗುತ್ತದೆ. ಕಾಂಗ್ರೆಸ್ ನಾಯಕತ್ವ ಮಧ್ಯಪ್ರವೇಶಿಸಬೇಕೆಂದು ನಾನು ಬಯಸುತ್ತೇನೆ, ಇಲ್ಲದಿದ್ದರೆ ಪಕ್ಷವನ್ನು ಉಳಿಸಲು ಮೈತ್ರಿಯನ್ನು ಮುರಿಯಿರಿ. ಶಿವಸೇನೆಯೊಂದಿಗೆ ಮೈತ್ರಿ ನಿರ್ಧಾರವು -ಕಾಂಗ್ರೆಸ್‌ಗೆ ವಿನಾಶಕಾರಿಗಯನ್ನು ಸಾಬೀತುಪಡಿಸುತ್ತದೆ” ಎಂದು ನಿರುಪಮ್ ಹೇಳಿದರು.

ಸಂಜಯ್ ನಿರುಪಮ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಶಿವಸೇನಾ (ಯುಬಿಟಿ) ಸಂಸದ ಅರವಿಂದ್ ಸಾವಂತ್, “ಅವರು (ನಿರುಪಮ್) ಯಾರು? ನನಗೆ ಗೊತ್ತಿಲ್ಲ, ನಮ್ಮ ಪಕ್ಷದಲ್ಲಿ ಶಿಸ್ತು ಇದೆ. ಉದ್ಧವ್ ಠಾಕ್ರೆ ಅವರು ಅಭ್ಯರ್ಥಿಗಳ ಹೆಸರು ಘೋಷಿಸಿದ ನಂತರ ವಿಷಯ ಮುಗಿದಿದೆ” ಎಂದರು.

ಶಿವಸೇನಾ (ಯುಬಿಟಿ) 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ
ಹಿಂದಿನ ದಿನ, ಶಿವಸೇನೆ (ಯುಬಿಟಿ) ಮಹಾರಾಷ್ಟ್ರದಲ್ಲಿ ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು. ರಾಜ್ಯದ 48 ಸ್ಥಾನಗಳಲ್ಲಿ 22 ರಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ.

ಶಿವಸೇನೆ (ಯುಬಿಟಿ) ಮುಂಬೈ ಈಶಾನ್ಯದಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಾಜಿ ಶಾಸಕ ಸಂಜಯ್ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ. ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಕ್ರಮವಾಗಿ ರಾಯಗಡ ಮತ್ತು ದಕ್ಷಿಣ ಮುಂಬೈ ಕ್ಷೇತ್ರಗಳಿಂದ ಕಣಕ್ಕೆ ಇಳಿಯಲಿದ್ದಾರೆ.

ಇದನ್ನೂ ಓದಿ; ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...