HomeUncategorizedಲೋಕಸಭೆ ಚುನಾವಣೆ 2024 | ಇಳಿಕೆಯಾದ ಅನಿವಾಸಿ ಭಾರತೀಯರ ಮತದಾನದ ಪ್ರಮಾಣ

ಲೋಕಸಭೆ ಚುನಾವಣೆ 2024 | ಇಳಿಕೆಯಾದ ಅನಿವಾಸಿ ಭಾರತೀಯರ ಮತದಾನದ ಪ್ರಮಾಣ

- Advertisement -
- Advertisement -

ವಿದೇಶದಲ್ಲಿ ನೆಲೆಸಿರುವ ಭಾರತೀಯರು 2024ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿ ಅಂಶವು ಬಹಿರಂಗಪಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ 25.64% ಅನಿವಾಸಿ ಭಾರತೀಯರು ಮತದಾನ ಮಾಡಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ ಇದು 2.47% ಕ್ಕೆ ಇಳಿದಿದೆ ಎಂದು ಆಯೋಗದ ವಿಶ್ಲೇಷಣೆ ಹೇಳಿದೆ. ಲೋಕಸಭೆ ಚುನಾವಣೆ 2024

ಈ ವರ್ಷದ ಲೋಕಸಭೆ ಚುನಾವಣೆಗೆ 1,19,374 ವಿದೇಶಿ ನೋಂದಾಯಿತ ಮತದಾರರಿದ್ದು, ಅವರಲ್ಲಿ 2,958 ಮಂದಿ ಮಾತ್ರ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಅದು ಹೇಳಿದೆ. 2019 ರಲ್ಲಿ, ಸಾಗರೋತ್ತರ ನೋಂದಾಯಿತ ಮತದಾರರ ಸಂಖ್ಯೆ 99,844 ಆಗಿದ್ದು, ಅವರಲ್ಲಿ 25,606 ಮಂದಿ ಮತ ಚಲಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವೇನೆಂದರೆ, 2019 ಮತ್ತು 2024 ಎರಡರಲ್ಲೂ ವಿದೇಶದಲ್ಲಿ ವಾಸಿಸುವ ನೋಂದಾಯಿತ ಮತದಾರರಲ್ಲಿ ಹೆಚ್ಚಿನವರು ಕೇರಳದವರಾಗಿದ್ದಾರೆ.

2024 ರಲ್ಲಿ, ವಿದೇಶದಲ್ಲಿ ನೆಲೆಸಿರುವ ಕೇರಳದ 89,839 ಮತದಾರರಲ್ಲಿ ಕೇವಲ 2,670 ಜನರು ಅಥವಾ ಕೇವಲ 2.97% ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. 2019 ರಲ್ಲಿ ಕೇರಳ ಅನಿವಾಸಿ ಭಾರತೀಯ ಮತದಾರರ ಅಂಕಿ ಅಂಶವು 29.13% ರಷ್ಟಿತ್ತು, ಒಟ್ಟು 87,651 ಸಾಗರೋತ್ತರ ಮತದಾರರಲ್ಲಿ 25,534 ಜನರು ಮತ ಚಲಾಯಿಸಿದ್ದರು.

ಮತ್ತೊಂದೆಡೆ, ಆಂಧ್ರಪ್ರದೇಶದ ಸಾಗರೋತ್ತರ ಭಾರತೀಯರ ಮತದಾನದ ಪ್ರಮಾಣವು ಈ ವರ್ಷ ಸುಧಾರಿಸಿದೆ. 2024 ರ ಚುನಾವಣೆಯಲ್ಲಿ, 7,927 ರಲ್ಲಿ 195 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಆದರೆ, 2019 ರಲ್ಲಿ 5,090 ಮತದಾರಲ್ಲಿ ಮತ ಚಲಾಯಿಸಿದವರು ಕೇಲವ ಐವರು ಮಾತ್ರ. ಲೋಕಸಭೆ ಚುನಾವಣೆ 2024

ಅನಿವಾಸಿ ಮತದಾರರು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಬಹುದಾಗಿದೆ. ಅವರು ಭಾರತದ ಪ್ರಜೆಗಳಾಗಿದ್ದರೆ, ಬೇರೆ ಯಾವುದೇ ದೇಶದ ಪೌರತ್ವವನ್ನು ಪಡೆದಿಲ್ಲವಾಗಿದ್ದರೆ ಅವರು ಮತ ಚಲಾವಣೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಗಣನೀಯ ಕಡಿಮೆ ಅಂತರದೊಂದಿಗೆ ಗೆದ್ದಿತ್ತು. ಮೈತ್ರಿಕೂಟವು 293 ಸ್ಥಾನಗಳನ್ನು ಗೆದ್ದುಕೊಂಡಿತ್ತು ಮತ್ತು ಬಿಜೆಪಿ ಸ್ವಂತ ಬಲದಲ್ಲಿ ಬಹುಮತಕ್ಕೇರಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ವಿಪಕ್ಷಗಳ ಇಂಡಿಯಾ ಮೈತ್ರಿಯು 234 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...