Homeಮುಖಪುಟಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಉದ್ಯೋಗ ಸೃಷ್ಟಿ, ಜಾತಿ ಗಣತಿಯ ಭರವಸೆ

ಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಉದ್ಯೋಗ ಸೃಷ್ಟಿ, ಜಾತಿ ಗಣತಿಯ ಭರವಸೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ.
ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಯವರು ದೆಹಲಿಯ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರು ಪ್ರಣಾಳಿಕೆ ಸಿದ್ಧಪಡಿಸಿದ ಸಮಿತಿಯ ನೇತೃತ್ವ ವಹಿಸಿದ್ದರು.

“ಈ ಪ್ರಣಾಳಿಕೆಯು ದೇಶದ ರಾಜಕೀಯ ಇತಿಹಾಸದಲ್ಲಿ ‘ನ್ಯಾಯ ಕಾ ದಾಸ್ತಾವೆಜ್’ (ನ್ಯಾಯಕ್ಕಾಗಿ ದಾಖಲೆ) ಆಗಿರುತ್ತದೆ. ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಐದು ಸ್ತಂಭಗಳಾದ ಯುವ, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ 25 ಗ್ಯಾರಂಟಿಗಳನ್ನು ಒಳಗೊಂಡಿದೆ” ಎಂದು ಖರ್ಗೆ ಹೇಳಿದರು.

ಪ್ರಣಾಳಿಕೆಯ ಒಟ್ಟಾರೆ ಆಶಯವು, ಉದ್ಯೋಗ, ಸಂಪತ್ತು ಕ್ರೋಢೀಕರಣ ಮತ್ತು ಕಲ್ಯಾಣವನ್ನು ಆಧರಿಸಿದೆ ಎಂದು ಪಕ್ಷ ಹೇಳಿದೆ.

“ಉದ್ಯೋಗ ಎಂದರೆ ನೀವು ಉದ್ಯೋಗಗಳನ್ನು ನೀಡಬೇಕು. ಅದನ್ನು ಹಂಚುವ ಮೊದಲು ಸಂಪತ್ತು ಸೃಷ್ಟಿಸಬೇಕು. ‘ಕಲ್ಯಾಣ’ ಎಂದರೆ ಬಡ ವರ್ಗಗಳ ಬಗ್ಗೆ ಕಾಳಜಿ ವಹಿಸುವುದು” ಎಂದು ಕಾಂಗ್ರೆಸ್ ಹೇಳಿದೆ.

ದೇಶದಾದ್ಯಂತ ಜಾತಿ ಗಣತಿ:

ಕಾಂಗ್ರೆಸ್‌ನ ಪ್ರಮುಖ ಆಶ್ವಾಸನೆಯೆಂದರೆ ಜಾತಿ ಗಣತಿ; ನವೆಂಬರ್‌ನಲ್ಲಿ ಬಿಹಾರ ಸರ್ಕಾರದ ರಾಜ್ಯವ್ಯಾಪಿ ಸಮೀಕ್ಷೆ ಬಿಡುಗಡೆಯಾದಾಗಿನಿಂದ ದೇಶದಾದ್ಯಂತ ಈ ವಿಚಾರ ರಾಜಕೀಯದ ಬಿಸಿ ವಿಷಯವಾಗಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿಗಳು, ಉಪಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಗುರುತಿಸಲು ಮತ್ತು ಎಣಿಸಲು ರಾಷ್ಟ್ರವ್ಯಾಪಿ ಜನಗಣತಿಯನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದೆ. ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಅಂಚಿನಲ್ಲಿರುವ ಗುಂಪುಗಳಿಗೆ; ಅಂದರೆ, ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳ ಕೋಟಾದ ಮೇಲೆ ಶೇಕಡಾ 50 ರಷ್ಟು ಮಿತಿಯನ್ನು ಹೆಚ್ಚಿಸಲು ಪ್ರತಿಜ್ಞೆ ಮಾಡಿದೆ.

ರೈತರಿಗೆ ಎಂಎಸ್‌ಪಿ

ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ)  ಜಾರಿಗೆ ತರುವುದಾಗಿ ಪಕ್ಷವು ಭರವಸೆ ನೀಡಿದೆ. ಎಂಎಸ್‌ಪಿ ಸಮಸ್ಯೆಯು 2020ರಿಂದ ರೈತರ ಪ್ರತಿಭಟನೆಯ ಮುಖ್ಯ ವಿಷಯವಾಗಿದೆ. ದ್ರದ (ಈಗ ರದ್ದುಪಡಿಸಿದ) ಮೂರು ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಲಕ್ಷಾಂತರ ಜನರು ತಿಂಗಳ ಕಾಲ ಆಂದೋಲನ ನಡೆಸಿದರು.

ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಸೂತ್ರದ ಆಧಾರದ ಮೇಲೆ ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಗೆ ಶಾಶ್ವತ ಕಾನೂನು ಖಾತರಿ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

ಬಡತನ ನಿರ್ಮೂಲನೆ:

ಮುಂದಿನ ದಶಕದಲ್ಲಿ 23 ಕೋಟಿ ಜನರ ಭವಿಷ್ಯವನ್ನು ಸುಧಾರಿಸುವ ಮೂಲಕ ಬಡತನವನ್ನು ತೊಡೆದುಹಾಕಲು ಪಕ್ಷವು ಪ್ರತಿಜ್ಞೆ ಮಾಡಿದೆ. ಚಿದಂಬರಂ ಬಿಜೆಪಿಯನ್ನು “ಶ್ರೀಮಂತರ, ಶ್ರೀಮಂತರಿಂದ ಮತ್ತು ಶ್ರೀಮಂತರ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು. ಇದು “ಮೇಲಿನ ಶೇಕಡಾ 1ರಷ್ಟು ಜನರ ಹಿತಾಸಕ್ತಿಗಳಿಂದ ನಡೆಸಲ್ಪಡುತ್ತದೆ” ಎಂದು ಹೇಳಿದರು.

“ಆದರೆ ನಾವು ಕೆಳ ಹಂತದ ಶೇಕಡಾ 50ರಷ್ಟು ಜನರನ್ನು ನೋಡುತ್ತೇವೆ. ಶೇಕಡಾ 50 ರಷ್ಟು ಜನರು ಮುಖ್ಯವಾಗಿದ್ದಾರೆ. ಈ ದೇಶದಲ್ಲಿ 23 ಕೋಟಿ ಜನರು ಇನ್ನೂ ಬಡವರು ಎಂದು ಅಂದಾಜಿಸಲಾಗಿದೆ. ಯುಪಿಎ 24 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿತು. ನಾವು ಭರವಸೆ ನೀಡುತ್ತೇವೆ, 2024 ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ 10 ವರ್ಷಗಳಲ್ಲಿ 23 ಕೋಟಿ ಜನರನ್ನು ಮೇಲಕ್ಕೆ ಎತ್ತುತ್ತೇವೆ” ಎಂದರು.

ಈ ಭರವಸೆಯ ಭಾಗವಾಗಿ, ಮಹಿಳೆಯರ ಸಬಲೀಕರಣಕ್ಕಾಗಿ ಪ್ರತಿ ಬಡ ಕುಟುಂಬದ ಹಿರಿಯ ಮಹಿಳಾ ಸದಸ್ಯರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿಗಳ ಬೇಷರತ್ತಾದ ನಗದು ವರ್ಗಾವಣೆಯನ್ನು ಒದಗಿಸಲು ‘ಮಹಾಲಕ್ಷ್ಮಿ’ ಯೋಜನೆಯನ್ನು ಪ್ರಾರಂಭಿಸುವುದಾಗಿ ಕಾಂಗ್ರೆಸ್ ಹೇಳಿದೆ. ಫಲಾನುಭವಿಗಳನ್ನು ಆದಾಯ ಪಿರಮಿಡ್‌ನ ಕೆಳಗಿನ ಹಂತದಿಂದ ಗುರುತಿಸಲಾಗುತ್ತದೆ.

ಆದಾಯ ಮತ್ತು ಅವಕಾಶಗಳ ಅಸಮಾನತೆ ಭಾರತದ ಕಹಿ ಸತ್ಯವಾಗಿ ಉಳಿದಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಮೂಲ ಆದಾಯದ ಭರವಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಯಾವುದೇ ಸರ್ಕಾರದ ನೈತಿಕ ಮತ್ತು ರಾಜಕೀಯ ಜವಾಬ್ದಾರಿಯಾಗಿದೆ ಎಂದು ಪಕ್ಷ ಹೇಳಿದೆ.

