Homeಮುಖಪುಟಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಉದ್ಯೋಗ ಸೃಷ್ಟಿ, ಜಾತಿ ಗಣತಿಯ ಭರವಸೆ

ಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಉದ್ಯೋಗ ಸೃಷ್ಟಿ, ಜಾತಿ ಗಣತಿಯ ಭರವಸೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ.
ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಯವರು ದೆಹಲಿಯ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರು ಪ್ರಣಾಳಿಕೆ ಸಿದ್ಧಪಡಿಸಿದ ಸಮಿತಿಯ ನೇತೃತ್ವ ವಹಿಸಿದ್ದರು.

“ಈ ಪ್ರಣಾಳಿಕೆಯು ದೇಶದ ರಾಜಕೀಯ ಇತಿಹಾಸದಲ್ಲಿ ‘ನ್ಯಾಯ ಕಾ ದಾಸ್ತಾವೆಜ್’ (ನ್ಯಾಯಕ್ಕಾಗಿ ದಾಖಲೆ) ಆಗಿರುತ್ತದೆ. ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಐದು ಸ್ತಂಭಗಳಾದ ಯುವ, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ 25 ಗ್ಯಾರಂಟಿಗಳನ್ನು ಒಳಗೊಂಡಿದೆ” ಎಂದು ಖರ್ಗೆ ಹೇಳಿದರು.

ಪ್ರಣಾಳಿಕೆಯ ಒಟ್ಟಾರೆ ಆಶಯವು, ಉದ್ಯೋಗ, ಸಂಪತ್ತು ಕ್ರೋಢೀಕರಣ ಮತ್ತು ಕಲ್ಯಾಣವನ್ನು ಆಧರಿಸಿದೆ ಎಂದು ಪಕ್ಷ ಹೇಳಿದೆ.

“ಉದ್ಯೋಗ ಎಂದರೆ ನೀವು ಉದ್ಯೋಗಗಳನ್ನು ನೀಡಬೇಕು. ಅದನ್ನು ಹಂಚುವ ಮೊದಲು ಸಂಪತ್ತು ಸೃಷ್ಟಿಸಬೇಕು. ‘ಕಲ್ಯಾಣ’ ಎಂದರೆ ಬಡ ವರ್ಗಗಳ ಬಗ್ಗೆ ಕಾಳಜಿ ವಹಿಸುವುದು” ಎಂದು ಕಾಂಗ್ರೆಸ್ ಹೇಳಿದೆ.

ದೇಶದಾದ್ಯಂತ ಜಾತಿ ಗಣತಿ:

ಕಾಂಗ್ರೆಸ್‌ನ ಪ್ರಮುಖ ಆಶ್ವಾಸನೆಯೆಂದರೆ ಜಾತಿ ಗಣತಿ; ನವೆಂಬರ್‌ನಲ್ಲಿ ಬಿಹಾರ ಸರ್ಕಾರದ ರಾಜ್ಯವ್ಯಾಪಿ ಸಮೀಕ್ಷೆ ಬಿಡುಗಡೆಯಾದಾಗಿನಿಂದ ದೇಶದಾದ್ಯಂತ ಈ ವಿಚಾರ ರಾಜಕೀಯದ ಬಿಸಿ ವಿಷಯವಾಗಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿಗಳು, ಉಪಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಗುರುತಿಸಲು ಮತ್ತು ಎಣಿಸಲು ರಾಷ್ಟ್ರವ್ಯಾಪಿ ಜನಗಣತಿಯನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದೆ. ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಅಂಚಿನಲ್ಲಿರುವ ಗುಂಪುಗಳಿಗೆ; ಅಂದರೆ, ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳ ಕೋಟಾದ ಮೇಲೆ ಶೇಕಡಾ 50 ರಷ್ಟು ಮಿತಿಯನ್ನು ಹೆಚ್ಚಿಸಲು ಪ್ರತಿಜ್ಞೆ ಮಾಡಿದೆ.

ರೈತರಿಗೆ ಎಂಎಸ್‌ಪಿ

ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ)  ಜಾರಿಗೆ ತರುವುದಾಗಿ ಪಕ್ಷವು ಭರವಸೆ ನೀಡಿದೆ. ಎಂಎಸ್‌ಪಿ ಸಮಸ್ಯೆಯು 2020ರಿಂದ ರೈತರ ಪ್ರತಿಭಟನೆಯ ಮುಖ್ಯ ವಿಷಯವಾಗಿದೆ. ದ್ರದ (ಈಗ ರದ್ದುಪಡಿಸಿದ) ಮೂರು ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಲಕ್ಷಾಂತರ ಜನರು ತಿಂಗಳ ಕಾಲ ಆಂದೋಲನ ನಡೆಸಿದರು.

ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಸೂತ್ರದ ಆಧಾರದ ಮೇಲೆ ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಗೆ ಶಾಶ್ವತ ಕಾನೂನು ಖಾತರಿ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

ಬಡತನ ನಿರ್ಮೂಲನೆ:

ಮುಂದಿನ ದಶಕದಲ್ಲಿ 23 ಕೋಟಿ ಜನರ ಭವಿಷ್ಯವನ್ನು ಸುಧಾರಿಸುವ ಮೂಲಕ ಬಡತನವನ್ನು ತೊಡೆದುಹಾಕಲು ಪಕ್ಷವು ಪ್ರತಿಜ್ಞೆ ಮಾಡಿದೆ. ಚಿದಂಬರಂ ಬಿಜೆಪಿಯನ್ನು “ಶ್ರೀಮಂತರ, ಶ್ರೀಮಂತರಿಂದ ಮತ್ತು ಶ್ರೀಮಂತರ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು. ಇದು “ಮೇಲಿನ ಶೇಕಡಾ 1ರಷ್ಟು ಜನರ ಹಿತಾಸಕ್ತಿಗಳಿಂದ ನಡೆಸಲ್ಪಡುತ್ತದೆ” ಎಂದು ಹೇಳಿದರು.

“ಆದರೆ ನಾವು ಕೆಳ ಹಂತದ ಶೇಕಡಾ 50ರಷ್ಟು ಜನರನ್ನು ನೋಡುತ್ತೇವೆ. ಶೇಕಡಾ 50 ರಷ್ಟು ಜನರು ಮುಖ್ಯವಾಗಿದ್ದಾರೆ. ಈ ದೇಶದಲ್ಲಿ 23 ಕೋಟಿ ಜನರು ಇನ್ನೂ ಬಡವರು ಎಂದು ಅಂದಾಜಿಸಲಾಗಿದೆ. ಯುಪಿಎ 24 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿತು. ನಾವು ಭರವಸೆ ನೀಡುತ್ತೇವೆ, 2024 ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ 10 ವರ್ಷಗಳಲ್ಲಿ 23 ಕೋಟಿ ಜನರನ್ನು ಮೇಲಕ್ಕೆ ಎತ್ತುತ್ತೇವೆ” ಎಂದರು.

ಈ ಭರವಸೆಯ ಭಾಗವಾಗಿ, ಮಹಿಳೆಯರ ಸಬಲೀಕರಣಕ್ಕಾಗಿ ಪ್ರತಿ ಬಡ ಕುಟುಂಬದ ಹಿರಿಯ ಮಹಿಳಾ ಸದಸ್ಯರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿಗಳ ಬೇಷರತ್ತಾದ ನಗದು ವರ್ಗಾವಣೆಯನ್ನು ಒದಗಿಸಲು ‘ಮಹಾಲಕ್ಷ್ಮಿ’ ಯೋಜನೆಯನ್ನು ಪ್ರಾರಂಭಿಸುವುದಾಗಿ ಕಾಂಗ್ರೆಸ್ ಹೇಳಿದೆ. ಫಲಾನುಭವಿಗಳನ್ನು ಆದಾಯ ಪಿರಮಿಡ್‌ನ ಕೆಳಗಿನ ಹಂತದಿಂದ ಗುರುತಿಸಲಾಗುತ್ತದೆ.

ಆದಾಯ ಮತ್ತು ಅವಕಾಶಗಳ ಅಸಮಾನತೆ ಭಾರತದ ಕಹಿ ಸತ್ಯವಾಗಿ ಉಳಿದಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಮೂಲ ಆದಾಯದ ಭರವಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಯಾವುದೇ ಸರ್ಕಾರದ ನೈತಿಕ ಮತ್ತು ರಾಜಕೀಯ ಜವಾಬ್ದಾರಿಯಾಗಿದೆ ಎಂದು ಪಕ್ಷ ಹೇಳಿದೆ.

