HomeUncategorizedಲೋಕಸಭಾ ಚುನಾವಣೆ 2024: ಮಣಿಪುರದ ಮತಗಟ್ಟೆಯೊಂದರ ಬಳಿ ಗುಂಡಿನ ದಾಳಿ

ಲೋಕಸಭಾ ಚುನಾವಣೆ 2024: ಮಣಿಪುರದ ಮತಗಟ್ಟೆಯೊಂದರ ಬಳಿ ಗುಂಡಿನ ದಾಳಿ

- Advertisement -
- Advertisement -

ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರದ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಜಾಲತಾಣಗಳಲ್ಲಿ ವೈರಲ್ ಆಗಿರುವ 25 ಸೆಕೆಂಡ್‌ಗಳ ವೀಡಿಯೋದಲ್ಲಿ ಮತಗಟ್ಟೆಯಲ್ಲಿನ ಗದ್ದಲವನ್ನು ನೋಡಬಹುದಾಗಿದೆ.

ಎರಡು ಸುತ್ತಿನ ಗುಂಡಿನ ಶಬ್ದದ ನಂತರ ಜನರು ಕಿರುಚಾಡುತ್ತಾ ಓಡಿದ್ದಾರೆ; ನಂತರ ಮೂರನೇ ಸುತ್ತಿನ ಗುಂಡಿನ ಶಬ್ದ ಕೇಳಿಸಿದೆ. ಇದರ ನಂತರ, ವೀಡಿಯೊವನ್ನು ಚಿತ್ರೀಕರಿಸುವ ವ್ಯಕ್ತಿಯು ಬಾಗಿಲಿನ ಹಿಂದೆ ಅವಿತಿದ್ದು, ಗುಂಡಿನ ಕ್ಷಿಪ್ರ ವಿನಿಮಯವು ನಿಲ್ಲುವ ಮೊದಲು 10 ಸೆಕೆಂಡುಗಳವರೆಗೆ ಮುಂದುವರಿಯುತ್ತದೆ.

‘ಇಂಫಾಲದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರದ ಪರಿಣಾಮ; ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಲ್ಲಿದೆ? ಅರಂಬಾಯಿ ತೆಂಗೋಲ್ ಭಾರತೀಯ ಸಂವಿಧಾನದ ಕಾನೂನಿಗೆ ಮೇಲಿದೆಯೇ’ ಎಂದು ಬೆಂ ಸಿತ್ಲೌ ತಹಚಾನು ಎಂಬುವವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಯಾವ ಎರಡು ಸ್ಥಾನಗಳಲ್ಲಿ ಗುಂಡು ಹಾರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. 2019ರ ಚುನಾವಣೆಯಲ್ಲಿ ಬಿಜೆಪಿಯ ತೌನೋಜಮ್ ಬಸಂತ ಕುಮಾರ್ ಸಿಂಗ್ ಅವರು ಒಳ ಮಣಿಪುರ ಸ್ಥಾನದಿಂದ ಗೆದ್ದಿದ್ದಾರೆ. ಈ ಕ್ಷೇತ್ರದಿಂದ ಬಸಂತ ಕುಮಾರ್ ಸಿಂಗ್ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ.

ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾದ ಹೊರ ಸ್ಥಾನವನ್ನು ನಾಗಾ ಪೀಪಲ್ಸ್ ಫ್ರಂಟ್ ನಾಯಕ ಕಚುಯಿ ತಿಮೋತಿ ಝಿಮಿಕ್ ಅವರು ಗೆದ್ದಿದ್ದಾರೆ. ಅವರು ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಈ ಚುನಾವಣೆಯಲ್ಲಿ ಎನ್‌ಪಿಎಫ್ ಬಿಜೆಪಿ ಮಿತ್ರಪಕ್ಷವಾಗಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವು ಜನಾಂಗೀಯ ಹಿಂಸಾಚಾರವನ್ನು ಎದುರಿಸುತ್ತಿದೆ. ಎರಡು ಜನಾಂಗೀಯ ಸಮುದಾಯಗಳ ನಡುವಿನ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹತ್ತಾರು ಸಾವಿರ ಜನರು ನೆಲೆ ಕಳೆದುಕೊಂಡಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಎರಡು ಹಂತದ ಚುನಾವಣೆಯ ಮೊದಲ ಚುನಾವಣೆಗೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ; ಹೊರ ಮಣಿಪುರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಸ್ಥಳಾಂತರಗೊಂಡ ಮತದಾರರಿಗೆ ಅವಕಾಶ ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ 22 ಮತ್ತು ಕಾಂಗ್‌ಪೋಕ್ಪಿಯಲ್ಲಿ 24 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾನದ ನಂತರ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ಮಣಿಪುರದ ಎರಡೂ ಸ್ಥಾನಗಳು ಖಂಡಿತವಾಗಿಯೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಮಣಿಪುರವು ಪ್ರಕ್ಷುಬ್ಧ ಸಮಯವನ್ನು ಎದುರಿಸುತ್ತಿದೆ. ಆದರೆ, ಕಳೆದ ನಾಲ್ಕೈದು ತಿಂಗಳಲ್ಲಿ ಶಾಂತಿಯುತವಾಗಿದೆ. ಇಲ್ಲಿ ಶಾಂತಿ ಪುನಃಸ್ಥಾಪಿಸಲಾಗಿದೆ ಮತ್ತು ಅದಕ್ಕಾಗಿಯೇ ನಾವು ಚುನಾವಣೆಯನ್ನು ನಡೆಸುತ್ತಿದ್ದೇವೆ” ಎಂದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...