HomeUncategorizedಲೋಕಸಭಾ ಚುನಾವಣೆ 2024: ಮಣಿಪುರದ ಮತಗಟ್ಟೆಯೊಂದರ ಬಳಿ ಗುಂಡಿನ ದಾಳಿ

ಲೋಕಸಭಾ ಚುನಾವಣೆ 2024: ಮಣಿಪುರದ ಮತಗಟ್ಟೆಯೊಂದರ ಬಳಿ ಗುಂಡಿನ ದಾಳಿ

- Advertisement -
- Advertisement -

ಜನಾಂಗೀಯ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರದ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಜಾಲತಾಣಗಳಲ್ಲಿ ವೈರಲ್ ಆಗಿರುವ 25 ಸೆಕೆಂಡ್‌ಗಳ ವೀಡಿಯೋದಲ್ಲಿ ಮತಗಟ್ಟೆಯಲ್ಲಿನ ಗದ್ದಲವನ್ನು ನೋಡಬಹುದಾಗಿದೆ.

ಎರಡು ಸುತ್ತಿನ ಗುಂಡಿನ ಶಬ್ದದ ನಂತರ ಜನರು ಕಿರುಚಾಡುತ್ತಾ ಓಡಿದ್ದಾರೆ; ನಂತರ ಮೂರನೇ ಸುತ್ತಿನ ಗುಂಡಿನ ಶಬ್ದ ಕೇಳಿಸಿದೆ. ಇದರ ನಂತರ, ವೀಡಿಯೊವನ್ನು ಚಿತ್ರೀಕರಿಸುವ ವ್ಯಕ್ತಿಯು ಬಾಗಿಲಿನ ಹಿಂದೆ ಅವಿತಿದ್ದು, ಗುಂಡಿನ ಕ್ಷಿಪ್ರ ವಿನಿಮಯವು ನಿಲ್ಲುವ ಮೊದಲು 10 ಸೆಕೆಂಡುಗಳವರೆಗೆ ಮುಂದುವರಿಯುತ್ತದೆ.

‘ಇಂಫಾಲದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರದ ಪರಿಣಾಮ; ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಲ್ಲಿದೆ? ಅರಂಬಾಯಿ ತೆಂಗೋಲ್ ಭಾರತೀಯ ಸಂವಿಧಾನದ ಕಾನೂನಿಗೆ ಮೇಲಿದೆಯೇ’ ಎಂದು ಬೆಂ ಸಿತ್ಲೌ ತಹಚಾನು ಎಂಬುವವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಯಾವ ಎರಡು ಸ್ಥಾನಗಳಲ್ಲಿ ಗುಂಡು ಹಾರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. 2019ರ ಚುನಾವಣೆಯಲ್ಲಿ ಬಿಜೆಪಿಯ ತೌನೋಜಮ್ ಬಸಂತ ಕುಮಾರ್ ಸಿಂಗ್ ಅವರು ಒಳ ಮಣಿಪುರ ಸ್ಥಾನದಿಂದ ಗೆದ್ದಿದ್ದಾರೆ. ಈ ಕ್ಷೇತ್ರದಿಂದ ಬಸಂತ ಕುಮಾರ್ ಸಿಂಗ್ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ.

ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾದ ಹೊರ ಸ್ಥಾನವನ್ನು ನಾಗಾ ಪೀಪಲ್ಸ್ ಫ್ರಂಟ್ ನಾಯಕ ಕಚುಯಿ ತಿಮೋತಿ ಝಿಮಿಕ್ ಅವರು ಗೆದ್ದಿದ್ದಾರೆ. ಅವರು ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಈ ಚುನಾವಣೆಯಲ್ಲಿ ಎನ್‌ಪಿಎಫ್ ಬಿಜೆಪಿ ಮಿತ್ರಪಕ್ಷವಾಗಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವು ಜನಾಂಗೀಯ ಹಿಂಸಾಚಾರವನ್ನು ಎದುರಿಸುತ್ತಿದೆ. ಎರಡು ಜನಾಂಗೀಯ ಸಮುದಾಯಗಳ ನಡುವಿನ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹತ್ತಾರು ಸಾವಿರ ಜನರು ನೆಲೆ ಕಳೆದುಕೊಂಡಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಎರಡು ಹಂತದ ಚುನಾವಣೆಯ ಮೊದಲ ಚುನಾವಣೆಗೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ; ಹೊರ ಮಣಿಪುರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಸ್ಥಳಾಂತರಗೊಂಡ ಮತದಾರರಿಗೆ ಅವಕಾಶ ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ 22 ಮತ್ತು ಕಾಂಗ್‌ಪೋಕ್ಪಿಯಲ್ಲಿ 24 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾನದ ನಂತರ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ಮಣಿಪುರದ ಎರಡೂ ಸ್ಥಾನಗಳು ಖಂಡಿತವಾಗಿಯೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಮಣಿಪುರವು ಪ್ರಕ್ಷುಬ್ಧ ಸಮಯವನ್ನು ಎದುರಿಸುತ್ತಿದೆ. ಆದರೆ, ಕಳೆದ ನಾಲ್ಕೈದು ತಿಂಗಳಲ್ಲಿ ಶಾಂತಿಯುತವಾಗಿದೆ. ಇಲ್ಲಿ ಶಾಂತಿ ಪುನಃಸ್ಥಾಪಿಸಲಾಗಿದೆ ಮತ್ತು ಅದಕ್ಕಾಗಿಯೇ ನಾವು ಚುನಾವಣೆಯನ್ನು ನಡೆಸುತ್ತಿದ್ದೇವೆ” ಎಂದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...