Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...