Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...