Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...