ರಾಷ್ಟ್ರೀಯ ಭದ್ರತೆ:

ಚೀನಾದೊಂದಿಗಿನ ದೇಶದ ಗಡಿಯಲ್ಲಿ ಯಥಾಸ್ಥಿತಿಯನ್ನು ಪುನಃಸ್ಥಾಪಿಸಲು ಮತ್ತು “ಈ ಹಿಂದೆ ಎರಡೂ ಸೇನೆಗಳು ಗಸ್ತು ತಿರುಗುತ್ತಿದ್ದ ಪ್ರದೇಶಗಳನ್ನು ನಮ್ಮ ಸೈನಿಕರಿಗೆ ಮತ್ತೆ ಪ್ರವೇಶಿಸಬಹುದೆಂದು ಖಚಿತಪಡಿಸಿಕೊಳ್ಳಲು ಕೆಲಸ ಮಾಡುವುದಾಗಿ ಪಕ್ಷ ಹೇಳಿದೆ.

ಆರೋಗ್ಯ ರಕ್ಷಣೆ

ರೋಗನಿರ್ಣಯ, ಶಸ್ತ್ರಚಿಕಿತ್ಸೆ ಮತ್ತು ಔಷಧಿಗಳ ವೆಚ್ಚ ಸೇರಿದಂತೆ ಸಾರ್ವತ್ರಿಕ ಉಚಿತ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಪಕ್ಷ ಹೇಳಿದೆ. ಇದು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಮಾದರಿಯಂತೆ ₹25 ಲಕ್ಷದವರೆಗಿನ ನಗದು ರಹಿತ ವಿಮೆಯೊಂದಿಗೆ ಬರಲಿದೆ.

“ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಎಂಎಚ್‌ಸಿಗಳು, ಔಷಧಾಲಯಗಳು ಮತ್ತು ಆರೋಗ್ಯ ಶಿಬಿರಗಳಂತಹ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯವು ಸಾರ್ವತ್ರಿಕ ಮತ್ತು ಉಚಿತವಾಗಿರುತ್ತದೆ ಎಂದು ನಾವು ಭರವಸೆ ನೀಡುತ್ತೇವೆ. ಉಚಿತ ಆರೋಗ್ಯ ರಕ್ಷಣೆಯು ಪರೀಕ್ಷೆ, ರೋಗನಿರ್ಣಯ, ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಔಷಧಗಳು, ಪುನರ್ವಸತಿ, ಮತ್ತು ಉಪಶಾಮಕ ಆರೈಕೆ ನೀಡಲಾಗುವುದು ಎಂದು ಭರವಸೆ ನೀಡಿದೆ.

ಅಸಿಸ್ಟೆಡ್ ಲಿವಿಂಗ್ ಅಂಡ್ ಕೇರ್ ಸೆಂಟರ್ ಕೂಡ ಸ್ಥಾಪಿಸುವ ಜೊತಗೆ, ಅಂಗವಿಕಲರಿಗೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಅವರಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ

ಇತರ ಪ್ರಮುಖ ಅಂಶಗಳು:

ಬೃಹತ್ ಸಾಲಗಳೊಂದಿಗೆ ಹೋರಾಡುತ್ತಿರುವ ನಿರುದ್ಯೋಗಿ ಯುವಕರ ನಡುವೆ ಬಲವಾಗಿ ಪ್ರತಿಧ್ವನಿಸುವ ಒಂದು ಕ್ರಮದಲ್ಲಿ, ಪಕ್ಷವು “ಒಂದು ಬಾರಿ ಪರಿಹಾರದ ಕ್ರಮವಾಗಿ” ಪಾವತಿಸದ ಬಡ್ಡಿ ಸೇರಿದಂತೆ ಎಲ್ಲ ವಿದ್ಯಾರ್ಥಿ ಶೈಕ್ಷಣಿಕ ಸಾಲಗಳನ್ನು ಮನ್ನಾ ಮಾಡುವುದಾಗಿ ಹೇಳಿದೆ. ಈ ಮೊತ್ತವನ್ನು ಮಾರ್ಚ್ 15 ರಂದು ಲೆಕ್ಕ ಹಾಕಲಾಗುತ್ತದೆ. ಬ್ಯಾಂಕ್‌ಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ; ಕಚ್ಚತೀವು ಮೇಲೆ ಹಕ್ಕು ಸಾಧಿಸಲು ಭಾರತಕ್ಕೆ ಯಾವುದೇ ಆಧಾರವಿಲ್ಲ: ಶ್ರೀಲಂಕಾ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...