Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...