ರಾಷ್ಟ್ರೀಯ ಭದ್ರತೆ:

ಚೀನಾದೊಂದಿಗಿನ ದೇಶದ ಗಡಿಯಲ್ಲಿ ಯಥಾಸ್ಥಿತಿಯನ್ನು ಪುನಃಸ್ಥಾಪಿಸಲು ಮತ್ತು “ಈ ಹಿಂದೆ ಎರಡೂ ಸೇನೆಗಳು ಗಸ್ತು ತಿರುಗುತ್ತಿದ್ದ ಪ್ರದೇಶಗಳನ್ನು ನಮ್ಮ ಸೈನಿಕರಿಗೆ ಮತ್ತೆ ಪ್ರವೇಶಿಸಬಹುದೆಂದು ಖಚಿತಪಡಿಸಿಕೊಳ್ಳಲು ಕೆಲಸ ಮಾಡುವುದಾಗಿ ಪಕ್ಷ ಹೇಳಿದೆ.

ಆರೋಗ್ಯ ರಕ್ಷಣೆ

ರೋಗನಿರ್ಣಯ, ಶಸ್ತ್ರಚಿಕಿತ್ಸೆ ಮತ್ತು ಔಷಧಿಗಳ ವೆಚ್ಚ ಸೇರಿದಂತೆ ಸಾರ್ವತ್ರಿಕ ಉಚಿತ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಪಕ್ಷ ಹೇಳಿದೆ. ಇದು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಮಾದರಿಯಂತೆ ₹25 ಲಕ್ಷದವರೆಗಿನ ನಗದು ರಹಿತ ವಿಮೆಯೊಂದಿಗೆ ಬರಲಿದೆ.

“ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಎಂಎಚ್‌ಸಿಗಳು, ಔಷಧಾಲಯಗಳು ಮತ್ತು ಆರೋಗ್ಯ ಶಿಬಿರಗಳಂತಹ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯವು ಸಾರ್ವತ್ರಿಕ ಮತ್ತು ಉಚಿತವಾಗಿರುತ್ತದೆ ಎಂದು ನಾವು ಭರವಸೆ ನೀಡುತ್ತೇವೆ. ಉಚಿತ ಆರೋಗ್ಯ ರಕ್ಷಣೆಯು ಪರೀಕ್ಷೆ, ರೋಗನಿರ್ಣಯ, ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಔಷಧಗಳು, ಪುನರ್ವಸತಿ, ಮತ್ತು ಉಪಶಾಮಕ ಆರೈಕೆ ನೀಡಲಾಗುವುದು ಎಂದು ಭರವಸೆ ನೀಡಿದೆ.

ಅಸಿಸ್ಟೆಡ್ ಲಿವಿಂಗ್ ಅಂಡ್ ಕೇರ್ ಸೆಂಟರ್ ಕೂಡ ಸ್ಥಾಪಿಸುವ ಜೊತಗೆ, ಅಂಗವಿಕಲರಿಗೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಅವರಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ

ಇತರ ಪ್ರಮುಖ ಅಂಶಗಳು:

ಬೃಹತ್ ಸಾಲಗಳೊಂದಿಗೆ ಹೋರಾಡುತ್ತಿರುವ ನಿರುದ್ಯೋಗಿ ಯುವಕರ ನಡುವೆ ಬಲವಾಗಿ ಪ್ರತಿಧ್ವನಿಸುವ ಒಂದು ಕ್ರಮದಲ್ಲಿ, ಪಕ್ಷವು “ಒಂದು ಬಾರಿ ಪರಿಹಾರದ ಕ್ರಮವಾಗಿ” ಪಾವತಿಸದ ಬಡ್ಡಿ ಸೇರಿದಂತೆ ಎಲ್ಲ ವಿದ್ಯಾರ್ಥಿ ಶೈಕ್ಷಣಿಕ ಸಾಲಗಳನ್ನು ಮನ್ನಾ ಮಾಡುವುದಾಗಿ ಹೇಳಿದೆ. ಈ ಮೊತ್ತವನ್ನು ಮಾರ್ಚ್ 15 ರಂದು ಲೆಕ್ಕ ಹಾಕಲಾಗುತ್ತದೆ. ಬ್ಯಾಂಕ್‌ಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ; ಕಚ್ಚತೀವು ಮೇಲೆ ಹಕ್ಕು ಸಾಧಿಸಲು ಭಾರತಕ್ಕೆ ಯಾವುದೇ ಆಧಾರವಿಲ್ಲ: ಶ್ರೀಲಂಕಾ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...